
ತಂಡದಲ್ಲಿ ಪ್ರಮುಖ ಬದಲಾವಣೆ ಮಾಡುವ ಸಾಧ್ಯತೆ
ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದರೆ, ಹಾರ್ದಿಕ್ ಪಾಂಡ್ಯ ನಾಯಕನಾಗಿ ಮೊದಲ ಜಯ ಸಾಧಿಸಿದ ದಾಖಲೆ ಮಾಡಲಿದ್ದಾರೆ. ಹೀಗಾಗಿ ಸರಣಿಯನ್ನು ಗೆಲ್ಲಬೇಕಾಗಿರುವುದರಿಂದ ಇಂದಿನ ಪಂದ್ಯದಲ್ಲಿ ಬದಲಾವಣೆಗಳನ್ನು ತರಲಿದ್ದಾರೆ. ಆರಂಭಿಕ ಬ್ಯಾಟ್ಸ್ಮನ್ ರುತುರಾಜ್ ಗಾಯಕ್ವಾಡ್ ಗಾಯಗೊಂಡ ಪರಿಣಾಮ ಮೊದಲ ಟಿ20 ಪಂದ್ಯದಲ್ಲಿ ಬ್ಯಾಟಿಂಗ್ಗೆ ತೆರಳಲಿಲ್ಲ.
"ರುತುರಾಜ್ಗೆ ಕಾಫ್ ನಿಗಲ್ ಇರುವುದರಿಂದ ಆತನನ್ನು ಬ್ಯಾಟಿಂಗ್ಗೆ ಕಳುಹಿಸಲಿಲ್ಲ. ನನಗೆ ಆಟಗಾರನ ಆರೋಗ್ಯ ಹೆಚ್ಚು ಮುಖ್ಯ, ಪಂದ್ಯವು ತನ್ನನ್ನು ತಾನೇ ನೋಡಿಕೊಳ್ಳುತ್ತದೆ. ಆದ್ದರಿಂದ ನಾವು ಹೆಚ್ಚಿನ ಬದಲಾವಣೆಯನ್ನು ಮಾಡಲಿಲ್ಲ, ಪ್ರತಿಯೊಬ್ಬರ ಸಂಖ್ಯೆ ಏನೇ ಇರಲಿ ನಾವು ಒಂದು ಸ್ಥಾನ ಮೇಲಕ್ಕೆ ಹೋದೆವು. ರುತು ಅವರನ್ನು ಹೆಚ್ಚು ಅಪಾಯಕ್ಕೆ ಒಳಪಡಿಸದಂತೆ ನೋಡಿಕೊಳ್ಳುವುದು ಮತ್ತು ಅವರೊಂದಿಗೆ ಹೆಚ್ಚಿನ ಅವಕಾಶವನ್ನು ಪಡೆಯುವುದು ಮುಖ್ಯವಾಗಿತ್ತು "ಎಂದು ಭಾರತ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.
Ind vs Ire 2nd T20: ಪಂದ್ಯದ ಪ್ರೆಡಿಕ್ಷನ್, ಡ್ರೀಂ ಟೀಮ್, ಫ್ಯಾಂಟೆಸಿ ಕ್ರಿಕೆಟ್ ಟಿಪ್ಸ್

ಸಂಜು ಸ್ಯಾಮ್ಸನ್ ಓಪನರ್ ಆಗಿ ಕಣಕ್ಕಿಳಿಯುತ್ತಾರ?
ನಾಯಕ ಹಾರ್ದಿಕ್ ಪಾಂಡ್ಯ ಮುಂದಿರುವ ಪ್ರಮುಖ ಸವಾಲೆಂದರೆ ಪ್ಲೇಯಿಂಗ್ ಇಲೆವೆನ್ ಆಯ್ಕೆ ಮಾಡುವುದಾಗಿದೆ. ಐಪಿಎಲ್ ಸರಣಿಯಲ್ಲಿ ಅಮೋಘ ಆಟವಾಡಿದ ಸಂಜು ಸ್ಯಾಮ್ಸನ್ ಗೆ ಯಾಕೆ ಅವಕಾಶ ನೀಡಲಿಲ್ಲ ಎಂಬ ಟೀಕೆಗಳು ದಟ್ಟವಾಗಿವೆ. ಹಾಗಾಗಿ ಸಂಜು ಸ್ಯಾಮ್ಸನ್ ಇಶಾನ್ ಕಿಶನ್ ಜೊತೆ ಓಪನಿಂಗ್ ಕಣಕ್ಕಿಳಿದರು ಆಶ್ಚರ್ಯವಿಲ್ಲ.
ಇನ್ನೊಂದೆಡೆ ಹಲವು ವರ್ಷಗಳಿಂದ ಐಪಿಎಲ್ ನಲ್ಲಿ ಆಡುತ್ತಿರುವ ರಾಹುಲ್ ತ್ರಿಪಾಠಿ ಚೊಚ್ಚಲ ಬಾರಿಗೆ ಭಾರತ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಆದಾಗ್ಯೂ ಇಷ್ಟು ದಿನ ಕಾದು ಪಂದ್ಯವೊಂದರಲ್ಲಿ ಅವಕಾಶ ನೀಡಬೇಕು ಎಂಬ ಅಭಿಪ್ರಾಯವೂ ಇದೆ. ಹಾಗಾಗಿ ಓಪನಿಂಗ್ ತ್ರಿಪಾಠಿ ಆಡಿಸಬೇಕೆಂಬ ಬೇಡಿಕೆಯು ಹೆಚ್ಚಾಗಿದೆ.
ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ ಮತ್ತು ದಿನೇಶ್ ಕಾರ್ತಿಕ್ ಅವರಂತಹ ಆಟಗಾರರು ಟಿ20 ವಿಶ್ವಕಪ್ ಸರಣಿಗೆ ಪ್ರಾಥಮಿಕ ಆಯ್ಕೆದಾರರಾಗಿದ್ದಾರೆ. ಹಾಗಾಗಿ ಅವರಿಗೆ ಮುಂದುವರಿಯಲು ಅವಕಾಶ ನೀಡಬೇಕು. ಕಳೆದ ಪಂದ್ಯದಲ್ಲಿ ದೀಪಕ್ ಹೂಡಾ ಉತ್ತಮವಾಗಿ ಆಡಿದ್ದರಿಂದ ಅವರನ್ನು ತೆಗೆದುಹಾಕಲು ಸಾಧ್ಯವಿಲ್ಲ. ಹೀಗಾಗಿ ಯಾರನ್ನು ಆಯ್ಕೆ ಮಾಡಬೇಕು ಎಂಬ ಗೊಂದಲದಲ್ಲಿ ಹಾರ್ದಿಕ್ ಪಾಂಡ್ಯ ಇದ್ದಾರಂತೆ.
ಬೇಡವಾಗಿದ್ದರೆ ತಂಡಕ್ಕೆ ಯಾಕೆ ಸೇರಿಸಿಕೊಳ್ತೀರಿ: ಕಿಡಿಕಾರಿದ ಆಕಾಶ್ ಚೋಪ್ರ

ಭಾರತ-ಐರ್ಲೆಂಡ್ ಸಂಭಾವ್ಯ ಪ್ಲೇಯಿಂಗ್ 11
ಐರ್ಲೆಂಡ್:
ಪಾಲ್ ಸ್ಟಿರ್ಲಿಂಗ್, ಆಂಡ್ರ್ಯೂ ಬಾಲ್ಬಿರ್ನಿ (ನಾಯಕ), ಕರ್ಟಿಸ್ ಕ್ಯಾಂಫರ್, ಲೋರ್ಕನ್ ಟಕರ್ (ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಜಾರ್ಜ್ ಡಾಕ್ರೆಲ್, ಕ್ರೇಗ್ ಯಂಗ್, ಆಂಡಿ ಮೆಕ್ಬ್ರೈನ್, ಮಾರ್ಕ್ ಅಡೇರ್, ಬ್ಯಾರಿ ಮೆಕಾರ್ಥಿ, ಜೋಶುವಾ ಲಿಟಲ್
ಭಾರತ:
ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ , ಹಾರ್ದಿಕ್ ಪಾಂಡ್ಯ (ನಾಯಕ), ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯುಜವೇಂದ್ರ ಚಾಹಲ್, ಅವೇಶ್ ಖಾನ್


Click it and Unblock the Notifications












