ಹಾರ್ದಿಕ್ ಪಾಂಡ್ಯಗೆ ಕೋಚ್ ಸಲಹೆ ಬೇಕಿಲ್ಲ
'ಹಾರ್ದಿಕ್ಗೆ ಈಗ ಸಾಕಷ್ಟು ಅನುಭವ ಸಿಕ್ಕಿದೆ. ಏನು ಮಾಡಬೇಕೆಂದು ಆತನಿಗೆ ತಿಳಿದಿದೆ. ಆತ ಏನು ಮಾಡಬೇಕೆಂದು ತರಬೇತುದಾರರಿಂದ ಹೇಳಬೇಕಾಗಿಲ್ಲ. ಆತ ಗುಣಮಟ್ಟದ ಆಲ್ ರೌಂಡರ್, ಗುಣಮಟ್ಟದ ಹಿಟ್ಟರ್' ಎಂದು ಗ್ಲೆನ್ ಮೆಗ್ರಾತ್ ಹಾರ್ದಿಕ್ ಪಾಂಡ್ಯ ಕುರಿತು ವಿಶ್ವಾಸದ ಮಾತುಗಳನ್ನಾಡಿದ್ದಾರೆ.
ಕೆಲ ಪಂದ್ಯ ಕೈತಪ್ಪುತ್ತದೆ, ಕೆಲ ಪಂದ್ಯ ಯಶಸ್ವಿಯಾಗುತ್ತದೆ
ಇನ್ನೂ ಮುಂದುವರೆದು ಮಾತನಾಡಿರುವ ಮೆಗ್ರಾತ್ ಕೆಲ ಪಂದ್ಯಗಳಲ್ಲಿ ನಿರೀಕ್ಷಿಸದ ಪ್ರದರ್ಶನ ಬರುತ್ತದೆ, ಇನ್ನೂ ಕೆಲ ಪಂದ್ಯಗಳಲ್ಲಿ ನಿರೀಕ್ಷೆಯನ್ನು ಮುಟ್ಟಲಾಗುವುದಿಲ್ಲ, ಆದರೆ ಹಾರ್ದಿಕ್ ಪಾಂಡ್ಯಗೆ ಏನು ಮಾಡಬೇಕೆಂಬುದು ಚೆನ್ನಾಗಿ ತಿಳಿದಿದೆ.
ಐರ್ಲೆಂಡ್ ವಿರುದ್ಧದ ಸರಣಿಗೆ ಪ್ರಕಟವಾಗಿರುವ ಭಾರತ ತಂಡ
ಇದೇ ತಿಂಗಳ ಜೂನ್ 26 ಮತ್ತು 28ರಂದು ನಡೆಯಲಿರುವ ಐರ್ಲೆಂಡ್ ವಿರುದ್ಧದ ಎರಡು ಪಂದ್ಯಗಳ ಟಿ ಟ್ವೆಂಟಿ ಸರಣಿಗೆ ಬಿಸಿಸಿಐ ಹಾರ್ದಿಕ್ ಪಾಂಡ್ಯ ನಾಯಕತ್ವದ ಟೀಮ್ ಇಂಡಿಯಾವನ್ನು ಪ್ರಕಟಿಸಿದ್ದು, ತಂಡ ಹೀಗಿದೆ: ಹಾರ್ದಿಕ್ ಪಾಂಡ್ಯ (ನಾಯಕ), ಭುವನೇಶ್ವರ್ ಕುಮಾರ್ (ಉಪನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆ), ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಆರ್ ಬಿಷ್ಣೋಯ್, ಹರ್ಷಲ್ ಪಟೇಲ್ , ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್