For Quick Alerts
ALLOW NOTIFICATIONS  
For Daily Alerts
 

Hardik Pandya: ಭಾರತ ತಂಡಕ್ಕೊಂದು ಸಿಹಿಸುದ್ದಿ; ಅಫ್ಘಾನಿಸ್ತಾನ ವಿರುದ್ಧದ ಸರಣಿಗೆ ಹಾರ್ದಿಕ್ ಪಾಂಡ್ಯ ರೆಡಿ!

2023ರ ಏಕದಿನ ವಿಶ್ವಕಪ್‌ನ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಪಾದದ ಗಾಯಕ್ಕೆ ತುತ್ತಾಗಿ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರವುಳಿದಿರುವ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತೆ ಕ್ರಿಕೆಟ್ ಮೈದಾನಕ್ಕೆ ಮರಳಲು ಸಿದ್ಧರಾಗಿದ್ದಾರೆ.

ಹಾರ್ದಿಕ್ ಪಾಂಡ್ಯ ತಮ್ಮ ಗಾಯದಿಂದ ಚೇತರಿಸಿಕೊಳ್ಳುತ್ತಿರುವುದು ಭಾರತ ಕ್ರಿಕೆಟ್ ತಂಡ ಮತ್ತು ಐಪಿಎಲ್‌ನ ಮುಂಬೈ ಇಂಡಿಯನ್ಸ್ ತಂಡದ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಂತಾಗಿದೆ.

ಭಾರತ ತಂಡದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರು 2023ರ ವಿಶ್ವಕಪ್‌ನಲ್ಲಿ ಉಂಟಾದ ಪಾದದ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಅಫ್ಘಾನಿಸ್ತಾನ ವಿರುದ್ಧ ಸ್ವದೇಶಿ ಟಿ20 ಸರಣಿಯಲ್ಲಿ ಭಾರತ ತಂಡದ ನಾಯಕತ್ವ ವಹಿಸಲಿದ್ದಾರೆ.

Hardik Pandya Likely To be Lead Team India for T20 Series Against Afghanistan!

ಅಫ್ಘಾನಿಸ್ತಾನ ವಿರುದ್ಧದ ಟಿ20 ಮತ್ತು 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) ಮುಂದಿನ ಆವೃತ್ತಿಗೆ ಹಾರ್ದಿಕ್ ಪಾಂಡ್ಯ ಆಡುವುದು ಅನುಮಾನಎಂದು ಹಿಂದಿನ ವರದಿಗಳು ತಿಳಿಸಿದ್ದವು.

ಆದರೆ, ಮೂಲಗಳ ಪ್ರಕಾರ, ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತೆ ಫಿಟ್ ಆಗಿದ್ದಾರೆ ಮತ್ತು ಟಿ20 ಸರಣಿಯಲ್ಲಿ ಅಫ್ಘಾನಿಸ್ತಾನ ತಂಡವನ್ನು ಎದುರಿಸಲು ಸಿದ್ಧರಾಗಿದ್ದಾರೆ ಎನ್ನಲಾಗಿದೆ.

"ಹಾರ್ದಿಕ್ ಪಾಂಡ್ಯ ತಮ್ಮ ಪಾದದ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಅವರು ಪ್ರತಿದಿನ ತರಬೇತಿ ಪಡೆಯುತ್ತಿದ್ದಾರೆ," ಎಂದು ಟೈಮ್ಸ್ ಆಫ್ ಇಂಡಿಯಾಗೆ ಮೂಲಗಳು ತಿಳಿಸಿದೆ.

ಹಾರ್ದಿಕ್ ಪಾಂಡ್ಯ ಟಿ20 ಸರಣಿ ಮತ್ತು 2024ರ ಐಪಿಎಲ್ ಆಡದಿರುವ ಸುದ್ದಿಗಳು ಕೇವಲ ವದಂತಿಗಳಾಗಿವೆ ಮತ್ತು ಅದರಲ್ಲಿ ಯಾವುದೇ ಸತ್ಯವಿಲ್ಲ ಎಂದು ಮೂಲವು ದೃಢಪಡಿಸಿದೆ.

ಹಾರ್ದಿಕ್ ಪಾಂಡ್ಯ ಹಿಂದಿರುಗುವ ದಿನಾಂಕದ ಬಗ್ಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಂತಿಮ ಪ್ರಕಟಣೆ ತಿಳಿಸಿಲ್ಲ. ಆದರೆ, ಈ ತಿಂಗಳ ಆರಂಭದಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಯಲ್ಲಿ ಹಾರ್ದಿಕ್ ಪಾಂಡ್ಯ ಅವರ ಫಿಟ್‌ನೆಸ್ ಅನ್ನು ದಿನನಿತ್ಯದ ಆಧಾರದ ಮೇಲೆ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದರು.

ಹಾರ್ದಿಕ್ ಪಾಂಡ್ಯ ಆದಷ್ಟು ಬೇಗ ಫಿಟ್ ಆಗಲು ಶ್ರಮಿಸುತ್ತಿದ್ದಾರೆ ಮತ್ತು ಅವರು ರಾಷ್ಟ್ರೀಯ ತಂಡಕ್ಕೆ ಮರಳಲು ಸಿದ್ಧರಾದಾಗ ಮಾಧ್ಯಮಗಳಿಗೆ ತಿಳಿಸಲಾಗುವುದು ಎಂದು ಜಯ್ ಶಾ ಹೇಳಿದ್ದಾರೆ.

ಪುಣೆಯಲ್ಲಿ ನಡೆದ ಏಕದಿನ ವಿಶ್ವಕಪ್‌ನ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ತಮ್ಮದೇ ಬೌಲಿಂಗ್‌ನಲ್ಲಿ ಫೀಲ್ಡಿಂಗ್ ಮಾಡುವಾಗ ಪಾದದ ಪಾದಕ್ಕೆ ಗಾಯ ಮಾಡಿಕೊಂಡರು. ಅಂದಿನಿಂದ ಹಾರ್ದಿಕ್ ಪಾಂಡ್ಯ ಭಾರತ ತಂಡದಿಂದ ಹೊರಗುಳಿದಿದ್ದರು. ವಿಶ್ವಕಪ್‌ನಲ್ಲಿ ಅವರ ಬದಲಿಗೆ ಪ್ರಸಿದ್ಧ್ ಕೃಷ್ಣ ಅವರನ್ನು ಆಯ್ಕೆ ಮಾಡಲಾಯಿತು.

ಇತ್ತೀಚಿಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು 2024ರ ಐಪಿಎಲ್ ಆವೃತ್ತಿಗಾಗಿ ಹಾರ್ದಿಕ್ ಪಾಂಡ್ಯ ಅವರನ್ನು ಗುಜರಾತ್ ಟೈಟನ್ಸ್ ತಂಡದಿಂದ ಎಲ್ಲಾ ನಗದು ವ್ಯವಹಾರದಲ್ಲಿ ವ್ಯಾಪಾರ ಮಾಡಿದ್ದರಿಂದ, ಐಪಿಲ್ ವಿಷಯವಾಗಿ ಸಂಪೂರ್ಣ ಮುಖ್ಯ ಸುದ್ದಿಯಾಗಿದ್ದರು.

ಐಪಿಎಲ್ ಇತಿಹಾಸದಲ್ಲಿ ಟ್ರೋಫಿ ವಿಜೇತ ನಾಯಕನೊಬ್ಬನನ್ನು ವ್ಯಾಪಾರ ಆಗಿದ್ದು ಇದೇ ಮೊದಲು. ಆ ಕ್ರಮವು ಆಘಾತಕಾರಿ ಅಲ್ಲದಿದ್ದರೂ, ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್ ನಾಯಕನಾಗಿ ಹೆಸರಿಸಲಾಯಿತು.

ಮುಂಬೈ ಇಂಡಿಯನ್ಸ್‌ನ ಹೊಸ ನಾಯಕನಾದ ನಂತರ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಆಕ್ರೋಶಕ್ಕೆ ಗುರಿಯಾದರು. ಏಕೆಂದರೆ ರೋಹಿತ್ ಶರ್ಮಾ ವಜಾಗೊಳಿಸುವಿಕೆ ಬಗ್ಗೆ ಮುಂಬೈ ಇಂಡಿಯನ್ಸ್ ಅಭಿಮಾನಿಗಳು ಅಸಮಾಧಾನಗೊಂಡಿದ್ದಾರೆ.

ಮುಂಬರುವ 2024ರ ಟಿ20 ವಿಶ್ವಕಪ್‌ಗೆ ಮೊದಲು ಭಾರತ ತಂಡವು ಈ ವರ್ಷ ಹೆಚ್ಚಿನ ಟಿ20 ಪಂದ್ಯಗಳನ್ನು ಹೊಂದಿಲ್ಲ. ಹೀಗಾಗಿ ಜನವರಿಯಲ್ಲಿ ನಡೆಯುವ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳು ಬಹಳ ನಿರ್ಣಾಯಕವಾಗಿರುತ್ತವೆ.

ಜೂನ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವನ್ನು ಮುನ್ನಡೆಸುವ ಸಾಧ್ಯತೆ ಇರುವ ಹಾರ್ದಿಕ್ ಪಾಂಡ್ಯ ಬೇಗನೇ ಫಿಟ್ ಆಗಿದ್ದು, ಜವಾಬ್ದಾರಿ ವಹಿಸಿಕೊಳ್ಳುವುದು ಮುಖ್ಯವಾಗಿದೆ.

ವಿಶ್ವಕಪ್ ಪ್ರಾರಂಭವಾಗುವವರೆಗೂ ಹಾರ್ದಿಕ್ ಪಾಂಡ್ಯ ಫಿಟ್ ಆಗಿರುವುದು ಭಾರತ ತಂಡದ ದೃಷ್ಟಿಕೋನದಿಂದ ಕೂಡ ಮುಖ್ಯವಾಗಿದೆ. ಅವರಿಗೆ ಗಾಯವಾದರೆ ತಂಡದ ಮ್ಯಾನೇಜ್‌ಮೆಂಟ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಬಹುದು.

ಕಳೆದ 10 ವರ್ಷಗಳಿಂದ ಭಾರತ ತಂಡ ಐಸಿಸಿ ಟ್ರೋಫಿ ಗೆದ್ದಿಲ್ಲ ಮತ್ತು ಎಂಎಸ್ ಧೋನಿ ನಾಯಕತ್ವದ ತಂಡವು ಇತಿಹಾಸ ಬರೆದ ದಕ್ಷಿಣ ಆಫ್ರಿಕಾದಲ್ಲಿ 2007ರಲ್ಲಿ ಗೆದ್ದ ಮೊದಲ ಆವೃತ್ತಿಯ ನಂತರ, ಟೀಮ್ ಇಂಡಿಯಾ ಟಿ20 ವಿಶ್ವಕಪ್ ಪಂದ್ಯಾವಳಿಯನ್ನು ಗೆದ್ದಿಲ್ಲ.

Story first published: Sunday, December 24, 2023, 15:27 [IST]
Other articles published on Dec 24, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+