Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Gautam Gambhir: ವಿರಾಟ್-ರೋಹಿತ್ ಟೆಸ್ಟ್ ಭವಿಷ್ಯ ನುಡಿದ ಹೆಡ್‌ಕೋಚ್ ಗೌತಮ್ ಗಂಭೀರ್

ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡವು 10 ವರ್ಷಗಳ ನಂತರ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಸೋತಿದ್ದಕ್ಕೆ ಹಲವು ಕಾರಣಗಳಿವೆ. ಆದರೆ ದೊಡ್ಡ ಕಾರಣ ಬಹುಶಃ ಬ್ಯಾಟಿಂಗ್ ವೈಫಲ್ಯ. ಪರ್ತ್‌ನಲ್ಲಿ ಶತಕ ಬಾರಿಸಿದರೂ ವಿರಾಟ್ ಕೊಹ್ಲಿಯ ಬ್ಯಾಟ್ ಇಡೀ ಸರಣಿಯಲ್ಲಿ ಮೌನವಾಗಿತ್ತು.

ಕಳಪೆ ಫಾರ್ಮ್‌ನಿಂದಾಗಿ ರೋಹಿತ್ ಶರ್ಮಾ ಸಿಡ್ನಿ ಟೆಸ್ಟ್‌ನಿಂದ ಹಿಂದೆ ಸರಿದಿದ್ದರು. ಸಿಡ್ನಿಯಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತದ ಗೆಲುವಿನ ಮೇಲೆ ನಿರೀಕ್ಷೆಯಿತ್ತು. ಆದರೆ ನಿರೀಕ್ಷೆಗೆ ತಕ್ಕಂತೆ ಟೀಮ್ ಇಂಡಿಯಾ ಆಟಗಾರರು ಪ್ರದರ್ಶನ ನೀಡಲಿಲ್ಲ.

Head coach Gautam Gambhir predicts Virat Kohli-Rohit Sharma s Test cricket

ಕಳಪೆ ಫಾರ್ಮ್‌ನಿಂದಾಗಿ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಟೆಸ್ಟ್ ವೃತ್ತಿಜೀವನದ ಬಗ್ಗೆ ಪ್ರಶ್ನೆಗಳು ಎದ್ದಿವೆ. ಈ ಇಬ್ಬರು ಆಟಗಾರರು ಯಾವುದೇ ನಿರ್ಧಾರ ತೆಗೆದುಕೊಂಡರೂ ಅದು ಭಾರತೀಯ ಕ್ರಿಕೆಟ್‌ನ ಹಿತಾಸಕ್ತಿಗೆ ಅನುಗುಣವಾಗಿರುತ್ತದೆ ಎಂಬ ವಿಶ್ವಾಸವಿದೆ ಎಂದು ಟೀಮ್ ಇಂಡಿಯಾ ಹೆಡ್‌ಕೋಚ್ ಗೌತಮ್ ಗಂಭೀರ್ ಹೇಳಿದ್ದಾರೆ.

ಸಿಡ್ನಿ ಟೆಸ್ಟ್ ಪಂದ್ಯದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೌತಮ್ ಗಂಭೀರ್, 'ಯಾವುದೇ ಕ್ರಿಕೆಟಿಗನ ಭವಿಷ್ಯದ ಬಗ್ಗೆ ಮಾತನಾಡಲು ನಾನು ಪರವಾಗಿಲ್ಲ. ಅದು ಸಂಪೂರ್ಣವಾಗಿ ರೋಹಿತ್ ಮತ್ತು ಕೊಹ್ಲಿ ವಿಷಯವಾಗಿದೆ. ಆದರೆ ಅವರು ಇನ್ನೂ ಆಟದ ಬಗ್ಗೆ ಉತ್ಸಾಹ ಮತ್ತು ಹಸಿವನ್ನು ಹೊಂದಿದ್ದಾರೆ ಎಂದು ನಾನು ಹೇಳಲೇಬೇಕು. ಅವರು ಭಾರತೀಯ ಕ್ರಿಕೆಟ್ ಅನ್ನು ಮುಂದಕ್ಕೆ ಕೊಂಡೊಯ್ಯಲು ಕೆಲಸ ಮಾಡುತ್ತಾರೆ ಎಂದು ನನಗೆ ಗೊತ್ತಿದೆ. ಅವರು ಯಾವುದೇ ನಿರ್ಧಾರ ತೆಗೆದುಕೊಂಡರೂ ಭಾರತೀಯ ಕ್ರಿಕೆಟ್ ಅನ್ನು ಮನಸ್ಸಿನಲ್ಲಿಟ್ಟುಕೊಳ್ಳುತ್ತಾರೆ ಎನ್ನುವ ಮೂಲಕ ವಿರಾಟ್ ಮತ್ತು ರೋಹಿತ್ ನಿವೃತ್ತಿಯ ಊಹಪೋಹಗಳಿಗೆ ತೆರೆ ಎಳೆದಿದ್ದಾರೆ.

ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ವಿರಾಟ್ ಕೊಹ್ಲಿ 5 ಟೆಸ್ಟ್ ಪಂದ್ಯಗಳಲ್ಲಿ ಕೇವಲ 190 ರನ್ ಗಳಿಸಿದ್ದಾರೆ. 8 ಬಾರಿ ಆಫ್-ಸ್ಟಂಪ್ ಹೊರಗೆ ಚೆಂಡನ್ನು ಆಡಲು ಹೋಗಿ ಔಟಾಗಿದ್ದಾರೆ. ಇತ್ತ ರೋಹಿತ್ ಶರ್ಮಾ ತನ್ನ ಎರಡನೇ ಮಗುವಿನ ಜನನದ ಕಾರಣ ಪರ್ತ್ ಟೆಸ್ಟ್ ಆಡಲಿಲ್ಲ. ಇದಾದ ನಂತರ, ಅವರು ಆಡಿದ 3 ಟೆಸ್ಟ್‌ಗಳಲ್ಲಿ ಕೇವಲ 31 ರನ್ ಗಳಿಸಿದ್ದಾರೆ. ಕಳಪೆ ಫಾರ್ಮ್‌ನಿಂದಾಗಿ ಸಿಡ್ನಿ ಟೆಸ್ಟ್‌ನಿಂದ ಹಿಂದೆ ಸರಿದರು. ಸಿಡ್ನಿ ಟೆಸ್ಟ್‌ನಲ್ಲಿ ಭಾರತ 6 ವಿಕೆಟ್‌ಗಳಿಂದ ಸೋಲು ಕಂಡಿತ್ತು. ಇದರೊಂದಿಗೆ 2025 ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನ ರೇಸ್‌ನಿಂದ ಭಾರತ ಹೊರಗುಳಿಯಿತು.

ಸಿಡ್ನಿ ಟೆಸ್ಟ್‌ನಿಂದ ಹಿಂದೆ ಸರಿಯುವ ರೋಹಿತ್ ನಿರ್ಧಾರವನ್ನು ಗೌತಮ್ ಗಂಭೀರ್ ಶ್ಲಾಘಿಸಿದರು. ರೋಹಿತ್ ಶರ್ಮಾ ಅವರ ನಿರ್ಧಾರವನ್ನು ತಂಡದ ಹಿತಾಸಕ್ತಿಯಿಂದ ತೆಗೆದುಕೊಂಡಿದ್ದಾರೆ. ಕಳಪೆ ಫಾರ್ಮ್ ಕಂಡ ರೋಹಿತ್ ಅವರೇ ತಂಡಕ್ಕಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಡ್ರೆಸ್ಸಿಂಗ್ ರೂಮ್‌ನಲ್ಲಿನ ಭಿನ್ನಾಭಿಪ್ರಾಯಗಳ ಕುರಿತಾದ ಮಾತುಕತೆಗಳು ಆಧಾರರಹಿತವಾಗಿವೆ. ಇಂತಹ ವಿಷಯಗಳಲ್ಲಿ ನಾವು ಹೆಚ್ಚು ಸಂವೇದನಾಶೀಲರಾಗಿರಬೇಕು. ನಾಯಕ ತಂಡದ ಹಿತಾಸಕ್ತಿಯಿಂದ ಹಿಂದೆ ಸರಿದರೆ ಅದರಿಂದ ಯಾವುದೇ ಹಾನಿ ಇಲ್ಲ. ಈ ಬಗ್ಗೆ ಸಾಕಷ್ಟು ಹೇಳಲಾಗಿದೆ. ತಂಡ ಮತ್ತು ದೇಶಕ್ಕಿಂತ ಯಾವುದೂ ಮುಖ್ಯವಲ್ಲ ಎಂದಿದ್ದಾರೆ.

Story first published: Sunday, January 5, 2025, 22:38 [IST]
Other articles published on Jan 5, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+