
ರವಿಚಂದ್ರನ್ ಅಶ್ವಿನ್ ಪರಿಸ್ಥಿತಿ ನೋಡಿದರೆ ಅಯ್ಯೋ ಎನಿಸುತ್ತದೆ
ಹೀಗೆ ರವಿಚಂದ್ರನ್ ಅಶ್ವಿನ್ಗೆ ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಅವಕಾಶ ನೀಡದೇ ತಂಡದಿಂದ ಹೊರಗಿಟ್ಟಿರುವುದರ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಕ್ರಿಕೆಟಿಗ ಲಕ್ಷ್ಮಣ್ ಶಿವರಾಮಕೃಷ್ಣನ್ 'ಓರ್ವ ಅತ್ಯುತ್ತಮ ಬೌಲರ್ ಆಗಿ ಈ ಹಿಂದಿನ ಟೆಸ್ಟ್ ಪಂದ್ಯಗಳಲ್ಲಿ ಹೆಚ್ಚಿನ ವಿಕೆಟ್ಗಳನ್ನು ಪಡೆದುಕೊಂಡರೂ ಸಹ ತಂಡದಲ್ಲಿ ಸ್ಥಾನ ಪಡೆದುಕೊಳ್ಳದೇ ಬೆಂಚ್ ಕಾಯುತ್ತಿರುವ ರವಿಚಂದ್ರನ್ ಅಶ್ವಿನ್ ಪರಿಸ್ಥಿತಿಯನ್ನು ನೋಡಿದರೆ ಅಯ್ಯೋ ಎನಿಸುತ್ತದೆ' ಎಂದು ಬೇಸರದ ಮಾತುಗಳನ್ನಾಡಿದ್ದಾರೆ.

ಬುದ್ಧಿವಂತಿಕೆಯಿಂದ ವಿಕೆಟ್ ಪಡೆಯಬಲ್ಲ ಬೌಲರ್ ಅಶ್ವಿನ್
ರವಿಚಂದ್ರನ್ ಅಶ್ವಿನ್ ಸಾಮಾನ್ಯ ಬೌಲರ್ ಅಲ್ಲ, ಎಂತಹ ಕಠಿಣ ಪರಿಸ್ಥಿತಿಯಲ್ಲಿಯೂ ತನ್ನ ಚಾಣಾಕ್ಷತನದಿಂದ ವಿಕೆಟ್ ಕಬಳಿಸಬಲ್ಲ ಅತ್ಯದ್ಭುತ ಕಲೆ ಇರುವ ಬೌಲರ್ ಎಂದು ಲಕ್ಷ್ಮಣ್ ಶಿವರಾಮಕೃಷ್ಣನ್ ರವಿಚಂದ್ರನ್ ಅಶ್ವಿನ್ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ ವಿಕೆಟ್ ಪಡೆಯುವುದು ಇತರೆ ಮಾದರಿಯ ಕ್ರಿಕೆಟ್ನಲ್ಲಿ ವಿಕೆಟ್ ಪಡೆದಷ್ಟು ಸುಲಭವಲ್ಲ, ಹೀಗಾಗಿ ರವಿಚಂದ್ರನ್ ಅಶ್ವಿನ್ ಚಾಣಾಕ್ಷತನದ ಆಟ ಮುಂದಿನ ಪಂದ್ಯಗಳಲ್ಲಿ ಅವರಿಗೆ ಅವಕಾಶ ತಂದುಕೊಡಲಿದೆ ಎಂಬ ನಂಬಿಕೆ ಇದೆ ಎಂದು ಲಕ್ಷ್ಮಣ್ ಶಿವರಾಮಕೃಷ್ಣನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರವಿಚಂದ್ರನ್ ಅಶ್ವಿನ್ಗೆ ಅವಕಾಶ ಸಿಗದಿರಲು ಅಸಲಿ ಕಾರಣವಿದು
ಲಾರ್ಡ್ಸ್ ಪಂದ್ಯ ಮುಗಿದ ನಂತರ ಮಾತನಾಡಿದ ರವಿಚಂದ್ರನ್ ಅಶ್ವಿನ್ ತಮಗೆ ತಂಡದಲ್ಲಿ ಸ್ಥಾನ ಸಿಗದಿರಲು ಕಾರಣವೇನೆಂಬುದನ್ನು ಸ್ವತಃ ಅವರೇ ಹಂಚಿಕೊಂಡಿದ್ದರು. ಲಾರ್ಡ್ಸ್ ಪಂದ್ಯ ಆರಂಭವಾಗುವ ಮುನ್ನ ಯಾವುದೇ ರೀತಿಯ ಮಳೆಯ ವಾತಾವರಣ ಇಲ್ಲದೇ ಇರುವ ಕಾರಣ ರವಿಚಂದ್ರನ್ ಅಶ್ವಿನ್ಗೆ ಪಂದ್ಯವನ್ನಾಡಲು ಸಿದ್ಧನಿರು ಎಂದು ವಿರಾಟ್ ಕೊಹ್ಲಿ ಹೇಳಿದ್ದರಂತೆ. ಆದರೆ ಇನ್ನೇನು ಕೆಲವೇ ನಿಮಿಷಗಳಲ್ಲಿ ಪಂದ್ಯ ಆರಂಭವಾಗಲಿದೆ ಎನ್ನುವಾಗ ಮೋಡ ಕವಿದ ವಾತಾವರಣ ನಿರ್ಮಾಣವಾದ್ದರಿಂದ ರವಿಚಂದ್ರನ್ ಅಶ್ವಿನ್ಗೆ ಸ್ಥಾನ ನೀಡದೆ ವೇಗಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಯಿತು. ಹೀಗೆ ಮಳೆಯ ಕಾರಣದಿಂದಾಗಿ ತನಗೆ ಅವಕಾಶ ಸಿಗಲಿಲ್ಲ ಅಷ್ಟೇ ಎಂದು ರವಿಚಂದ್ರನ್ ಅಶ್ವಿನ್ ಸ್ಪಷ್ಟನೆ ನೀಡಿದ್ದಾರೆ.


Click it and Unblock the Notifications
