
ಭಾರತ ತಂಡದಲ್ಲಿ ಈ ಇಬ್ಬರು ವಿಕೆಟ್ ಕೀಪರ್ಗಳಿಗೆ ಅವಕಾಶ ನೀಡಬೇಕು
ಇತ್ತೀಚೆಗಷ್ಟೆ ರಿಷಭ್ ಪಂತ್ ಏಕದಿನ ಕ್ರಿಕೆಟ್ನಲ್ಲಿ ಅಬ್ಬರದ ಬ್ಯಾಟಿಂಗ್ ನಡೆಸಿದ್ದನ್ನು ನೋಡಿದ್ದೇವೆ ಹಾಗೂ ಆತ ಟಿ ಟ್ವೆಂಟಿ ಕ್ರಿಕೆಟ್ನಲ್ಲಿ ಆತನ ಸಾಮರ್ಥ್ಯವೇನು ಎಂಬುದು ನನಗೆ ತಿಳಿದಿದೆ. ಇನ್ನು ದಿನೇಶ್ ಕಾರ್ತಿಕ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಮಿಂಚಿದ್ದಾರೆ. ಹೀಗಾಗಿ ಈ ಇಬ್ಬರೂ ವಿಕೆಟ್ ಕೀಪರ್ಗಳನ್ನು ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಆಯ್ಕೆ ಮಾಡಬೇಕು ಎಂದು ರಿಕಿ ಪಾಂಟಿಂಗ್ ಅಭಿಪ್ರಾಯಪಟ್ಟಿದ್ದಾರೆ.

ಈ ಆಟಗಾರರು ಇದ್ದರೆ ತಂಡ ಬಲಿಷ್ಟವಾಗಲಿದೆ
ಇನ್ನೂ ಮುಂದುವರೆದು ಮಾತನಾಡಿರುವ ರಿಕಿ ಪಾಂಟಿಂಗ್ ರಿಷಭ್ ಪಂತ್ ಮೂರರಿಂದ ಐದನೇ ಕ್ರಮಾಂಕದ ಬ್ಯಾಟ್ಸ್ಮನ್ ಆಗಿ ಕಣಕ್ಕಿಳಿದರೆ, ಫಿನಿಶರ್ಗಳಾಗಿ ದಿನೇಶ್ ಕಾರ್ತಿಕ್ ಮತ್ತು ಕಮ್ಬ್ಯಾಕ್ ಮಾಡಿರುವ ಹಾರ್ದಿಕ್ ಪಾಂಡ್ಯ ಆಡಬೇಕು, ಹೀಗಿದ್ದಾಗ ತಂಡದ ಬ್ಯಾಟಿಂಗ್ ಲೈನ್ಅಪ್ ಬಲಿಷ್ಟವಾಗಿರಲಿದ್ದು, ಎದುರಾಳಿ ತಂಡಗಳಿಗೆ ನಡುಕ ಹುಟ್ಟಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಆಟಗಾರರಿಗೆ ಅವಕಾಶ ನೀಡಿದರೆ ಇಶಾನ್ ಕಿಶನ್ ಹೊರಕ್ಕೆ
ತಂಡವನ್ನು ಈ ರೀತಿ ಆಯ್ಕೆ ಮಾಡಿದರೆ ಇಶಾನ್ ಕಿಶನ್, ಶ್ರೇಯಸ್ ಐಯ್ಯರ್ ಮತ್ತು ಸೂರ್ಯಕುಮಾರ್ ಯಾದವ್ ಈ ಮೂವರಲ್ಲಿ ಒಬ್ಬರು ಅವಕಾಶ ಕಳೆದುಕೊಳ್ಳುವುದು ಖಚಿತ ಎಂದು ರಿಕಿ ಪಾಂಟಿಂಗ್ ಊಹಿಸಿದ್ದಾರೆ. ಆದರೆ, ಸದ್ಯ ಉತ್ತಮ ಫಾರ್ಮ್ ಹೊಂದಿರುವ ಕಾರಣ ಸೂರ್ಯಕುಮಾರ್ ಯಾದವ್ ಅವಕಾಶ ಕಳೆದುಕೊಳ್ಳುವುದಿಲ್ಲ ಎಂದಿರುವ ರಿಕಿ ಪಾಂಟಿಂಗ್ ಪ್ರತಿಭಾವಂತ ಆಟಗಾರರನ್ನು ಆಯ್ಕೆ ಮಾಡಿಕೊಳ್ಳಬೇಕೆಂದರೆ ಈ ರೀತಿಯ ಕಷ್ಟದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದಿದ್ದಾರೆ. ಹಾಗೂ ಇಶಾನ್ ಕಿಶನ್ಗಿಂತ ದಿನೇಶ್ ಕಾರ್ತಿಕ್ ಮತ್ತು ರಿಷಭ್ ಪಂತ್ ಅವರನ್ನು ಆಯ್ಕೆ ಮಾಡುವುದು ಉತ್ತಮ ಎಂದು ರಿಕಿ ಪಾಂಟಿಂಗ್ ಅಭಿಪ್ರಾಯಪಟ್ಟಿದ್ದಾರೆ.


Click it and Unblock the Notifications












