ಲಂಕಾ ವಿರುದ್ಧ ಗೆದ್ದ ಬಳಿಕ ಆರಿಸಿದ ತಂಡ
ಇಂದೋರ್ನ ಹೋಲ್ಕರ್ ಸ್ಟೇಡಿಯಂನಲ್ಲಿ ಮಂಗಳವಾರ (ಜನವರಿ 7) ನಡೆದ ಶ್ರೀಲಂಕಾ-ಭಾರತ ದ್ವಿತೀಯ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪಡೆ 7 ವಿಕೆಟ್ ಸುಲಭ ಜಯ ಗಳಿಸಿತ್ತು. ಟೀಮ್ ಇಂಡಿಯಾ ಜಯ ಸಾಧಿಸಿದ ಬಳಿಕ ಭಾರತದ ಅಧಿಕೃತ ಪ್ರಸಾರಕ ಹಾಟ್ ಸ್ಟಾರ್ ಜೊತೆ ಮಾತನಾಡುತ್ತ ಲಕ್ಷ್ಮಣ್ ತನ್ನ ನೆಚ್ಚಿನ ತಂಡವನ್ನು ಹೆಸರಿಸಿದರು.
ಇಬ್ಬರು ಕನ್ನಡಿಗರಿಗೆ ಸ್ಥಾನ
ಲಕ್ಷ್ಮಣ್ ಪ್ರಕಟಿಸಿರುವ 15 ಜನರ ಭಾರತ ಟಿ20 ವಿಶ್ವಕಪ್ ತಂಡದಲ್ಲಿ ಧೋನಿ, ಧವನ್ರಂತ ಅನುಭವಿ-ಪ್ರಮುಖ ಆಟಗಾರರಿಲ್ಲ. ಆದರೆ ಕರ್ನಾಟಕದ ಇಬ್ಬರು ಪ್ರತಿಭಾನ್ವಿತ ಆಟಗಾರರ ಹೆಸರಿದೆ. ಕನ್ನಡಿಗರಾದ ಕೆಎಲ್ ರಾಹುಲ್ ಮತ್ತು ಮನೀಷ್ ಪಾಂಡೆ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಪಂದ್ಯ
ಆಸ್ಟ್ರೇಲಿಯಾದಲ್ಲಿ ಅಕ್ಟೋಬರ್ 18ರಿಂದ ನವೆಂಬರ್ 15ರ ವರೆಗೆ ನಡೆಯಲಿರುವ ಪುರುಷರ ಐಸಿಸಿ ಟಿ20 ವಿಶ್ವಕಪ್ನಲ್ಲಿ ಒಟ್ಟು 16 ತಂಡಗಳು ಪಾಲ್ಗೊಳ್ಳುತ್ತಿವೆ. ಟೂರ್ನಿ ಒಟ್ಟು 45 ಪಂದ್ಯಗಳನ್ನು ಒಳಗೊಂಡಿರಲಿದೆ. ಟೀಮ್ ಇಂಡಿಯಾ ಅಕ್ಟೋಬರ್ 24ರಂದು ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಪಂದ್ಯವನ್ನಾಡಲಿದೆ.
ವಿಶ್ವಕಪ್ಗೆ ಲಕ್ಷ್ಮಣ್ ನೆಚ್ಚಿನ ಭಾರತ ತಂಡ
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಕೆ.ಎಲ್. ರಾಹುಲ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ಮನೀಶ್ ಪಾಂಡೆ, ಶಿವಂ ದೂಬೆ, ರವೀಂದ್ರ ಜಡೇಜಾ, ಜಸ್ಪ್ರೀತ್ ಬೂಮ್ರಾ, ಯುಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ದೀಪಕ್ ಚಹಾರ್, ಭುವನೇಶ್ವರ್ ಕುಮಾರ್.