ಆರಂಭಿಕರಾಗಿ ರೋಹಿತ್-ಧವನ್
ವಿಶ್ವಕಪ್ಗಾಗಿ ಪ್ರಕಟಿಸಿರುವ ಭಾರತ ತಂಡದಲ್ಲಿ ಆರಂಭಿಕರಾಗಿ ಎಂದಿನಂತೆ ರೋಹಿತ್ ಶರ್ಮಾ, ಶಿಖರ್ ಧವನ್ ಕಾಣಿಸಿಕೊಂಡಿದ್ದಾರೆ. ಒಟ್ಟಿನಲ್ಲಿ ಈ ಬಾರಿಯೂ ಅನುಭವಿ ಆಟಗಾರರಿಗೆ ಬಿಸಿಸಿಐ ಅವಕಾಶ ನೀಡಿರುವುದು ಕಂಡು ಬಂದಿದೆ.
ಮಧ್ಯಮ ಕ್ರಮಾಂಕ
ಟೀಮ್ ಇಂಡಿಯಾ ಮಧ್ಯಮ ಕ್ರಮಾಂಕಕ್ಕೆ ಸೂಕ್ತವೆನಿಸುವ ಆಟಗಾರರಲ್ಲಿ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಎಂಎಸ್ ಧೋನಿ, ವಿಜಯ್ ಶಂಕರ್, ಕೇದಾರ್ ಜಾಧವ್ ಇದ್ದಾರೆ. ರಿಶಬ್ ಪಂತ್ ಈ ಬಾರಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಆದರೆ ವಿಜಯ್ ಶಂಕರ್ಗೆ ತಂಡದಲ್ಲಿ ಸ್ಥಾನ ಲಭಿಸಿದೆ.
ಆಲ್ ರೌಂಡರ್ ವಿಭಾಗ
2019ರ ವಿಶ್ವಕಪ್ಗಾಗಿ ಬಿಸಿಸಿಐ ಈ ಸಾರಿ ಪ್ರಕಟಿಸಿರುವ ತಂಡ ಬಲಿಷ್ಠವಾಗಿಯೇ ಇದೆ. ತಂಡದಲ್ಲಿ ವಿಜಯ್ ಶಂಕರ್, ಕೇದಾರ್ ಜಾಧವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ಆರ್ ರೌಂಡರ್ ವಿಭಾಗವನ್ನು ಬಲ ಗೊಳಿಸಿದ್ದಾರೆ. ಆದರೆ ಹಾರ್ದಿಕ್ ಸಹೋದರ ಕೃನಾಲ್ಗೆ ತಂಡಲ್ಲಿ ಸ್ಥಾನ ಲಭಿಸಿಲ್ಲ.
ಬೌಲರ್ಗಳ ಬಲ
ಪ್ರಕಟಿತ 15 ಆಟಗಾರರ ಭಾರತ ತಂಡದಲ್ಲಿ ಕುಲದೀಪ್ ಯಾದವ್, ಭುವನೇಶ್ವರ ಕುಮಾರ್, ಜಸ್ಪ್ರೀತ್ ಬೂಮ್ರಾ, ಯುಜುವೇಂದ್ರ ಚಾಹಲ್, ಮೊಹಮ್ಮದ್ ಶಮಿ ಬೌಲಿಂಗ್ ವಿಭಾಗದ ಬಲವಾಗಿ ನಿಲ್ಲಲಿದ್ದಾರೆ. ಇಲ್ಲಿ ಅನುಭವಿ ಸ್ಪಿನ್ನರ್ ಆರ್ ಅಶ್ವಿನ್ಗೆ ಅವಕಾಶ ಲಭಿಸದಿರುವುದು ಅಚ್ಚರಿ ಮೂಡಿಸಿದೆ.
ವಿಶ್ವಕಪ್ಗಾಗಿ ಭಾರತ ತಂಡ
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಶಿಖರ್ ಧವನ್, ಕೆಎಲ್ ರಾಹುಲ್, ವಿಜಯ್ ಶಂಕರ್, ಎಂಎಸ್ ಧೋನಿ (ವಿ.ಕೆ), ಕೇದಾರ್ ಜಾಧವ್, ದಿನೇಶ್ ಕಾರ್ತಿಕ್, ಯುಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಭುವನೇಶ್ವರ ಕುಮಾರ್, ಜಸ್ಪ್ರೀತ್ ಬೂಮ್ರಾ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ಮತ್ತು ಮೊಹಮ್ಮದ್ ಶಮಿ.