ನಾವು ಕೆಎಲ್ ರಾಹುಲ್ ಅವರನ್ನು ಉಳಿಸಿಕೊಳ್ಳಲು ಯತ್ನಿಸಿದೆವು
"ರಿಟೆನ್ಷನ್ ಪ್ರಕ್ರಿಯೆಯಲ್ಲಿ ನಾವು ಕೆಎಲ್ ರಾಹುಲ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳುವ ಯತ್ನ ಮಾಡಿದೆವು. ಆದರೆ ಕೆಎಲ್ ರಾಹುಲ್ ಮೆಗಾ ಹರಾಜಿನಲ್ಲಿ ಭಾಗವಹಿಸಬೇಕೆಂಬ ಇಚ್ಛೆಯನ್ನು ವ್ಯಕ್ತಪಡಿಸಿ ತಂಡದಿಂದ ಹೊರಗುಳಿದರು. ರಿಟೆನ್ಷನ್ ಪ್ರಕ್ರಿಯೆಗೂ ಮುನ್ನ ಕೆಎಲ್ ರಾಹುಲ್ ಬೇರೆ ಯಾವುದೇ ಫ್ರಾಂಚೈಸಿ ಜೊತೆ ಖರೀದಿ ಕುರಿತಾಗಿ ಸಂಪರ್ಕ ಬೆಳೆಸಿದರೆ ಅದೊಂದು ನೀತಿಗೆಟ್ಟ ಕೆಲಸವಾಗಲಿದೆ" ಎಂದು ಪಂಜಾಬ್ ಕಿಂಗ್ಸ್ ತಂಡದ ಸಹ ಮಾಲೀಕ ನೆಸ್ ವಾಡಿಯಾ ಹೇಳಿದ್ದಾರೆ.
ಮಯಂಕ್ ಅಗರ್ವಾಲ್ ಮತ್ತು ಅರ್ಷ್ ದೀಪ್ ಸಿಂಗ್ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ವಾಡಿಯಾ
ಇನ್ನೂ ಮುಂದುವರಿದು ಪಂಜಾಬ್ ಕಿಂಗ್ಸ್ ರಿಟೇನ್ ಮಾಡಿಕೊಂಡಿರುವ ಆಟಗಾರರಾದ ಮಯಾಂಕ್ ಅಗರ್ವಾಲ್ ಮತ್ತು ಅರ್ಷ್ ದೀಪ್ ಸಿಂಗ್ ಕುರಿತು ವಿಶೇಷವಾಗಿ ಮಾತನಾಡಿದ ನೆಸ್ ವಾಡಿಯಾ "ಪಂಜಾಬ್ ಕಿಂಗ್ಸ್ ತಂಡದ ಪರ ಉತ್ತಮ ಪ್ರದರ್ಶನ ನೀಡಿದ ಮಯಾಂಕ್ ಅಗರ್ವಾಲ್ ಮತ್ತು ಅರ್ಷ್ ದೀಪ್ ಸಿಂಗ್ ಅವರನ್ನು ರಿಟೈನ್ ಮಾಡಿಕೊಂಡಿರುವುದು ತುಂಬಾ ಸಂತಸದ ವಿಷಯ. ಮಯಾಂಕ್ ಅಗರ್ವಾಲ್ ತಂಡದ ಓರ್ವ ಅತ್ಯದ್ಭುತ ಆಟಗಾರ ಮತ್ತು ಅರ್ಷ್ ದೀಪ್ ಸಿಂಗ್ ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದುತ್ತಿದ್ದು, ಮುಂದಿನ ದಿನಗಳಲ್ಲಿ ಭಾರತ ಅಂತರರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲಿದ್ದಾರೆ" ಎಂದು ಹೇಳಿಕೆ ನೀಡಿದ್ದಾರೆ.
ಪಂಜಾಬ್ ಕಿಂಗ್ಸ್ ರೀಟೈನ್ ಮಾಡಿಕೊಂಡ ಆಟಗಾರರು
ಆಟಗಾರ 1: ಮಯಾಂಕ್ ಅಗರ್ವಾಲ್ - ರೂ. 12 ಕೋಟಿ (14 ಕೋಟಿ ಪರ್ಸ್ನಿಂದ ಕಡಿತಗೊಳಿಸಲಾಗಿದೆ)
ಆಟಗಾರ 2: ಅರ್ಷದೀಪ್ ಸಿಂಗ್ - ರೂ. 4 ಕೋಟಿ