
ರಾಹುಲ್ ಅದ್ಭುತ ಆಟಗಾರ
ಕೆಎಲ್ ರಾಹುಲ್ ಓರ್ವ ಅದ್ಭುತವಾದ ಆಟಗಾರ. ಆದರೆ ಕಳೆದ ಎರಡು ಪಂದ್ಯಗಳಲ್ಲಿ ಅವರು ಎಡವಿದರು. ಕೆಲ ಸಮಯಗಳಿಂದ ಅವರು ಸ್ಪರ್ಧಾತ್ಮಕ ಕ್ರಿಕೆಟ್ ಆಡದಿರುವುದು ಅದಕ್ಕೆ ಕಾರಣವಾಗಿರಬಹುದು. ಆದರೆ ಆತ ಶೀಘ್ರವಾಗಿ ಇದರಿಂದ ಹೊರಬರಬಲ್ಲವರಾಗಿದ್ದಾರೆ. ಅವರು ಡಿಸೆಂಬರ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಕ್ರಿಕೆಟ್ ಆಡಿದ್ದರು. ಇದೆಲ್ಲವನ್ನೂ ನಾವು ಅರ್ಥ ಮಾಡಿಕೊಳ್ಳಬೇಕು ಎಂದು ದೀಪ್ದಾಸ್ಗುಪ್ತ ಹೇಳಿದ್ದಾರೆ.

ಭುವಿ ಪ್ರದರ್ಶನ ಅದ್ಭುತ
ಇನ್ನು ಭಾರತದ ಬೌಲಿಂಗ್ ವಿಭಾಗದ ಬಗ್ಗೆಯೂ ದೀಪ್ದಾಸ್ ಗುಪ್ತ ಅಭಿಪ್ರಾಯವನ್ನು ಹಂಚಿಕೊಂಡರು. ಭುವನೇಶ್ವರ್ ಕುಮಾರ್ ಅದ್ಭುತವಾಗಿ ಪ್ರದರ್ಶನವನ್ನು ನೀಡುತ್ತಿದ್ದಾರೆ. ಅವರ ಲಭ್ಯತೆಯಲ್ಲಿ ದೀಪಕ್ ಚಾಹರ್ ತನ್ನ ಅವಕಾಶಕ್ಕಾಗಿ ಇನ್ನೂ ಕಾಯಬೇಕಾಬಹುದು ಎಂದು ಹೇಳಿದ್ದಾರೆ. ಇನ್ನು ಮೂರನೇ ಟಿ20 ಪಂದ್ಯ ಕೆಂಪು ಮಣ್ಣಿನಲ್ಲಿ ಆಡಲಾಗುತ್ತದೆ. ಇದು ಸ್ಪಿನ್ನರ್ಗಳಿಗೆ ಹೆಚ್ಚಿನ ಲಾಭವಾಗುವ ಸಾಧ್ಯತೆಯಿದೆ ಎಂದು ದೀಪ್ದಾಸ್ಗುಪ್ತ ಅಭಿಪ್ರಾಯಪಟ್ಟಿದ್ದಾರೆ.

ತಂಡಕ್ಕೆ ಮರಳಲಿರುವ ರೋಹಿತ್
ಅಹ್ಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣ ಮಂಗಳವಾರ ಮೂರನೇ ಪಂದ್ಯಕ್ಕೆ ಸಜ್ಜಾಗುತ್ತಿದೆ. ಭಾರತ ಎರಡನೇ ಪಂದ್ಯದ ತಂಡವನ್ನು ಬಹುತೇಕ ಉಳಿಸಿಕೊಳ್ಳುವ ಸಾಧ್ಯತೆಯಿದೆ. ಆದರೆ ರೋಹಿತ್ ಶರ್ಮಾ ಆಡುವ ಬಳಗದಲ್ಲಿ ಸೇರಿಸಿಕೊಳ್ಳುವುದರಿಂದ ಕೆಎಲ್ ರಾಹುಲ್ ಈ ಪಂದ್ಯದಲ್ಲಿ ವಿಶ್ರಾಂತಿ ಪಡೆಯುವ ಸಾಧ್ಯತೆ ಹೆಚ್ಚಿದೆ.


Click it and Unblock the Notifications
