ಮೊದಲ ಆಯ್ಕೆಯಲ್ಲಿ ಒಬ್ಬರಾದ ಶ್ರೇಯಸ್ ಅಯ್ಯರ್
ಭಾರತ ಏಕದಿನ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಶ್ರೇಯಸ್ ಅಯ್ಯರ್ ಮೊದಲ ಆಯ್ಕೆಗಳಲ್ಲಿ ಒಬ್ಬರಾಗಿದ್ದಾರೆ. ಸದ್ಯ ಶ್ರೇಯಸ್ ಅಯ್ಯರ್ 50 ಓವರ್ಗಳ ಕ್ರಿಕೆಟ್ನಲ್ಲಿ ಭಾರತ ತಂಡದ ಅತ್ಯುತ್ತಮ ನಂಬಿಕಸ್ಥ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರಾಗಿದ್ದಾರೆ. ಈ ಹಿಂದೆ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಿದ್ದಾರೆ ಮತ್ತು ಇದೀಗ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಸಾರಥ್ಯ ವಹಿಸಿದ್ದಾರೆ. 50 ಓವರ್ಗಳಲ್ಲಿ ರಾಷ್ಟ್ರೀಯ ತಂಡದ ನಾಯಕತ್ವಕ್ಕೆ ಪ್ರಮುಖ ಸ್ಪರ್ಧಿಗಳಲ್ಲಿ ಶ್ರೇಯಸ್ ಅಯ್ಯರ್ ಮೊದಲ ಸ್ಥಾನದಲ್ಲಿದ್ದಾರೆ.
ಹಾರ್ದಿಕ್ ಪಾಂಡ್ಯಗೆ ಫಿಟ್ನೆಸ್ ದೊಡ್ಡ ಸಮಸ್ಯೆ
ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಲು ಸಿದ್ಧರಾಗಿರುವ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ಏಕದಿನ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಲು ಪ್ರಮುಖ ಸ್ಪರ್ಧಿಯಾಗಿದ್ದಾರೆ. ಆದರೆ ಹಾರ್ದಿಕ್ ಪಾಂಡ್ಯಗೆ ಅವರ ಫಿಟ್ನೆಸ್ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಅವರು ತಮ್ಮ ಫಿಟ್ನೆಸ್ಗಾಗಿ ಕಷ್ಟಪಡುತ್ತಿದ್ದಾರೆ. ಅದೃಷ್ಟವಶಾತ್ ಕಳೆದ ಒಂದು ವರ್ಷದಿಂದ ಹಾರ್ದಿಕ್ ಪಾಂಡ್ಯ ಯಾವುದೇ ಗಾಯಕ್ಕೆ ತುತ್ತಾಗಿಲ್ಲ. ಅವರು ತಾವು ಫಿಟ್ ಎಂಬುದನ್ನು ಸಾಬೀತುಪಡಿಸಿದರೆ 2023ರ ವಿಶ್ವಕಪ್ ನಂತರ ಭಾರತದ ವೈಟ್ ಬಾಲ್ ನಾಯಕರಾಗುವ ಸಾಧ್ಯತೆ ಇದೆ.
ವಿಕೆಟ್ ಕೀಪರ್- ಬ್ಯಾಟ್ಸ್ಮನ್ ರಿಷಭ್ ಪಂತ್
ಭಾರತದ ವಿಕೆಟ್ಕೀಪರ್ ಮತ್ತು ಎಡಗೈ ಬ್ಯಾಟರ್ ರಿಷಭ್ ಪಂತ್ ಕೂಡ ಏಕದಿನ ತಂಡದ ನಾಯಕತ್ವ ನಿಭಾಯಿಸುವ ಸ್ಪರ್ಧಿಗಳಲ್ಲಿ ಸ್ಥಾನ ಪಡೆಯುತ್ತಾರೆ. ರಿಷಭ್ ಪಂತ್ ವೈಟ್ ಬಾಲ್ ಕ್ರಿಕೆಟ್ನಲ್ಲಿ ಉತ್ತಮ ಫಾರ್ಮ್ನಲ್ಲಿ ಇಲ್ಲದಿರಬಹುದು. ಆದರೆ ಪಂತ್ ಬ್ಯಾಟ್ನೊಂದಿಗೆ ಫಾರ್ಮ್ಗೆ ಮರಳಿದರೆ, ಅವರು ನಾಯಕತ್ವ ಜವಾಬ್ದಾರಿ ಹೊತ್ತುಕೊಳ್ಳುವ ರೇಸ್ನಲ್ಲಿ ಪ್ರಮುಖ ಆಟಗಾರನಾಗಿರುತ್ತಾರೆ.
ಉಪನಾಯಕರಾಗಿರುವ ಕನ್ನಡಿಗ ಕೆಎಲ್ ರಾಹುಲ್
ಅಗ್ರ ಕ್ರಮಾಂಕದ ಬ್ಯಾಟ್ಸ್ಮನ್ ಕೆಎಲ್ ರಾಹುಲ್ ಭಾರತ ತಂಡದ ಉಪನಾಯಕರಾಗಿದ್ದಾರೆ. ಕನ್ನಡಿಗ ಕೆಎಲ್ ರಾಹುಲ್ ಭಾರತ ಏಕದಿನ ತಂಡವನ್ನು ಮುನ್ನಡೆಸಲು ಅಗ್ರ ಸ್ಪರ್ಧಿಯಾಗಿದ್ದಾರೆ. ಆದರೆ ಅದಾಗಬೇಕಾದರೆ ಮೊದಲು, ರಾಹುಲ್ ತಾವು ಬ್ಯಾಟ್ನಿಂದ ರನ್ ಗಳಿಸುತ್ತೇನೆ ಎಂಬುದನ್ನು ಸಾಬೀತುಪಡಿಸಬೇಕಿದೆ. ಒಂದು ವೇಳೆ ವಿಫಲವಾದರೆ, ಇತರರು ಆ ಅವಕಾಶವನ್ನು ಪಡೆದುಕೊಳ್ಳಬಹುದು.
ಬಾಂಗ್ಲಾದೇಶದ ವಿರುದ್ಧ ಸತತ ಎರಡು ಪಂದ್ಯ ಮತ್ತು ಏಕದಿನ ಸರಣಿ ಸೋಲನ್ನು ಗಂಭೀರವಾಗಿ ತೆಗೆದುಕೊಂಡಿರುವ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೋಲಿನ ನಂತರ ಮುಂಬೈನಲ್ಲಿ ಪರಾಮರ್ಶೆ ಸಭೆಯನ್ನು ನಡೆಸಲು ಸಿದ್ಧವಾಗಿದೆ. ಇದು ಭಾರತ ತಂಡದ ನಾಯಕತ್ವದ ಬದಲಾವಣೆಗೆ ಮುನ್ನುಡಿ ಬರೆಯಲಿದೆ ಎಂದೇ ಹೇಳಲಾಗುತ್ತಿದೆ.