
ಗೆದ್ದರೆ ಫೈನಲ್ಗೆ ಅರ್ಹತೆ
ದೆಹಲಿಯ ಟೆಸ್ಟ್ ಗೆದ್ದರೆ ಭಾರತ ತಂಡ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ಅರ್ಹತೆ ಪಡೆಯುವುದು ಬಹುತೇಕ ಖಚಿತವಾಗಲಿದೆ. ದೆಹಲಿ ಪಂದ್ಯ ಗೆದ್ದು ಉಳಿದ ಎರಡು ಟೆಸ್ಟ್ಗಳನ್ನು ಡ್ರಾ ಮಾಡಿಕೊಂಡರು ಭಾರತ-ಆಸ್ಟ್ರೇಲಿಯಾ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ಮುಖಾಮುಖಿಯಾಗಲಿವೆ.
ಕಳೆದ 36 ವರ್ಷಗಳಿಂದ ದೆಹಲಿ ಅಂಗಳದಲ್ಲಿ ಸೋಲು ಕಾಣದಿರುವ ಭಾರತ ತಂಡ ಈ ಪಂದ್ಯದಲ್ಲಿ ಗೆಲ್ಲುವ ನೆಚ್ಚಿನ ತಂಡವಾಗಿದೆ. ಮೊದಲನೇ ಟೆಸ್ಟ್ ಪಂದ್ಯದಲ್ಲಿ ಸೋತಿರುವ ಆಸ್ಟ್ರೇಲಿಯಾ ತಪ್ಪುಗಳನ್ನು ಸರಿಪಡಿಸಿಕೊಂಡು ಕಠಿಣ ಪೈಪೋಟಿ ನೀಡಲು ಸಿದ್ಧವಾಗಿದೆ.

ಸ್ಪಿನ್ಗೆ ಹೆಚ್ಚಿನ ನೆರವು
ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮೊದಲಿನಿಂದಲೂ ಸ್ಪಿನ್ನರ್ ಗಳು ಹೆಚ್ಚಿನ ನೆರವು ಪಡೆಯುತ್ತಿದ್ದಾರೆ. ಪಂದ್ಯದ ಮೊದಲ ಎರಡು ದಿನ ಬ್ಯಾಟಿಂಗ್ ಮಾಡಲು ಕೂಡ ಉತ್ತಮವಾಗಿರುತ್ತದೆ. ಆದರೆ ನಂತರದ ಮೂರು ದಿನಗಳು ಸ್ಪಿನ್ನರ್ ಗಳು ಪಾರಮ್ಯ ಮೆರೆಯಲಿದ್ದಾರೆ.
ಮೊದಲ ಟೆಸ್ಟ್ನಲ್ಲಿ ಮೂವರು ಸ್ಪಿನ್ನರ್ ಗಳೊಂದಿಗೆ ಕಣಕ್ಕಿಳಿದಿದ್ದ ಭಾರತ ತಂಡ ಎರಡನೇ ಪಂದ್ಯದಲ್ಲಿ ನಾಲ್ವರು ಸ್ಪಿನ್ನರ್ ಗಳೊಂದಿಗೆ ಆಡುವ ಸಾಧ್ಯತೆ ಇದೆ. ಕುಲದೀಪ್ ಯಾದವ್ ತಂಡಕ್ಕೆ ಬರುವ ಬಗ್ಗೆ ಚಿಂತನೆ ನಡೆಯುತ್ತಿದೆ. ಆದರೆ, ಕುಲದೀಪ್ಗೆ ಯಾರು ಜಾಗ ಬಿಟ್ಟುಕೊಡುತ್ತಾರೆ ಎಂದು ಕಾದು ನೋಡಬೇಕಿದೆ.

ಚೇತನ್ ಶರ್ಮಾ ವಿವಾದ
ಎರಡನೇ ಟೆಸ್ಟ್ಗೆ ಮುನ್ನ ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಚೇತನ್ ಶರ್ಮಾ ಝೀ ಸುದ್ದಿ ವಾಹಿನಿಯ ಕುಟುಕು ಕಾರ್ಯಾಚರಣೆಯಲ್ಲಿ ಹಲವು ಸ್ಫೋಟಕ ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ.
ಟೀಂ ಇಂಡಿಯಾ ಆಟಗಾರರು ಫಿಟ್ನೆಸ್ಗಾಗಿ ಚುಚ್ಚುಮದ್ದು ತೆಗೆದುಕೊಳ್ಳುತ್ತಾರೆ ಎಂದು ಗಂಭಿರವಾದ ಆರೋಪ ಮಾಡಿದ್ದಾರೆ. ವಿರಾಟ್ ಕೊಹ್ಲಿಯನ್ನು ಸೌರವ್ ಗಂಗೂಲಿ ದ್ವೇಷಿಸುತ್ತಿದ್ದರು, ಅವರನ್ನು ಉದ್ದೇಶಪೂರ್ವಕವಾಗಿಯೇ ನಾಯಕತ್ವದಿಂದ ಕೆಳಗಿಳಿಸಲಾಯಿತು ಎಂದು ಹೇಳಿದ್ದಾರೆ. ಈ ಬಗ್ಗೆ ಬಿಸಿಸಿಐ ಏನೂ ಸ್ಪಷ್ಟನೆ ನೀಡಿಲ್ಲವಾದರೂ, ಆಸ್ಟ್ರೇಲಿಯಾ ಮಾಧ್ಯಮಗಳು ಇದನ್ನೇ ಮುಂದಿಟ್ಟುಕೊಂಡು ವಿವಾದಗಳನ್ನು ಸೃಷ್ಟಿಸುವ ಸಾಧ್ಯತೆ ಇದೆ.


Click it and Unblock the Notifications












