ಗುರುವಾರ, ನವೆಂಬರ್ 23ರಂದು ವಿಶಾಖಪಟ್ಟಣದ ವೈಎಸ್ ರಾಜಶೇಖರ್ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುವ 5 ಪಂದ್ಯಗಳ ಸರಣಿಯ ಮೊದಲ ಟಿ20 ಪಂದ್ಯದಲ್ಲಿ ಆತಿಥೇಯ ಭಾರತ ತಂಡವು ಪ್ರವಾಸಿ ಆಸ್ಟ್ರೇಲಿಯಾ ತಂಡದ ವಿರುದ್ಧ ಸೆಣಸಾಡುತ್ತಿದೆ.
ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬೌಲಿಂಗ್ ಆಯ್ದುಕೊಂಡರು. ಹೀಗಾಗಿ ಮ್ಯಾಥ್ಯೂ ವೇಡ್ ನಾಯಕತ್ವದ ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

ಅಹಮದಾಬಾದ್ನಲ್ಲಿ ಉಭಯ ತಂಡಗಳು ಏಕದಿನ ವಿಶ್ವಕಪ್ನ ಫೈನಲ್ ಪಂದ್ಯವನ್ನು ಆಡಿದ ನಾಲ್ಕು ದಿನಗಳ ನಂತರ ಟಿ20 ಸರಣಿಯು ಆರಂಭವಾಗುತ್ತಿದೆ. ಭಾರತ ಯುವ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸುತ್ತಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಭಾರತವು ತನ್ನ ಎರಡನೇ ತಂಡವನ್ನು ಆಯ್ಕೆ ಮಾಡುವುದರಿಂದ, ಮೊದಲ ಪಂದ್ಯದಲ್ಲಿ ಗೆದ್ದು 2023ರ ಏಕದಿನ ವಿಶ್ವಕಪ್ ಫೈನಲ್ ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.
ಭಾರತ ತಂಡ: ರುತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್(ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್(ನಾಯಕ), ತಿಲಕ್ ವರ್ಮಾ, ರಿಂಕು ಸಿಂಗ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್, ಮುಖೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ.
ಆಸ್ಟ್ರೇಲಿಯಾ ತಂಡ: ಮ್ಯಾಥ್ಯೂ ಶಾರ್ಟ್, ಸ್ಟೀವನ್ ಸ್ಮಿತ್, ಜೋಶ್ ಇಂಗ್ಲಿಸ್, ಆರನ್ ಹಾರ್ಡಿ, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್(ನಾಯಕ/ ವಿಕೆಟ್ ಕೀಪರ್), ಸೀನ್ ಅಬ್ಬೋಟ್, ನಾಥನ್ ಎಲ್ಲಿಸ್, ಜೇಸನ್ ಬೆಹ್ರೆಂಡಾರ್ಫ್, ತನ್ವೀರ್ ಸಂಘ.