ಫೆಬ್ರವರಿ 9ರಿಂದ ಮೊದಲ ಟೆಸ್ಟ್ ಪಂದ್ಯ
ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಫೆಬ್ರವರಿ 9ರಿಂದ ಮೊದಲ ಪಂದ್ಯ ನಡೆಯಲಿದ್ದರೆ, ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಫೆಬ್ರವರಿ 17ರಿಂದ ಎರಡನೇ ಟೆಸ್ಟ್ ಪಂದ್ಯ ನಡೆಯಲಿದೆ. ಅಂತಿಮ ಎರಡು ಟೆಸ್ಟ್ ಪಂದ್ಯಗಳು ಕ್ರಮವಾಗಿ ಧರ್ಮಶಾಲಾ ಮತ್ತು ಅಹಮದಾಬಾದ್ನಲ್ಲಿ ನಡೆಯಲಿವೆ.
ಶುಕ್ರವಾರದಂದು ಬಿಸಿಸಿಐ ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು ಟೆಸ್ಟ್ಗಳಿಗೆ ಭಾರತೀಯ ತಂಡವನ್ನು ಆಯ್ಕೆ ಮಾಡಿತು. ಈ ವೇಳೆ ಸುದೀರ್ಘ ವಿಶ್ರಾಂತಿಯ ಬಳಿಕ ರವೀಂದ್ರ ಜಡೇಜಾ ಅವರನ್ನು ತಂಡದಲ್ಲಿ ಹೆಸರಿಸಲಾಗಿದೆ.
ಆದರೆ, ಜಡೇಜಾ ಅವರ ಆಯ್ಕೆಯು ಫಿಟ್ನೆಸ್ ಮೇಲೆ ನಿಂತಿದ್ದು, ಟೆಸ್ಟ್ ಪಂದ್ಯಗಳಿಗೆ ಫಿಟ್ ಎಂದು ಎನ್ಸಿಎ ಘೋಷಿಸಿದರೆ ಮಾತ್ರ, ರವೀಂದ್ರ ಜಡೇಜಾಗೆ ಟೆಸ್ಟ್ ಆಡಲು ಅವಕಾಶ ನೀಡಲಾಗುವುದು ಎಂದು ಬಿಸಿಸಿಐ ತಿಳಿಸಿದೆ.
ಮಧ್ಯಮ ಕ್ರಮಾಂಕದಲ್ಲಿ ಭಾರತ ತಂಡಕ್ಕೆ ಸಮತೋಲನ
ಭಾರತದ ಟೆಸ್ಟ್ ಮತ್ತು ಸೀಮಿತ ಓವರ್ಗಳ ಸ್ವರೂಪಗಳಲ್ಲಿ 5 ಅಥವಾ 6ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ರವೀಂದ್ರ ಜಡೇಜಾ, ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ಅಗ್ರ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಜೊತೆಗೆ ಮಧ್ಯಮ ಕ್ರಮಾಂಕದಲ್ಲಿ ತಂಡಕ್ಕೆ ಸಮತೋಲನ ಒದಗಿಸಲಿದ್ದಾರೆ.
ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ಸ್ಥಾನವನ್ನು ಪಡೆಯಲು ಎದುರು ನೋಡುತ್ತಿರುವ ಕಾರಣ, ಈ ಸರಣಿಯು ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳಿಗೆ ಮಹತ್ವದ್ದಾಗಿದೆ.
ಇನ್ನು, ರಣಜಿ ಟ್ರೋಫಿಯಲ್ಲಿ ಸೌರಾಷ್ಟ್ರ ತಂಡ ಆಡಿದ ಐದು ಪಂದ್ಯಗಳಿಂದ ಮೂರು ಸಂಪೂರ್ಣ ಗೆಲುವಿನಿಂದ 26 ಅಂಕಗಳೊಂದಿಗೆ ಬಿ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ.
ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು ಟೆಸ್ಟ್ಗಳಿಗೆ ಭಾರತ ಟೆಸ್ಟ್ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಸೂರ್ಯಕುಮಾರ್ ಯಾದವ್.