ಕಳೆದ ವರ್ಷ ಪಂದ್ಯದ ಟೆಸ್ಟ್ ಸ್ವರೂಪದಲ್ಲಿ 422 ರನ್
ಶ್ರೇಯಸ್ ಅಯ್ಯರ್ ಕಳೆದ ವರ್ಷ ಪಂದ್ಯದ ಟೆಸ್ಟ್ ಸ್ವರೂಪದಲ್ಲಿ 422 ರನ್ ಗಳಿಸಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರು. 680 ರನ್ ಗಳಿಸಿದ್ದ ರಿಷಭ್ ಪಂತ್ ಮೊದಲ ಸ್ಥಾನದಲ್ಲಿದ್ದರು.
ಶ್ರೇಯಸ್ ಅಯ್ಯರ್ 2022ರಲ್ಲಿ ಏಕದಿನ ಕ್ರಿಕೆಟ್ನಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. 50 ಓವರ್ಗಳ ಸ್ವರೂಪದಲ್ಲಿ 724 ರನ್ ಗಳಿಸಿದ್ದ ಅಯ್ಯರ್, ಭಾರತ ತಂಡದ ವೇಗಿ ಮೊಹಮ್ಮದ್ ಸಿರಾಜ್ ಜೊತೆಗೆ 2022ರ ಐಸಿಸಿ ಏಕದಿನ ತಂಡದಲ್ಲಿ ಸ್ಥಾನ ಪಡೆಯಲು ಸಹಾಯ ಮಾಡಿತು.
ಶ್ರೇಯಸ್ ಅಯ್ಯರ್ ಭಾರತದ ಮಧ್ಯಮ ಕ್ರಮಾಂಕದ ಪ್ರಮುಖ ಬ್ಯಾಟರ್
ಇನ್ನು ಕಳೆದ ಡಿಸೆಂಬರ್ನಲ್ಲಿ ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರಿಷಭ್ ಪಂತ್ ಸುದೀರ್ಘ ಕಾಲದವರೆಗೆ ಕ್ರಿಕೆಟ್ನಿಂದ ಹೊರಗುಳಿಯಲಿದ್ದಾರೆ. ತನ್ನ ಯೂಟ್ಯೂಬ್ ಚಾನೆಲ್ನಲ್ಲಿ ಮಾತನಾಡಿದ ರವಿಚಂದ್ರನ್ ಅಶ್ವಿನ್, "ಕಳೆದ ಎರಡು ವರ್ಷಗಳಲ್ಲಿ ವಿಕೆಟ್ಕೀಪರ್- ಬ್ಯಾಟರ್ ರಿಷಭ್ ಪಂತ್ ಜೊತೆಗೆ ಶ್ರೇಯಸ್ ಅಯ್ಯರ್ ಭಾರತದ ಮಧ್ಯಮ ಕ್ರಮಾಂಕದ ಪ್ರಮುಖ ಬ್ಯಾಟರ್ ಆಗಿದ್ದಾರೆ," ಎಂದು ಹೇಳಿದರು.
ಶ್ರೇಯಸ್ ಅಯ್ಯರ್ ಭಾರತೀಯ ಟೆಸ್ಟ್ ತಂಡದ ಬ್ಯಾಟಿಂಗ್ ಕ್ರಮಾಂಕದ ಬೆನ್ನೆಲುಬು ಎಂದು ಶ್ಲಾಘಿಸಿದ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ಗಾಯಾಳು ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್ ನಿರ್ಣಾಯಕ ಆಟಗಾರರಾಗಲಿದ್ದಾರೆ ಎಂದು ಹೇಳಿದರು.
ಮೊದಲ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಆಡಲ್ಲ
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಗೂ ಮುನ್ನ ಶ್ರೇಯಸ್ ಅಯ್ಯರ್ ಬೆನ್ನು ನೋವಿನ ಸಮಸ್ಯೆಯಿಂದ ಇನ್ನೂ ಚೇತರಿಸಿಕೊಂಡಿಲ್ಲ. ಹೀಗಾಗಿ ಭಾರತ ತಂಡವು ಮೊದಲ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಅವರ ಸೇವೆ ಕಳೆದುಕೊಳ್ಳಲಿದೆ.
ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿ ಸಮಯದಲ್ಲಿ ಬೆನ್ನು ನೋವು ಕಾಣಿಸಿಕೊಂಡ ಕಾರಣ, ಆ ಸರಣಿಯಿಂದಲೂ ಹೊರಬಿದ್ದಿದ್ದರು. ಇದೀಗ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದಾರೆ.
ಇದೇ ವೇಳೆ, ಶ್ರೇಯಸ್ ಅಯ್ಯರ್ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಬಲಗೈ ಆಫ್-ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ಬೆನ್ನು ನೋವಿಗೆ ಇಂಜೆಕ್ಷನ್ ಶ್ರೇಯಸ್ ಅಯ್ಯರ್ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.