ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟೆಸ್ಟ್ ಸರಣಿಗೂ ಮುನ್ನ ಅಂತಿಮ ಏಕದಿನ ಗೆಲ್ಲುವುದು ಬಹಳ ಮುಖ್ಯ: ಸುನಿಲ್ ಗವಾಸ್ಕರ್

Ind vs Ban: Sunil Gavaskar said Winning the 3rd ODI is important before Test series

ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿ ಸೋಲು ಟೀಮ್ ಇಂಡಿಯಾ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಈ ಸರನಿಯ ಅಂತಿಮ ಪಂದ್ಯ ನಡೆಯಲಿದ್ದು ಅದಾದ ಬಳಿಕ ಟೆಸ್ಟ್ ಸರಣಿ ಆರಂಭವಾಗಲಿದೆ. ಇದೀಗ ಅಂತಿಮ ಪಂದ್ಯಕ್ಕೂ ಮುನ್ನ ಮಾತನಾಡಿರುವ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಟೆಸ್ಟ್ ಸರಣಿಗೂ ಮುನ್ನ ಅಂತಿಮ ಏಕದಿನ ಪಂದ್ಯವನ್ನು ಗೆಲ್ಲುವುದು ಭಾರತದ ಪಾಲಿಗೆ ಬಹಳ ಮುಖ್ಯವಾಗುತ್ತದೆ ಎಂದಿದ್ದಾರೆ. ಅದಕ್ಕೆ ಅವರು ಕಾರಣವನ್ನು ಕೂಡ ನೀಡಿದ್ದಾರ.

ಬುಧವಾರ ಏಕದಿನ ಸರಣಿಯ 2ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 272 ರನ್‌ಗಳ ಗುರಿ ಬೆನ್ನಟ್ಟಲು ವಿಫಲವಾದ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾ ಸತತ ಎರಡನೇ ಏಕದಿನ ಸರಣಿ ಸೋಲು ಅನುಭವಿಸಿದೆ. ಇನ್ನು 2015ರಲ್ಲಿ ಮೊದಲ ಬಾರಿಗೆ ಎಂಎಸ್ ಧೋನಿ ನಾಯಕತ್ವದಲ್ಲಿ ಬಾಂಗ್ಲಾದೇಶದ ವಿರುದ್ಧ ಭಾರತ ಏಕದಿನ ಸರಣಿಯನ್ನು ಕಳೆದುಕೊಂಡಿತ್ತು.

ಗಾಯದ ನಡುವೆಯೂ ಛಲ ಬಿಡದೆ ಸ್ಪರ್ಧಿಸಿ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಗೆದ್ದ ಮೀರಾಬಾಯಿ ಚಾನುಗಾಯದ ನಡುವೆಯೂ ಛಲ ಬಿಡದೆ ಸ್ಪರ್ಧಿಸಿ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಗೆದ್ದ ಮೀರಾಬಾಯಿ ಚಾನು

ಸತತ ಏಕದಿನ ಸರಣಿಯ ಸೋಲಿನ ಬಳಿಕ ಟೀಮ್ ಇಂಡಿಯಾ ವೈಟ್ ಬಾಲ್‌ನಲ್ಲಿ ಆಡುವ ವಿಧಾನದ ಬಗ್ಗೆ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಅವರಲ್ಲಿ ಪ್ರಶ್ನಿಸಲಾಯಿತು. ಈ ಸಂದರ್ಭದಲ್ಲಿ ಅವರು ಡಿಸೆಂಬರ್ 14 ರಿಂದ ಪ್ರಾರಂಭವಾಗುವ ಟೆಸ್ಟ್ ಸರಣಿಯನ್ನು ಕಣಕ್ಕಿಳಿಯುವ ಮುನ್ನ ಅಂತಿಮ ಏಕದಿನ ಪಂದ್ಯದಲ್ಲಿ ಗೆಲುವು ಸಾಧಿಸುವುದು ಮುಖ್ಯವಾಗುತ್ತದೆ ಎಂದಿದ್ದಾರೆ.

"ಭಾರತ ತನ್ನ ಬಲಿಷ್ಠ ಆಟಗಾರರ ಬಳಗದೊಂದಿಗೆ ಅಂತಿಮ ಪಂದ್ಯದಲ್ಲಿ ಆಡಲು ಇಳಿಯಬೇಕಿದೆ. ಟೆಸ್ಟ್ ಸರಣಿಯಲ್ಲಿ ಆಡುವುದಕ್ಕೂ ಮುನ್ನ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಲು ಅಂತಿಮ ಏಕದಿನ ಪಂದ್ಯ ಬಹಳ ಮುಖ್ಯವಾಗುತ್ತದೆ. ಟೆಸ್ಟ್ ತಂಡ ಮತ್ತು ಏಕದಿನ ತಂಡದ ಸಂಯೋಜನೆ ಸ್ವಲ್ಪ ವಿಭಿನ್ನವಾಗಿರಲಿದೆ. ಆದರೆ ಉತ್ತಮ ಬ್ಯಾಟಿಂಗ್ ಮತ್ತು ಬೌಲಿಂಗ್ ಪಡೆಯನ್ನು ಹೊಂದಿರುವ ತಂಡದ ವಿರುದ್ಧ ಬಾಂಗ್ಲಾದೇಶ ಅತ್ಯುತ್ತಮ ಪ್ರದರ್ಶನ ನೀಡಿದೆ. ಹೀಗಾಗಿ ಭಾರತ ಅಂತಿಮ ಪಂದ್ಯವನ್ನು ಗೆಲ್ಲಲೇಬೇಕಿದ್ದು ಈ ಮೂಲಕ ಈ ಸರಣಿಯಲ್ಲಿ ಭಾರತ ಸೋಲಿನ ಅಂತರವನ್ನು 2-1ಕ್ಕೆ ತಗ್ಗಿಸಬೇಕಾಗಿದೆ. ಇನ್ನು 3ನೇ ಏಕದಿನ ಪಂದ್ಯ ಗೆದ್ದು ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಿ ಮತ್ತು ಚಿತ್ತಗಾಂಗ್‌ನಲ್ಲಿ ಟೆಸ್ಟ್ ಗೆಲ್ಲಲು ಪ್ರಯತ್ನಿಸಿ" ಎಂದಿದ್ದಾರೆ ಸುನಿಲ್ ಗವಾಸ್ಕರ್.

ಬಾಂಗ್ಲಾದೇಶ ವಿರುದ್ಧದ ಅಂತಿಮ ಏಕದಿನ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಆಟಗಾರರು ಗಾಯಕ್ಕೊಳಗಾಗಿವುದು ಆಘಾತ ನೀಡಿದೆ. ಕನಿಷ್ಠ ಮೂವರು ಆಟಗಾರರು ಸರಣಿಯ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಿಂದ ಹೊರಗುಳಿಯುವುದು ಸ್ಪಷ್ಟವಾಗಿದೆ. ಕೋಚ್ ರಾಹುಲ್ ದ್ರಾವಿಡ್ ಈ ಬಗ್ಗೆ ಖಚಿತ ಮಾಹಿತಿ ನೀಡಿದ್ದಾರೆ. ನಾಯಕ ರೋಹಿತ್ ಶರ್ಮಾ ವೇಗಿಗಳಾದ ದೀಪಕ್ ಚಹರ್ ಹಾಗೂ ಕುಲ್‌ದೀಪ್ ಸೇನ್ ಗಾಯದ ಕಾರಣದಿಂದಾಗಿ ಅಂತಿಮ ಪಂದ್ಯದಿಂದ ಹೊರಗುಳಿಯಲಿದ್ದಾರೆ.

ರೋಹಿತ್ ಶರ್ಮಾ ಫಿಲ್ಡಿಂಗ್ ವೇಳೆ ಚೆಂಡು ಕೈಗೆ ತಾಗಿ ಗಾಯಗೊಂಡಿದ್ದರು. ಫಿಲ್ಡಿಂಗ್ ಸಂದರ್ಭದಲ್ಲಿ ಮೈದಾನದಿಂದ ಹೊರಗುಳಿದಿದ್ದ ರೋಹಿತ್ ಬಳಿಕ ಬ್ಯಾಟಿಂಗ್‌ನಲ್ಲಿ ಅಂತಿಮ ಹಂತದಲ್ಲಿ ಕಣಕ್ಕಿಳಿದಿದ್ದರು. ಇನ್ನು ವೇಗಿ ದೀಪಕ್ ಚಹರ್ ಬೌಲಿಂಗ್‌ ಸಂದರ್ಭದಲ್ಲಿ ಗಾಯಗೊಂಡಿದ್ದು ಕೇವಲ 3 ಓವರ್‌ಗಳ ಬೌಲಿಂಗ್ ಮಾತ್ರವೇ ನಡೆಸಿದ್ದಾರೆ. ಇನ್ನು ಕುಲ್‌ದೀಪ್ ಸೇನ್ ಮೊದಲ ಪಂದ್ಯದಲ್ಲಿ ಗಾಯಗೊಂಡಿರುವ ಕಾರಣದಿಂದಾಗಿ ಎರಡನೇ ಪಂದ್ಯದಲ್ಲಿಯೂ ಆಡಿರಲಿಲ್ಲ.

AUS vs WI: 2ನೇ ಟೆಸ್ಟ್‌ನಿಂದ ಪ್ಯಾಟ್ ಕಮ್ಮಿನ್ಸ್ ಔಟ್, ಸ್ಟೀವ್ ಸ್ಮಿತ್‌ಗೆ ಮತ್ತೆ ಆಸೀಸ್ ನಾಯಕತ್ವAUS vs WI: 2ನೇ ಟೆಸ್ಟ್‌ನಿಂದ ಪ್ಯಾಟ್ ಕಮ್ಮಿನ್ಸ್ ಔಟ್, ಸ್ಟೀವ್ ಸ್ಮಿತ್‌ಗೆ ಮತ್ತೆ ಆಸೀಸ್ ನಾಯಕತ್ವ

ಬಾಂಗ್ಲಾದೇಶ ತಂಡ: ಲಿಟನ್ ದಾಸ್ (ನಾಯಕ), ಅನಾಮುಲ್ ಹಕ್, ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಮ್, ಅಫೀಫ್ ಹೊಸೈನ್, ಯಾಸಿರ್ ಅಲಿ, ಮೆಹಿದಿ ಹಸನ್ ಮಿರಾಜ್, ಮುಸ್ತಾಫಿಜುರ್ ರೆಹಮಾನ್, ತಸ್ಕಿನ್ ಅಹ್ಮದ್, ಹಸನ್ ಮಹಮೂದ್, ಎಬಾಡೋತ್ ಹೊಸೈನ್, ನಸುಮ್ ಅಹ್ಮದ್, ಮಹಮ್ಮದುಲ್ಲಾ, ನಜ್ಮುಲ್ ಹೊಸೈನ್ ಶಾಂಟೋ, ನೂರುಲ್ ಹಸನ್

ಭಾರತ ತಂಡ: ಕೆಎಲ್ ರಾಹುಲ್, ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಶಹಬಾಜ್ ಅಹ್ಮದ್, ಉಮ್ರಾನ್ ಮಲಿಕ್

Story first published: Thursday, December 8, 2022, 14:49 [IST]
Other articles published on Dec 8, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X