
ಕೆಎಲ್ ರಾಹುಲ್ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ
ಪ್ರಸ್ತುತ ಬಾಂಗ್ಲಾದೇಶ ಪ್ರವಾಸದಲ್ಲಿರುವ ಭಾರತ 'ಎ' ತಂಡದ ಪರ ಎರಡು ಪಂದ್ಯಗಳಲ್ಲಿ 299 ರನ್ ಗಳಿಸಿದ ನಂತರ ಅಭಿಮನ್ಯು ಈಶ್ವರನ್ ತಂಡಕ್ಕೆ ಆಯ್ಕೆಯಾದರು. ಎರಡನೇ ಮತ್ತು ಅಂತಿಮ ಟೆಸ್ಟ್ಗೆ ರೋಹಿತ್ ಶರ್ಮಾ ಅವರ ಲಭ್ಯತೆಯ ಬಗ್ಗೆ ನಂತರ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಬಿಸಿಸಿಐ ತಿಳಿಸಿದೆ.
"ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ಬಾಂಗ್ಲಾದೇಶ ವಿರುದ್ಧದ 2ನೇ ಏಕದಿನ ಪಂದ್ಯದ ವೇಳೆ ಎಡಗೈ ಹೆಬ್ಬೆರಳಿನ ಗಾಯಕ್ಕೆ ತುತ್ತಾದ ನಂತರ ಮುಂಬೈನಲ್ಲಿ ತಜ್ಞ ವೈದ್ಯರನ್ನು ಭೇಟಿ ಮಾಡಿದ್ದಾರೆ. ಈ ಗಾಯಕ್ಕೆ ಸೂಕ್ತ ನಿರ್ವಹಣೆಗೆ ಅವರಿಗೆ ಸಲಹೆ ನೀಡಲಾಗಿದೆ ಮತ್ತು ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ಗೆ ಲಭ್ಯವಿರುವುದಿಲ್ಲ," ಎಂದು ಬಿಸಿಸಿಐ ಹೇಳಿದೆ.

ರೋಹಿತ್ ಶರ್ಮಾ ಬದಲಿಯಾಗಿ ಅಭಿಮನ್ಯು ಈಶ್ವರನ್ ಆಯ್ಕೆ
"ಬಿಸಿಸಿಐ ವೈದ್ಯಕೀಯ ತಂಡವು ಎರಡನೇ ಮತ್ತು ಅಂತಿಮ ಟೆಸ್ಟ್ಗೆ ಅವರ ಲಭ್ಯತೆಯ ಬಗ್ಗೆ ನಂತರದ ಹಂತದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಭಾರತ ತಂಡದ ಹಿರಿಯ ಆಯ್ಕೆ ಸಮಿತಿಯು ಅಭಿಮನ್ಯು ಈಶ್ವರನ್ ಅವರನ್ನು ಮೊದಲ ಟೆಸ್ಟ್ಗೆ ರೋಹಿತ್ ಶರ್ಮಾ ಬದಲಿಯಾಗಿ ಆಯ್ಕೆಮಾಡಲಾಗಿದೆ," ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.
ಇದೇ ವೇಳೆ ನವದೀಪ್ ಸೈನಿ ಮತ್ತು ಸೌರಭ್ ಕುಮಾರ್ ಅವರನ್ನು ಕೂಡ ಭಾರತ ಟೆಸ್ಟ್ ತಂಡಕ್ಕೆ ಸೇರಿಸಲಾಗಿದೆ. ವೇಗಿ ಮೊಹಮ್ಮದ್ ಶಮಿ ಮತ್ತು ಆಲ್ರೌಂಡರ್ ರವೀಂದ್ರ ಜಡೇಜಾ ಇನ್ನೂ ತಮ್ಮ ಗಾಯಗಳಿಂದ ಚೇತರಿಸಿಕೊಂಡಿಲ್ಲದೆ ಕಾರಣ, ಅನುಭವಿ ವೇಗಿ ಜಯದೇವ್ ಉನದ್ಕತ್ ಅವರನ್ನು ತಂಡಕ್ಕೆ ಕರೆತರಲಾಗಿದೆ.

ನವದೀಪ್ ಸೈನಿ ಮತ್ತು ಸೌರಭ್ ಕುಮಾರ್ ಆಯ್ಕೆ
"ಭಾರತ ತಂಡದ ಹಿರಿಯ ವೇಗದ ಬೌಲರ್ ಮೊಹಮ್ಮದ್ ಶಮಿ ಮತ್ತು ಆಲ್ರೌಂಡರ್ ರವೀಂದ್ರ ಜಡೇಜಾ ಕ್ರಮವಾಗಿ ತಮ್ಮ ಭುಜ ಮತ್ತು ಮೊಣಕಾಲಿನ ಗಾಯಗಳಿಂದ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ".
"ಭಾರತ ತಂಡದ ಆಯ್ಕೆ ಸಮಿತಿಯು ಮೊಹಮ್ಮದ್ ಶಮಿ ಮತ್ತು ರವೀಂದ್ರ ಜಡೇಜಾ ಬದಲಿಗೆ ನವದೀಪ್ ಸೈನಿ ಮತ್ತು ಸೌರಭ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಇನ್ನು ಜಯದೇವ್ ಉನದ್ಕತ್ ಅವರನ್ನು ಟೆಸ್ಟ್ ಸರಣಿಗಾಗಿ ಭಾರತ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ," ಎಂದು ಬಿಸಿಸಿಐ ಪ್ರಕಟಿಸಿದೆ.

ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಪಂದ್ಯಗಳಿಗೆ ಭಾರತ ತಂಡ
ಕೆಎಲ್ ರಾಹುಲ್ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಅಭಿಮನ್ಯು ಈಶ್ವರನ್, ನವದೀಪ್ ಸೈನಿ, ಸೌರಭ್ ಕುಮಾರ್, ಜಯದೇವ್ ಉನದ್ಕತ್


Click it and Unblock the Notifications
