ಗುರುವಾರ, ಫೆಬ್ರವರಿ 15ರಿಂದ ರಾಜ್ಕೋಟ್ನ ಸೌರಾಷ್ಟ್ರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕೆ ಎರಡೇ ದಿನಗಳು ಬಾಕಿ ಇರುವಾಗಲೇ ಭಾರತ ತಂಡಕ್ಕೆ ಭಾರಿ ಹಿನ್ನಡೆಯಾಗಿದೆ.
ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಸ್ಟಾರ್ ಬ್ಯಾಟರ್ ಕೆಎಲ್ ರಾಹುಲ್ ಫಿಟ್ನೆಸ್ ಸಮಸ್ಯೆಯಿಂದಾಗಿ ಮೂರನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ.

ಕ್ವಾಡ್ರೈಸ್ಪ್ ಗಾಯದ ಕಾರಣ ವಿಶಾಖಪಟ್ಟಣದಲ್ಲಿ ನಡೆದ 2ನೇ ಟೆಸ್ಟ್ ಪಂದ್ಯವನ್ನು ಕಳೆದುಕೊಂಡ ನಂತರ, ಕೆಎಲ್ ರಾಹುಲ್ ಕೊನೆಯ ಮೂರು ಟೆಸ್ಟ್ ಪಂದ್ಯಗಳಿಗೆ ತಂಡಕ್ಕೆ ಮರಳಿದ್ದರು. ಆದರೆ, ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ಕಾರಣ ಮೂರನೇ ಪಂದ್ಯದಿಂದಲೂ ಹೊರಗುಳಿಯಲಿದ್ದಾರೆ.
"ಕೆಎಲ್ ರಾಹುಲ್ ಪಂದ್ಯಕ್ಕೆ ಫಿಟ್ ಆಗಿರಲಿಲ್ಲ ಮತ್ತು ಬಿಸಿಸಿಐನ ವೈದ್ಯಕೀಯ ತಂಡವು ಬಲಗೈ ಬ್ಯಾಟರ್ಗೆ ಹೆಚ್ಚಿನ ವಿಶ್ರಾಂತಿಯನ್ನು ಸೂಚಿಸಿದೆ. ಬದಲಿ ಆಟಗಾರನನ್ನು ಶೀಘ್ರದಲ್ಲೇ ಬಿಸಿಸಿಐ ಪ್ರಕಟಿಸಲಿದೆ," ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೆಎಲ್ ರಾಹುಲ್ ಹೈದರಾಬಾದ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಎಲ್ಲರ ಮನಗೆದ್ದಿದ್ದರು.
ಕೆಎಲ್ ರಾಹುಲ್ ಅವರ ರಿವರ್ಟಿಂಗ್ ಮತ್ತು ಸ್ಟ್ರೋಕ್ ತುಂಬಿದ ಇನ್ನಿಂಗ್ಸ್ಗಳು ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಮೊದಲ ಇನ್ನಿಂಗ್ಸ್ನಲ್ಲಿ ಪ್ರಬಲ ಮೊತ್ತವನ್ನು ಹಾಕಲು ನೆರವಾಗಿತ್ತು.
ಬಲಗಾಲಿಗೆ ಪೆಟ್ಟಾದ ನಂತರ ಬ್ಯಾಟರ್ ಕೆಎಲ್ ರಾಹುಲ್ ವಿಶಾಖಪಟ್ಟಣದಲ್ಲಿ ಎರಡನೇ ಟೆಸ್ಟ್ ಪಂದ್ಯ ಆಡಲು ಸಾಧ್ಯವಾಗಲಿಲ್ಲ. ರಾಹುಲ್ ತಮ್ಮ ಬಲ ಕ್ವಾಡ್ರೈಸ್ಪ್ಸ್ ಗಾಯದ ಕುರಿತು ದೂರು ನೀಡಿದರು ಮತ್ತು ಎರಡನೇ ಟೆಸ್ಟ್ ಪಂದ್ಯದಿಂದ ವಿಶ್ರಾಂತಿ ಪಡೆಯಬೇಕಿದೆ ಎಂದು ಸ್ಕ್ಯಾನ್ಗಳು ಬಹಿರಂಗಪಡಿಸಿದವು.
ನಂತರ ಕನ್ನಡಿಗ ಕೆಎಲ್ ರಾಹುಲ್ ಅವರು ರವೀಂದ್ರ ಜಡೇಜಾ ಜೊತೆಯಲ್ಲಿ ಸರಣಿಯ ಅಂತಿಮ ಮೂರು ಪಂದ್ಯಗಳಿಗೆ ಟೆಸ್ಟ್ ತಂಡಕ್ಕೆ ಮರಳಿದರು. ಆಲ್ರೌಂಡರ್ ಸಹ ಮಂಡಿರಜ್ಜು ಗಾಯದಿಂದಾಗಿ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು.
ಕೆಎಲ್ ರಾಹುಲ್ ಶೇಕಡಾ 100ರಷ್ಟು ಫಿಟ್ ಆಗಿದ್ದಾರೆ ಎಂದು ಭಾರತೀಯ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಆದರೆ ಫಿಟ್ ಆಗಿಲ್ಲ ಎನ್ನುವ ಇತ್ತೀಚಿನ ಸುದ್ದಿಯು ಭಾರತ ತಂಡಕ್ಕೆ ದೊಡ್ಡ ಹಿನ್ನಡೆಯಾದಂತಿದೆ.
26ರ ಹರೆಯದ ಸರ್ಫರಾಜ್ ಖಾನ್ ಅರು ಕೆಎಲ್ ರಾಹುಲ್ ಬದಲಿಗೆ ಆಡುವ 11ರ ಬಳಗದಲ್ಲಿ ಸ್ಥಾನ ಪಡೆಯಲು ಮುಂಚೂಣಿಯಲ್ಲಿರುವವರಲ್ಲಿ ಒಬ್ಬರು. ದೇಶೀಯ ಕ್ರಿಕೆಟ್ನಲ್ಲಿ ಹಲವು ವರ್ಷಗಳ ಪರಿಶ್ರಮದ ನಂತರ ಸರ್ಫರಾಜ್ ಖಾನ್ ಅವರು ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಮೊದಲ ಟೆಸ್ಟ್ ಕರೆಯನ್ನು ಪಡೆದರು.
ಭಾರತ ತಂಡವು ಕಳೆದ ಪಂದ್ಯದ ಆವೇಗದೊಂದಿಗೆ ಮೂರನೇ ಟೆಸ್ಟ್ ಪಂದ್ಯಕ್ಕೆ ಹೋಗಬೇಕಿದೆ. ಯಶಸ್ವಿ ಜೈಸ್ವಾಲ್ ಅವರ ಅದ್ವಿತೀಯ ಪ್ರದರ್ಶನ, ಶುಭ್ಮನ್ ಗಿಲ್ ಮತ್ತು ಜಸ್ಪ್ರೀತ್ ಬುಮ್ರಾ ಪರಾಕ್ರಮದಿಂದಾಗಿ ಭಾರತ ತಂಡವು ವೈಜಾಗ್ ಟೆಸ್ಟ್ ಪಂದ್ಯದಲ್ಲಿ ಪುನರಾಗಮನ ಮಾಡಿತು.
ಪ್ರಮುಖ ಆಟಗಾರರ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ಮತ್ತೊಂದು ಪ್ರಬಲ ಪ್ರದರ್ಶನವನ್ನು ನಿರೀಕ್ಷಿಸುತ್ತದೆ. ಆದರೆ ಮಧ್ಯಮ ಕ್ರಮಾಂಕದ ಬಗ್ಗೆ ಎಚ್ಚರದಿಂದಿರಬೇಕಿದೆ. ಇದು ಸರಣಿಯ ಉಳಿದ ಟೆಸ್ಟ್ ಪಂದ್ಯಗಳಲ್ಲಿ ಶ್ರೇಯಸ್ ಅಯ್ಯರ್ ಅವರ ಸೇವೆಯನ್ನು ಹೊಂದಿಲ್ಲ.