
ಅಜಿಂಕ್ಯ ರಹಾನೆ ಕುರಿತು ವ್ಯಂಗ್ಯವಾಡಿದ ದಾನಿಶ್ ಕನೇರಿಯಾ
ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ಕುರಿತು ಮಾತನಾಡಿದ ದಾನೀಶ್ ಕನೇರಿಯಾ ಅಜಿಂಕ್ಯ ರಹಾನೆ ವಿರುದ್ಧ ವ್ಯಂಗ್ಯವಾಡಿದ್ದಾರೆ. 'ಉತ್ತಮ ಪ್ರದರ್ಶನವನ್ನು ನೀಡುವಲ್ಲಿ ಪದೇ ಪದೇ ವಿಫಲರಾಗುತ್ತಿರುವ ಅಜಿಂಕ್ಯ ರಹಾನೆಗೆ ಟೀಮ್ ಇಂಡಿಯಾದಲ್ಲಿ ಸ್ಥಾನವನ್ನು ಯಾಕೆ ನೀಡುತ್ತಿದ್ದಾರೆ ಎಂಬುದು ನನಗೆ ನಿಜವಾಗಲೂ ಅರ್ಥವಾಗುತ್ತಿಲ್ಲ. ಆತನಿಗೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗದಿದ್ದರೆ ಆತನ ಬದಲು ಸೂರ್ಯಕುಮಾರ್ ಯಾದವ್ ಅಥವಾ ಹನುಮ ವಿಹಾರಿಗೆ ತಂಡದಲ್ಲಿ ಆಡುವ ಅವಕಾಶವನ್ನು ನೀಡಬೇಕು' ಎಂದು ದಾನಿಶ್ ಕನೇರಿಯಾ ಅಜಿಂಕ್ಯ ರಹಾನೆ ಆಯ್ಕೆಯ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ರಹಾನೆ ಸಾಲುಸಾಲು ಕಳಪೆ ಪ್ರದರ್ಶನ
ಭಾರತ ಮತ್ತು ಇಂಗ್ಲೆಂಡ್ ನಡುವೆ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ 61 ರನ್ ಬಾರಿಸಿ ಉತ್ತಮ ಆಟವಾಡಿದ್ದ ರಹಾನೆ ಅದೊಂದು ಇನ್ನಿಂಗ್ಸ್ ಬಿಟ್ಟು ಬೇರೆ ಯಾವುದೇ ಪಂದ್ಯದಲ್ಲಿಯೂ ಸಹ ಹೇಳಿಕೊಳ್ಳುವಂತಹ ಪ್ರದರ್ಶನವನ್ನು ನೀಡುವಲ್ಲಿ ಸಫಲರಾಗಿಲ್ಲ. ಪ್ರಸ್ತುತ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್ನಲ್ಲಿ 14 ರನ್ ಗಳಿಸಿದ್ದ ಅಜಿಂಕ್ಯ ರಹಾನೆ ದ್ವಿತೀಯ ಇನ್ನಿಂಗ್ಸ್ನಲ್ಲಿ 8 ಎಸೆತಗಳನ್ನು ಎದುರಿಸಿ ಯಾವುದೇ ರನ್ ಬಾರಿಸದೇ ಡಕ್ ಔಟ್ ಆಗುವುದರ ಮೂಲಕ ತಮ್ಮ ಕಳಪೆ ಪ್ರದರ್ಶನವನ್ನು ಮುಂದುವರಿಸಿದ್ದಾರೆ.

ಐದನೇ ಟೆಸ್ಟ್ ಪಂದ್ಯದಲ್ಲಿ ರಹಾನೆ ಹೊರಗುಳಿಯುವ ಸಾಧ್ಯತೆ
ಸರಣಿಯುದ್ದಕ್ಕೂ ಸಾಲುಸಾಲು ಕಳಪೆ ಪ್ರದರ್ಶನಗಳನ್ನು ನೀಡುತ್ತಾ ಬಂದಿರುವ ಅಜಿಂಕ್ಯಾ ರಹಾನೆ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿಯೂ ಕೂಡ ಅಕ್ಷರಶಃ ನೆಲಕಚ್ಚಿದ್ದು ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯಲಿರುವ ಐದನೇ ಟೆಸ್ಟ್ ಪಂದ್ಯದಲ್ಲಿ ರಹಾನೆ ಸ್ಥಾನ ಕಳೆದುಕೊಳ್ಳುವ ಸಾಧ್ಯತೆಗಳು ಹೆಚ್ಚಿವೆ. ಅಜಿಂಕ್ಯ ರಹಾನೆ ಬದಲು ಹನುಮವಿಹಾರಿ ಅಥವಾ ಸೂರ್ಯಕುಮಾರ್ ಯಾದವ್ ತಂಡದಲ್ಲಿ ಸ್ಥಾನ ಪಡೆದುಕೊಳ್ಳುವ ಆಟಗಾರರಾಗಿದ್ದಾರೆ.


Click it and Unblock the Notifications











