ಭಾರತ ತಂಡ ತವರಿನಲ್ಲಿ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಆಡುತ್ತಿದ್ದು, ಸ್ಟಾರ್ ಆಟಗಾರ ಅನುಪಸ್ಥಿತಿ ತಂಡಕ್ಕೆ ಕಾಡುತ್ತಿದೆ. ಮೊದಲನೆಯದಾಗಿ, ಇಂಗ್ಲೆಂಡ್ ಮೊದಲ ಟೆಸ್ಟ್ನಲ್ಲಿ ಭರ್ಜರಿ ಜಯ ಸಾಧಿಸಿತು. ಭಾರತದ ಪರ ಸ್ಥಿರ ಪ್ರದರ್ಶನ ನೀಡಿರುವ ಟೀಮ್ ಇಂಡಿಯಾದ ಸ್ಟಾರ್ ಆಟಗಾರರು ಇಬ್ಬರು ಗಾಯದ ಕಾರಣದಿಂದ ಹೊರಗುಳಿದಿದ್ದಾರೆ. ಎರಡನೇ ಟೆಸ್ಟ್ಗೆ ಮುನ್ನ ಭಾರತ ತಂಡಕ್ಕೆ ಸಿಹಿ ಸುದ್ದಿಯೊಂದು ಬಂದಿದೆ. ಆದರೆ, ಇದಕ್ಕೆ ಬಿಸಿಸಿಐ ಗ್ರೀನ್ ಸಿಗ್ನಲ್ಗಾಗಿ ಕಾಯಬೇಕಾಗಿದೆ.
ಕೆಎಲ್ ರಾಹುಲ್ ಮತ್ತು ರವೀಂದ್ರ ಜಡೇಜಾ ಎರಡನೇ ಟೆಸ್ಟ್ನಿಂದ ಹೊರಗುಳಿದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ನಲ್ಲಿ ಕೆಎಲ್ ರಾಹುಲ್ ಮತ್ತು ರವೀಂದ್ರ ಜಡೇಜಾ ಭಾರತ ತಂಡದ ಪರವಾಗಿ ಉತ್ತಮ ಬ್ಯಾಟಿಂಗ್ ಮಾಡಿದ್ದರು. ಉಳಿದ ಬ್ಯಾಟ್ಸ್ಮನ್ಗಳು ಭಾರತ ತಂಡಕ್ಕೆ ಪಂದ್ಯ ಗೆಲ್ಲುವ ರೀತಿಯಲ್ಲಿ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಮೊದಲ ಪಂದ್ಯದಲ್ಲಿ ಸೋತ ಬಳಿಕವಷ್ಟೇ ರವೀಂದ್ರ ಜಡೇಜಾ ಹಾಗೂ ಕೆಎಲ್ ರಾಹುಲ್ ಎರಡನೇ ಟೆಸ್ಟ್ನಿಂದ ಹೊರಬಿದ್ದಿದ್ದಾರೆ ಎಂಬ ಸುದ್ದಿ ಹೊರಗಡೆ ಬಂದಿತ್ತು.

ಈಗ ಈ ಇಬ್ಬರೂ ಆಟಗಾರರು ಎರಡನೇ ಪಂದ್ಯವನ್ನು ಆಡಲು ಸಾಧ್ಯವಾಗುವುದಿಲ್ಲ ಎಂದು ತಿಳಿದು ಬಂದಿತ್ತು. ಇದು ತಂಡಕ್ಕೆ ದೊಡ್ಡ ಆಘಾತವನ್ನು ನೀಡಿದೆ. ಬಿಸಿಸಿಐ ಕೂಡ ಈ ಬಗ್ಗೆ ಸ್ಪಷ್ಟನೆ ನೀಡಿದೆ. ಇದರೊಂದಿಗೆ ಅವರ ಸ್ಥಾನಕ್ಕೆ ಬದಲಿ ಆಟಗಾರರನ್ನು ಘೋಷಿಸಿದೆ. ವಾಷಿಂಗ್ಟನ್ ಸುಂದರ್, ಸರ್ಫರಾಜ್ ಖಾನ್ ಮತ್ತು ಸೌರಭ್ ಕುಮಾರ್ ಎರಡನೇ ಟೆಸ್ಟ್ಗೆ ತಂಡ ಪ್ರವೇಶಿಸಿದ್ದಾರೆ. ಈ ವೇಳೆ ಕೆಎಲ್ ರಾಹುಲ್ ಹಾಗೂ ಜಡೇಜಾ ಎನ್ ಸಿಎ ತಲುಪಿದ್ದಾರೆ ಎಂಬ ಸುದ್ದಿ ಇದೀಗ ಹೊರ ಬಿದ್ದಿದೆ. ರವೀಂದ್ರ ಜಡೇಜಾ ಬಹುಶಃ ಮೂರನೇ ಟೆಸ್ಟ್ನಿಂದಲೂ ಹೊರಗುಳಿಯುತ್ತಾರೆ ಮತ್ತು ಕೆಎಲ್ ರಾಹುಲ್ ಮೂರನೇ ಟೆಸ್ಟ್ ವೇಳೆ ತಂಡಕ್ಕೆ ಮರಳಬಹುದು ಎಂದು ನಂಬಲಾಗಿದೆ.
ಬಿಸಿಸಿಐ ಇದುವರೆಗೆ ಎರಡು ಟೆಸ್ಟ್ಗಳಿಗೆ ಮಾತ್ರ ತಂಡವನ್ನು ಪ್ರಕಟಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಮೂರನೇ ಟೆಸ್ಟ್ಗೆ ಭಾರತ ತಂಡವನ್ನು ಶೀಘ್ರದಲ್ಲೇ ಪ್ರಕಟಿಸಬಹುದು ಎಂದು ನಂಬಲಾಗಿದೆ. ಇದರಲ್ಲಿ ಕೆಎಲ್ ರಾಹುಲ್ ಕಮ್ಬ್ಯಾಕ್ ಮಾಡುವ ಸಾಧ್ಯತೆ ಇದೆ. ಆದರೆ, ವಿರಾಟ್ ಕೊಹ್ಲಿ ಕುರಿತ ಚಿತ್ರ ಇನ್ನೂ ಸ್ಪಷ್ಟವಾಗಿಲ್ಲ. ಅವರೇ ಮೊದಲ ಎರಡು ಟೆಸ್ಟ್ಗಳಿಂದ ತಮ್ಮ ಹೆಸರನ್ನು ಹಿಂಪಡೆದಿದ್ದರು. ಆದರೆ ಈಗ ಅವರು ಮೂರನೇ ಪಂದ್ಯದಿಂದ ಮರಳುತ್ತಾರೆಯೇ ಅಥವಾ ಇಲ್ಲವೇ ಎಂಬುದನ್ನು ಖಚಿತವಾಗಿ ಹೇಳಲಾಗುವುದಿಲ್ಲ.

ಎರಡನೇ ಟೆಸ್ಟ್ನಲ್ಲಿ ಗೆಲುವು ದಾಖಲಿಸಲು ಭಾರತ ತಂಡವು ಶ್ರಮಿಸಬೇಕಾಗಿದೆ. ಮುಂದಿನ ಪಂದ್ಯದಲ್ಲಿ ಸ್ಪಿನ್ ಟ್ರ್ಯಾಕ್ ಗಳು ಕಂಡರೂ ಇಂಗ್ಲೆಂಡ್ ಆಟಗಾರರು ಖುಷಿ ಪಡುವ ಹಾಗೆ ಆಗಿದೆ. ಸೋಲು-ಗೆಲುವು ಬೇರೆ ವಿಷಯ, ಆದರೆ ಭಾರತ ತಂಡಕ್ಕೆ ಈ ಸರಣಿಯನ್ನು ಸುಲಭವಾಗಿ ವಶಪಡಿಸಿಕೊಳ್ಳುವುದು ಸುಲಭವಲ್ಲ ಎಂದು ಇಂಗ್ಲೆಂಡ್ ಈಗಾಗಲೇ ಹೇಳಿದೆ. ಪ್ರದರ್ಶನ ಉತ್ತಮವಾಗಿರದಿದ್ದರೆ ಮತ್ತೆ ತಪ್ಪಾಗಬಹುದು. ಇದರಿಂದಾಗಿ ಸರಣಿಯೂ ಕೈ ತಪ್ಪುವ ಭೀತಿ ಎದುರಾಗಬಹುದು.