For Quick Alerts
ALLOW NOTIFICATIONS  
For Daily Alerts
 

IND vs ENG: ಇಂಗ್ಲೆಂಡ್ ವಿರುದ್ಧ 2ನೇ ಟೆಸ್ಟ್ ಪಂದ್ಯಕ್ಕೆ 3 ಬದಲಾವಣೆ ಮಾಡಿದ ಭಾರತ; ಸರ್ಫರಾಜ್‌ಗೆ ನಿರಾಸೆ!

ಶುಕ್ರವಾರ, ಜನವರಿ 2ರಿಂದ ವಿಶಾಖಪಟ್ಟಣದಲ್ಲಿ ಆರಂಭವಾಗಿರುವ ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕಾಗಿ ಭಾರತ ತನ್ನ ಆಡುವ 11ರ ಬಳಗದಲ್ಲಿ 3 ಬದಲಾವಣೆಗಳನ್ನು ಮಾಡಿದೆ.

ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ವೇಳೆ 3 ಆಟಗಾರರ ಬದಲಾವಣೆಗಳನ್ನು ಘೋಷಿಸಿದರು.

IND vs ENG: India Make 3 Changes for 2nd Test Against England; Disappointment to Sarfaraz Khan

ಭಾರತ ತಂಡವು ಎರಡನೇ ಟೆಸ್ಟ್‌ ಪಂದ್ಯದಲ್ಲಿ ಬ್ಯಾಟಿಂಗ್ ಮಾಡಲು ಉತ್ತಮವಾದ ಟ್ರ್ಯಾಕ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಭಾರತ ಆಡುವ 11ರ ಬಳಗದಿಂದ ಮೊಹಮ್ಮದ್ ಸಿರಾಜ್‌ಗೆ ವಿಶ್ರಾಂತಿ ನೀಡಿತು ಮತ್ತು ಕುಲದೀಪ್ ಯಾದವ್ ಮತ್ತು ಮುಖೇಶ್ ಕುಮಾರ್ ಅವರನ್ನು ಕರೆತಂದಿದೆ.

ಇನ್ನು ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಟಾಸ್‌ಗೆ ಕೆಲವೇ ನಿಮಿಷಗಳ ಮೊದಲು ರಜತ್ ಪಾಟಿದಾರ್ ಅವರು ತಮ್ಮ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲು ಸಿದ್ಧರಾಗಿದ್ದಾರೆ ಮತ್ತು ಕೆಎಲ್ ರಾಹುಲ್ ಅವರ ಸ್ಥಾನವನ್ನು ಆಡುವ 11ರ ಬಳಗದಲ್ಲಿ ತುಂಬಲಿದ್ದಾರೆ ಎಂದು ಘೋಷಿಸಿತು.

ಇದೇ ವೇಳೆ ಮೊದಲ ಬಾರಿಗೆ ಭಾರತ ರಾಷ್ಟ್ರೀಯ ತಂಡದಿಂದ ಕರೆ ಪಡೆದಿದ್ದ ಸರ್ಫರಾಜ್ ಖಾನ್‌ಗೆ ನಿರಾಸೆ ಉಂಟಾಯಿತು. ಇಂಗ್ಲೆಂಡ್ ವಿರುದ್ಧ ಎರಡನೇ ಟೆಸ್ಟ್ ಪಂದ್ಯಕ್ಕೆ ಭಾರತದ ಆಡುವ 11ರ ಬಳಗದಲ್ಲಿ ಕಾಣಿಸಿಕೊಳ್ಳದೆ, ಬೆಂಚ್ ಕಾಯಿಸುವ ಸರದಿ ಬಂದಿದೆ.

IND vs ENG: India Make 3 Changes for 2nd Test Against England; Disappointment to Sarfaraz Khan

ಟೀಮ್ ಇಂಡಿಯಾ ಗಾಯಾಳು ಆಲ್‌ರೌಂಡರ್ ರವೀಂದ್ರ ಜಡೇಜಾಗೆ ಬದಲಿಯಾಗಿ ತಮ್ಮ ಬ್ಯಾಟಿಂಗ್ ಲೈನ್-ಅಪ್ ಅನ್ನು ಬಲಪಡಿಸಲು ಆಯ್ಕೆ ಮಾಡಲಿಲ್ಲ. ಬದಲಿಗೆ ಸ್ಪಿನ್ ಸ್ಪೆಷಲಿಸ್ಟ್ ಕುಲದೀಪ್ ಯಾದವ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ.

"ನಾವು ಮೊದಲು ಬ್ಯಾಟಿಂಗ್ ಮಾಡಲಿದ್ದೇವೆ. ಇದು ಉತ್ತಮ ಪಿಚ್‌ನಂತೆ ತೋರುತ್ತಿದೆ. ಪಿಚ್ ತನ್ನ ಕೆಲಸವನ್ನು ಮಾಡಲಿದೆ. ಪಂದ್ಯವನ್ನು ಗೆಲ್ಲಲು ನಾವು ಉತ್ತಮ ಕ್ರಿಕೆಟ್ ಆಡಬೇಕು," ಎಂದು ಟಾಸ್ ನಂತರ ರೋಹಿತ್ ಶರ್ಮಾ ಹೇಳಿದರು.

"ಹೈದರಾಬಾದ್‌ನಲ್ಲಿ ಏನಾಯಿತು, ನಾವು ಅದರಿಂದ ಕೆಲವು ಸಕಾರಾತ್ಮಕ ಅಂಶಗಳನ್ನು ತೆಗೆದುಕೊಂಡು ತ್ವರಿತವಾಗಿ ಮುಂದುವರಿಯುತ್ತೇವೆ. ಅದು ನಾವು ಒಂದು ತಂಡವಾಗಿ ಮಾಡಬಹುದಾದ ವಿಷಯ. ನಾವು ಮಾಡಬೇಕಾದ ಕೆಲವು ವಿಷಯಗಳ ಬಗ್ಗೆ ನಾವು ಚರ್ಚಿಸಿದ್ದೇವೆ ಮತ್ತು ಆ ಯೋಜನೆಗಳನ್ನು ಕಾರ್ಯಗತಗೊಳಿಸಲು ನಾವು ಎದುರು ನೋಡುತ್ತೇವೆ," ಎಂದು ರೋಹಿತ್ ಶರ್ಮಾ ತಿಳಿಸಿದರು.

ಹೈದರಾಬಾದ್ ಸೋಲಿನ ಬಗ್ಗೆ ಮಾತನಾಡಿದ ರೋಹಿತ್ ಶರ್ಮಾ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ ಉದ್ದೇಶದ ಕೊರತೆಯೇ ತಮ್ಮನ್ನು ತೊಂದರೆಗೆ ಸಿಲುಕಿಸಿದೆ ಎಂದು ಹೇಳಿದರು. ರೋಹಿತ್ ಶರ್ಮಾ ಅವರು ಉತ್ತಮ ಇನ್ನಿಂಗ್ಸ್ ಆಡಿದ್ದಕ್ಕಾಗಿ ಒಲ್ಲಿ ಪೋಪ್ ಅವರನ್ನು ಶ್ಲಾಘಿಸಿದರು ಮತ್ತು ವಿಶಾಖಪಟ್ಟಣದಲ್ಲಿ ತಂಡವು ತಮ್ಮ ತಪ್ಪುಗಳನ್ನು ಸರಿಪಡಿಸುತ್ತದೆ ಎಂದು ಆಶಿಸಿದರು.

"ನೀವು 5 ದಿನಗಳ ಅವಧಿಯಲ್ಲಿ ಆಡುತ್ತಿದ್ದರೆ, ನೀವು ಎಲ್ಲಾ ರೀತಿಯ ವಿಭಾಗಗಳಲ್ಲಿ ಉತ್ತಮ ಪ್ರದರ್ಶನ ನೀಡಬೇಕು. ನಾವು ಮೊದಲ ಇನ್ನಿಂಗ್ಸ್‌ನಲ್ಲಿ ಉತ್ತಮವಾಗಿ ಬ್ಯಾಟಿಂಗ್ ಮಾಡಿದ್ದೇವೆ, ಆದರೆ 2ನೇ ಇನ್ನಿಂಗ್ಸ್‌ನಲ್ಲಿ ಅದೇ ಉದ್ದೇಶವನ್ನು ಹೊಂದಿರಲಿಲ್ಲ. ನಾವು ಮೊದಲ ಇನ್ನಿಂಗ್ಸ್‌ನಲ್ಲಿ ಚೆನ್ನಾಗಿ ಬೌಲಿಂಗ್ ಮಾಡಿದ್ದೇವೆ, ಆದರೆ 2ನೇ ಇನ್ನಿಂಗ್ಸ್‌ನಲ್ಲಿ ಅದು ಒಲ್ಲಿ ಪೋಪ್ ಅವರ ಅದ್ಭುತ ಪ್ರದರ್ಶನವಾಗಿತ್ತು. ನಮಗೆ ಏನು ತಪ್ಪಾಗಿದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ನಾವು ಇಲ್ಲಿ ಆ ತಪ್ಪುಗಳನ್ನು ಸರಿಪಡಿಸಬಹುದು ಎಂದು ಭಾವಿಸುತ್ತೇವೆ," ಎಂದು ರೋಹಿತ್ ಶರ್ಮಾ ಅಭಿಪ್ರಾಯಪಟ್ಟರು.

ಇಂಗ್ಲೆಂಡ್ ವಿರುದ್ಧ ಎರಡನೇ ಟೆಸ್ಟ್ ಪಂದ್ಯಕ್ಕೆ ಭಾರತದ ಆಡುವ 11ರ ಬಳಗ

ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ರಜತ್ ಪಾಟಿದಾರ್, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮುಕೇಶ್ ಕುಮಾರ್.

ಭಾರತ ವಿರುದ್ಧ ಎರಡನೇ ಟೆಸ್ಟ್‌ ಪಂದ್ಯಕ್ಕೆ ಇಂಗ್ಲೆಂಡ್‌ ಆಡುವ 11ರ ಬಳಗ

ಝಾಕ್ ಕ್ರಾಲಿ, ಬೆನ್ ಡಕೆಟ್, ಒಲ್ಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ರೆಹಾನ್ ಅಹ್ಮದ್, ಟಾಮ್ ಹಾರ್ಟ್ಲೆ, ಶೋಯೆಬ್ ಬಶೀರ್, ಜೇಮ್ಸ್ ಆಂಡರ್ಸನ್.

Story first published: Friday, February 2, 2024, 10:17 [IST]
Other articles published on Feb 2, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+