ಅಶ್ವಿನ್ ಕುರಿತು ಮಾತನಾಡುವುದಿಲ್ಲ ಎಂದ ಮೊಹಮ್ಮದ್ ಶಮಿ
ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರೊಬ್ಬರು ರವಿಂಚಂದ್ರನ್ ಅಶ್ವಿನ್ ಅವರಿಗೆ ತಂಡದಲ್ಲಿ ಸ್ಥಾನವೇಕೆ ಸಿಕ್ಕಿಲ್ಲ ಎಂಬ ಪ್ರಶ್ನೆ ಕೇಳಿದಾಗ, ಪಂದ್ಯವೊಂದಕ್ಕೆ ಆಡುವ ಬಳಗವನ್ನು ಆಯ್ಕೆ ಮಾಡುವುದು ಟೀಮ್ ಮ್ಯಾನೇಜ್ಮೆಂಟ್ನ ಕೆಲಸ. ಮ್ಯಾನೇಜ್ಮೆಂಟ್ ಆಯ್ಕೆ ಮಾಡಿದ ತಂಡದ ಕುರಿತು ಮಾತನಾಡುವುದು ಸರಿಯಲ್ಲ, ಮ್ಯಾನೇಜ್ಮೆಂಟ್ ಆಯ್ಕೆ ಮಾಡಿದ ತಂಡದ ಜೊತೆ ಬೆರೆತು ಉತ್ತಮ ಪ್ರದರ್ಶನ ನೀಡುವುದಷ್ಟೇ ನಮ್ಮ ಕೆಲಸ ಎಂದು ಹೇಳಿಕೆ ನೀಡುವುದರ ಮೂಲಕ ಮೊಹಮ್ಮದ್ ಶಮಿ ರವಿಚಂದ್ರನ್ ಅಶ್ವಿನ್ ಅವರಿಗೆ ತಂಡದಲ್ಲಿ ಸ್ಥಾನ ನೀಡದೆ ಇರುವುದರ ಕುರಿತು ಮಾತನಾಡಲು ನಿರಾಕರಿಸಿದರು.
ವಿಕೆಟ್ ಬೀಳದಿರಲು ಪಿಚ್ ಕಾರಣ
ಮೂರನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಇಂಗ್ಲೆಂಡ್ ಆಟಗಾರರ ವಿಕೆಟ್ ಪಡೆಯಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಭಾರತದ ಬೌಲರ್ಗಳು ವಿಕೆಟ್ ಪಡೆಯಲು ಹರಸಾಹಸ ಪಡುತ್ತಿದ್ದರೆ ಅತ್ತ ಇಂಗ್ಲೆಂಡ್ ತಂಡದ ಬ್ಯಾಟ್ಸ್ಮನ್ಗಳು ಭರ್ಜರಿ ಬ್ಯಾಟಿಂಗ್ ನಡೆಸಿ ದೊಡ್ಡ ಮೊತ್ತವನ್ನು ಕಲೆ ಹಾಕಿದರು. ಹೀಗೆ ಮುಂದುವರೆದು ಲೀಡ್ಸ್ ಕ್ರೀಡಾಂಗಣದ ಪಿಚ್ ಕುರಿತು ಮಾತನಾಡಿದ ಮೊಹಮ್ಮದ್ ಶಮಿ ಎರಡನೇ ದಿನದಾಟದಲ್ಲಿ ಇಂಗ್ಲೆಂಡ್ ಆಟಗಾರರ ವಿಕೆಟ್ ಪಡೆಯಲು ಕಷ್ಟವಾದದ್ದು ಹೆಡಿಂಗ್ಲೆ ಕ್ರೀಡಾಂಗಣದ ಪಿಚ್ ಎಂದು ಕಾರಣ ನೀಡಿದರು. ಹೆಡಿಂಗ್ಲೆ ಕ್ರೀಡಾಂಗಣದ ಪಿಚ್ ನಿಧಾನಗತಿಯಲ್ಲಿತ್ತು, ಹೀಗಾಗಿಯೇ ವಿಕೆಟ್ ಪಡೆದುಕೊಳ್ಳುವುದು ತೀರಾ ಕಷ್ಟದ ಕೆಲಸವಾಯಿತು ಎಂದು ಮೊಹಮ್ಮದ್ ಶಮಿ ತಮ್ಮ ಅಭಿಪ್ರಾಯವನ್ನು ವ್ಯಕ್ತ ಪಡಿಸಿದರು.
ಮೊದಲನೇ ಇನ್ನಿಂಗ್ಸ್ನಲ್ಲಿ ಅತಿಹೆಚ್ಚು ವಿಕೆಟ್ ಪಡೆದ ಶಮಿ
ಇಂಗ್ಲೆಂಡ್ ವಿರುದ್ಧ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್ನಲ್ಲಿ 28 ಓವರ್ ಬೌಲಿಂಗ್ ಮಾಡಿರುವ ಮೊಹಮ್ಮದ್ ಶಮಿ 4 ವಿಕೆಟ್ಗಳನ್ನು ಪಡೆದುಕೊಳ್ಳುವುದರ ಮೂಲಕ ಮೊದಲನೇ ಇನ್ನಿಂಗ್ಸ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ.