ಭಾರತೀಯರನ್ನು ಕಡೆಗಣಿಸಬೇಡಿ ಎಂದು ಎಚ್ಚರಿಸಿದ ನಾಸಿರ್ ಹುಸೇನ್
ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ಕಳಪೆ ಪ್ರದರ್ಶನ ನೀಡುವುದರ ಮೂಲಕ ಸರಣಿ ಸಹಿತ 76 ರನ್ಗಳ ಸೋಲನ್ನು ಕಂಡಿರುವ ಟೀಮ್ ಇಂಡಿಯಾವನ್ನು ಯಾವುದೇ ಕಾರಣಕ್ಕೂ ಕಡೆಗಣಿಸಬೇಡಿ ಎಂದು ನಾಸಿರ್ ಹುಸೈನ್ ಎಚ್ಚರಿಕೆಯನ್ನು ನೀಡಿದ್ದಾರೆ. ಇದೇ ರೀತಿ ಆಸ್ಟ್ರೇಲಿಯಾ ಪ್ರವಾಸವನ್ನು ಕೈಗೊಂಡಿದ್ದ ಟೀಮ್ ಇಂಡಿಯಾ ಕೇವಲ 36 ರನ್ಗಳಿಗೆ ಆಲ್ ಔಟ್ ಆಗಿ ತದನಂತರ ಸರಣಿಯನ್ನು ತನ್ನ ಕೈವಶ ಮಾಡಿಕೊಂಡಿದ್ದನ್ನು ನೆನಪಿಸಿಕೊಳ್ಳಿ ಎಂದು ನಾಸಿರ್ ಹುಸೇನ್ ಇಂಗ್ಲೆಂಡ್ ಆಟಗಾರರಿಗೆ ಎಚ್ಚರಿಕೆ ನೀಡಿದ್ದಾರೆ.
ಭಾರತದಲ್ಲಿ ಸಾಕಷ್ಟು ಬಲಶಾಲಿ ಆಟಗಾರರಿದ್ದಾರೆ
ಇನ್ನೂ ಮುಂದುವರಿದು ಮಾತನಾಡಿರುವ ಇಂಗ್ಲೆಂಡ್ ತಂಡದ ಮಾಜಿ ಕ್ರಿಕೆಟಿಗ ನಾಸಿರ್ ಹುಸೇನ್ ಭಾರತ ತಂಡದಲ್ಲಿ ಸಾಕಷ್ಟು ಬಲಿಷ್ಠ ಆಟಗಾರರು ಇದ್ದಾರೆ, ಆ ಆಟಗಾರರಿಗೆ ತಿರುಗಿ ಬೀಳುವ ಗುಣವಿದೆ ಹಾಗೂ ಕುಸಿದಾಗ ಮತ್ತೆ ಉತ್ತಮ ಪ್ರದರ್ಶನ ನೀಡುವ ಹವ್ಯಾಸವಿದೆ ಮತ್ತು ಇದಕ್ಕೆಲ್ಲಾ ಕೇಂದ್ರ ಬಿಂದುವಾಗಿ ನಾಯಕ ವಿರಾಟ್ ಕೊಹ್ಲಿ ಇದ್ದಾರೆ ಎಂದು ಹೇಳಿಕೆ ನೀಡುವುದರ ಮೂಲಕ ನಾಸಿರ್ ಹುಸೇನ್ ಇಂಗ್ಲೆಂಡ್ ತಂಡದ ಆಟಗಾರರಿಗೆ ಮುಂಬರುವ ಸವಾಲಿನ ಕುರಿತು ಎಚ್ಚರಿಕೆ ನೀಡಿದ್ದಾರೆ.
ನಾಲ್ಕನೇ ಟೆಸ್ಟ್ ಪಂದ್ಯ ಯಾವಾಗ ಮತ್ತು ಎಲ್ಲಿ?
ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ಸೆಪ್ಟೆಂಬರ್ 2 ರಿಂದ ಸೆಪ್ಟೆಂಬರ್ 6 ರವರೆಗೆ ಓವಲ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಸರಣಿಯಲ್ಲಿ ಇದುವರೆಗೂ ತಲಾ ಒಂದೊಂದು ಪಂದ್ಯಗಳಲ್ಲಿ ಜಯವನ್ನು ಸಾಧಿಸಿರುವ ಭಾರತ ಮತ್ತು ಇಂಗ್ಲೆಂಡ್ ತಂಡಗಳು 1-1 ಸಮಬಲವನ್ನು ಸಾಧಿಸಿದ್ದು ನಾಲ್ಕನೇ ಟೆಸ್ಟ್ ಪಂದ್ಯದ ಮೇಲಿನ ಕುತೂಹಲ ಮತ್ತು ನಿರೀಕ್ಷೆಗಳು ದೊಡ್ಡ ಮಟ್ಟಕ್ಕೆ ತಲುಪಿವೆ.