ಫೆಬ್ರವರಿ 15 ರಿಂದ ರಾಜ್ಕೋಟ್ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ನಲ್ಲಿ ಟೀಂ ಇಂಡಿಯಾ ಪರ ಸರ್ಫರಾಜ್ ಖಾನ್ ಪಾದಾರ್ಪಣೆ ಮಾಡುವ ಅವಕಾಶವನ್ನು ಪಡೆಯುವುದು ಬಹುತೇಕ ಖಚಿತವಾದಂತೆ ಕಾಣುತ್ತಿದೆ. ಸರ್ಫರಾಜ್ ಖಾನ್ ಹೊರತುಪಡಿಸಿ, ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಧ್ರುವ್ ಜುರೆಲ್ ಅವರ ಚೊಚ್ಚಲ ಪಂದ್ಯವನ್ನು ಸಹ ಖಚಿತಪಡಿಸಲಾಗಿದೆ.
ಕೆಎಲ್ ರಾಹುಲ್ ಗಾಯದ ಸಮಸ್ಯೆಯಿಂದಾಗಿ ಮೂರನೇ ಟೆಸ್ಟ್ನಲ್ಲಿ ಟೀಂ ಇಂಡಿಯಾದ ಹೊರಗುಳಿದಿದ್ದಾರೆ. ಎರಡನೇ ಟೆಸ್ಟ್ನಲ್ಲಿ ಕೆಎಲ್ ರಾಹುಲ್ ಬದಲಿಗೆ ರಜತ್ ಪಾಟಿದಾರ್ ಆಡುವ 11 ರಲ್ಲಿ ಉಳಿಯುತ್ತಾರೆ. ಆದರೆ ಕೆಎಲ್ ರಾಹುಲ್ ಸ್ಥಾನಕ್ಕೆ ಬಂದಿರುವ ದೇವದತ್ ಪಡಿಕಲ್ ಚೊಚ್ಚಲ ಪಂದ್ಯಕ್ಕೆ ಇನ್ನಷ್ಟು ಕಾಲ ಕಾಯಬೇಕಾಗಿದೆ.

ಇಂಗ್ಲೆಂಡ್ ವಿರುದ್ಧದ ಕೊನೆಯ ಮೂರು ಟೆಸ್ಟ್ಗಳ ತಂಡದಲ್ಲಿ ಕೆಎಲ್ ರಾಹುಲ್ ಸ್ಥಾನ ಪಡೆದಿದ್ದಾರೆ. ಆದರೆ, ಫಿಟ್ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದರ ಮೇಲೆ ಕೆಎಲ್ ರಾಹುಲ್ ಆಟ ಅವಲಂಬಿತವಾಗಿದೆ ಎಂದೂ ಹೇಳಲಾಗಿದೆ. ಆದರೆ, ಕೆಎಲ್ ರಾಹುಲ್ ಮೂರನೇ ಟೆಸ್ಟ್ಗೆ ಫಿಟ್ ಆಗಿಲ್ಲ ಎಂಬ ಮಾಹಿತಿ ಸೋಮವಾರ ಬೆಳಕಿಗೆ ಬಂದಿದೆ.
ಕಳಪೆ ಫಾರ್ಮ್ನಿಂದಾಗಿ ಶ್ರೇಯಸ್ ಅಯ್ಯರ್ ಅವರನ್ನು ಟೀಂ ಇಂಡಿಯಾದಿಂದ ಕೈಬಿಡಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಭಾರತದ ಪರ ಸರ್ಫರಾಜ್ ಖಾನ್ ಪದಾರ್ಪಣೆ ಮಾಡಲು ಅವಕಾಶ ನೀಡದೆ ಬೇರೆ ದಾರಿಯಿಲ್ಲ. ಮೂರನೇ ಟೆಸ್ಟ್ನಲ್ಲಿ ಸರ್ಫರಾಜ್ ಖಾನ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವುದನ್ನು ಕಾಣಬಹುದು.

ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಕೆಎಸ್ ಭರತ್ ಅವರನ್ನೂ ಮೂರನೇ ಟೆಸ್ಟ್ ಪಂದ್ಯದಿಂದ ಕೈಬಿಡಬಹುದು. ಕೆಎಸ್ ಭರತ್ ಇದುವರೆಗೆ ಟೀಂ ಇಂಡಿಯಾ ಪರ 7 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಆದರೆ ಒಮ್ಮೆಯೂ ಕೆಎಸ್ ಭರತ್ ಅರ್ಧಶತಕ ಸಹ ಗಳಿಸಲು ಸಾಧ್ಯವಾಗಲಿಲ್ಲ. ಭಾರತ್ ಹೊರತಾಗಿ, ಧ್ರುವ್ ಜುರೆಲ್ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಆಗಿ ಟೀಮ್ ಇಂಡಿಯಾದಲ್ಲಿದ್ದಾರೆ. ಕೆಎಸ್ ಭರತ್ ಅವರ ಕಳಪೆ ಬ್ಯಾಟಿಂಗ್ ನೋಡಿದ ಟೀಮ್ ಮ್ಯಾನೇಜ್ ಮೆಂಟ್ ಇದೀಗ ಅವರನ್ನು ಕೈ ಬಿಡಲು ನಿರ್ಧರಿಸಿದೆ.
ಧ್ರುವ್ ಜುರೆಲ್ ಅವರ ಚೊಚ್ಚಲ ಪಂದ್ಯ ಮೂರನೇ ಟೆಸ್ಟ್ನಲ್ಲಿ ಖಚಿತವಾಗಿದೆ. ಇಷ್ಟೇ ಅಲ್ಲ, ಸರಣಿಯ ಉಳಿದ ಮೂರು ಟೆಸ್ಟ್ ಪಂದ್ಯಗಳಲ್ಲಿ ಧ್ರುವ್ ಜುರೆಲ್ಗೆ ವಿಕೆಟ್ಕೀಪರ್ ಬ್ಯಾಟ್ಸ್ಮನ್ ಆಗಿ ಇರಿಸಲು ತಂಡದ ಆಡಳಿತವು ಅವಕಾಶ ನೀಡಬಹುದು.