ಪ್ರಸ್ತುತ ಭಾರತ ಕ್ರಿಕೆಟ್ ತಂಡವು ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಗಾಯದ ಸಮಸ್ಯೆ ಎದುರಿಸುತ್ತಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಸೋತ ನಂತರ, ರವೀಂದ್ರ ಜಡೇಜಾ ಮತ್ತು ಕೆಎಲ್ ರಾಹುಲ್ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ.
ಇಂದು ಅಥವಾ ನಾಳೆ ಇಂಗ್ಲೆಂಡ್ ವಿರುದ್ಧದ ಕೊನೆಯ ಮೂರು ಟೆಸ್ಟ್ ಪಂದ್ಯಗಳಿಗೆ ಭಾರತ ತಂಡವನ್ನು ಪ್ರಕಟಿಸಲು ಬಿಸಿಸಿಐ ಸಿದ್ಧತೆ ನಡೆಸಿದೆ. ಹೀಗಾಗಿ ಅನುಭವಿ ಆಟಗಾರರ ಲಭ್ಯತೆ ಬಗ್ಗೆ ಖಚಿತಪಡಿಸಿಕೊಳ್ಳುತ್ತಿದೆ.

ಪಾದದ ಗಾಯದ ಕಾರಣದಿಂದ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಆಯ್ಕೆಯಾಗದ ಮೊಹಮ್ಮದ್ ಶಮಿ, ಕೊನೆಯ ಮೂರು ಪಂದ್ಯಗಳಿಗೆ ಕೂಡ ಲಭ್ಯತೆ ಅನಿಶ್ಚಿತವಾಗಿದೆ.
ಇದೇ ವೇಳೆ ವೇಗಿ ಮೊಹಮ್ಮದ್ ಶಮಿ ಅವರು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿರುವಾಗ, ಮೂರನೇ ಟೆಸ್ಟ್ ಮತ್ತು ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಆಲ್ರೌಂಡರ್ ರವೀಂದ್ರ ಜಡೇಜಾ ಲಭ್ಯತೆಯ ಬಗ್ಗೆ ಪ್ರಶ್ನಾರ್ಥಕ ಚಿಹ್ನೆಗಳನ್ನು ಹಾಕಲಾಗಿದೆ ಎಂದು ವರದಿಯೊಂದು ಹೇಳಿದೆ.
ಇದೇ ವರದಿಯು ಸ್ಟಾರ್ ಬ್ಯಾಟರ್ ಹಾಗೂ ಅನುಭವಿ ಕ್ರಿಕೆಟಿಗ ವಿರಾಟ್ ಕೊಹ್ಲಿ ಬಗ್ಗೆ ಕೆಲವು ನವೀಕರಣಗಳನ್ನು ಸಹ ನೀಡಿದೆ. ಮೊದಲೆರಡು ಟೆಸ್ಟ್ ಪಂದ್ಯಗಳಿಂದ ವಿರಾಟ್ ಕೊಹ್ಲಿ ಹಿಂದೆ ಸರಿದಿದ್ದರು. ಇದೀಗ ಕೊನೆಯ ಮೂರು ಪಂದ್ಯಗಳಿಗೂ ಅಲಭ್ಯವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

"ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಮುಂಬರುವ ಇಂಗ್ಲೆಂಡ್ ವಿರುದ್ಧದ ಐಡಿಎಫ್ಸಿ ಫಸ್ಟ್ ಬ್ಯಾಂಕ್ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಂದ ಹಿಂದೆ ಸರಿಯಲು ವಿರಾಟ್ ಕೊಹ್ಲಿ ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಗೆ ಮನವಿ ಮಾಡಿದ್ದಾರೆ," ಎಂದು ಬಿಸಿಸಿಐ ಜನವರಿ 22ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿತ್ತು.
"ವಿರಾಟ್ ಕೊಹ್ಲಿ ಅವರು ನಾಯಕ ರೋಹಿತ್ ಶರ್ಮಾ, ತಂಡದ ಮ್ಯಾನೇಜ್ಮೆಂಟ್ ಮತ್ತು ಆಯ್ಕೆಗಾರರೊಂದಿಗೆ ಮಾತನಾಡಿದ್ದಾರೆ. ದೇಶವನ್ನು ಪ್ರತಿನಿಧಿಸುವುದು ಯಾವಾಗಲೂ ತನ್ನ ಪ್ರಮುಖ ಆದ್ಯತೆಯಾಗಿದೆ, ಕೆಲವು ವೈಯಕ್ತಿಕ ಸನ್ನಿವೇಶಗಳು ಅವರ ಉಪಸ್ಥಿತಿ ಮತ್ತು ಅವಿಭಜಿತ ಗಮನವನ್ನು ಬಯಸುತ್ತವೆ," ಎಂದು ಒತ್ತಿ ಹೇಳಿದ್ದಾರೆ ಎನ್ನಲಾಗಿತ್ತು.
"ಬಿಸಿಸಿಐ ವಿರಾಟ್ ಕೊಹ್ಲಿಯ ನಿರ್ಧಾರವನ್ನು ಗೌರವಿಸುತ್ತದೆ. ಮಂಡಳಿ ಮತ್ತು ತಂಡದ ಮ್ಯಾನೇಜ್ಮೆಂಟ್ ಸ್ಟಾರ್ ಬ್ಯಾಟರ್ಗೆ ತನ್ನ ಬೆಂಬಲವನ್ನು ನೀಡುತ್ತದೆ. ಟೆಸ್ಟ್ ಸರಣಿಯಲ್ಲಿ ಶ್ಲಾಘನೀಯ ಪ್ರದರ್ಶನಗಳನ್ನು ನೀಡಲು ಮತ್ತು ಉಳಿದ ತಂಡದ ಆಟಗಾರರ ಸಾಮರ್ಥ್ಯಗಳಲ್ಲಿ ವಿಶ್ವಾಸವಿದೆ," ಎಂದು ಬಿಸಿಸಿಐ ಹೇಳಿದೆ.
ಈ ಸಮಯದಲ್ಲಿ ವಿರಾಟ್ ಕೊಹ್ಲಿ ಅವರ ಗೌಪ್ಯತೆಯನ್ನು ಗೌರವಿಸುವಂತೆ ಮತ್ತು ಅವರ ವೈಯಕ್ತಿಕ ಕಾರಣಗಳ ಸ್ವರೂಪದ ಬಗ್ಗೆ ಊಹಾಪೋಹಗಳಿಂದ ದೂರವಿರಲು ಬಿಸಿಸಿಐ ಮಾಧ್ಯಮಗಳು ಮತ್ತು ಅಭಿಮಾನಿಗಳಿಗೆ ವಿನಂತಿಸಿತ್ತು.
ಟೆಸ್ಟ್ ಸರಣಿಯಲ್ಲಿ ಮುಂಬರುವ ಸವಾಲುಗಳನ್ನು ಎದುರಿಸುತ್ತಿರುವ ಭಾರತ ಕ್ರಿಕೆಟ್ ತಂಡವನ್ನು ಬೆಂಬಲಿಸುವತ್ತ ಗಮನ ಹರಿಸಬೇಕು ಎಂದು ಮನವಿ ಮಾಡಿತ್ತು.
ಕ್ರಿಕ್ಬಜ್ನಲ್ಲಿನ ವರದಿಯ ಪ್ರಕಾರ, ವಿರಾಟ್ ಕೊಹ್ಲಿ ಪ್ರಸ್ತುತ ಭಾರತದಿಂದ ಹೊರಗಿದ್ದು, ಇಂಗ್ಲೆಂಡ್ ವಿರುದ್ಧ ಕೊನೆಯ ಮೂರು ಟೆಸ್ಟ್ಗಳನ್ನು ಆಡುವುದಿಲ್ಲವೇ ಎಂಬ ಪ್ರಶ್ನೆಯನ್ನು ಮೂಡಿಸಿದೆ.
"ವಿರಾಟ್ ಕೊಹ್ಲಿ ಅವರ ಅನುಪಸ್ಥಿತಿಯ ಕಾರಣಗಳನ್ನು ಪರಿಶೀಲಿಸುವುದರಿಂದ ದೂರವಿರುವುದು, ಸ್ಟಾರ್ ಬ್ಯಾಟರ್ ಪ್ರಸ್ತುತ ದೇಶದಿಂದ ಹೊರಗಿದ್ದಾರೆ ಎಂದು ಬಹಿರಂಗಪಡಿಸಬಹುದು, ಉಳಿದ ಪಂದ್ಯಗಳಿಗೆ ಅವರ ಲಭ್ಯತೆಯ ಬಗ್ಗೆ ಪ್ರಶ್ನಾರ್ಥಕ ಚಿಹ್ನೆಯನ್ನು ಮೂಡಿಸಿದೆ," ಎಂದು ಕ್ರಿಕ್ಬಜ್ ವರದಿ ಹೇಳಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ಫೆಬ್ರವರಿ 15ರಂದು ಆರಂಭವಾಗಲಿದೆ.