ಭಾರತದ ಬಾಲಂಗೋಚಿಗಳು ಕಿರಿಕಿರಿ ಉಂಟುಮಾಡಿದರು
ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್ನಲ್ಲಿಯೂ ಟೀಮ್ ಇಂಡಿಯಾದ ಶಾರ್ದೂಲ್ ಠಾಕೂರ್ ಅರ್ಧಶತಕಗಳನ್ನು ಬಾರಿಸುವುದರ ಮೂಲಕ ಇಂಗ್ಲೆಂಡ್ ಬೌಲರ್ಗಳನ್ನು ಕಾಡಿದರು. ಹಾಗೂ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ನಲ್ಲಿ ಟೀಮ್ ಇಂಡಿಯಾದ ಬ್ಯಾಟ್ಸ್ಮನ್ಗಳೆಲ್ಲಾ ಔಟ್ ಆಗಿ ತಂಡ ಸಂಕಷ್ಟದಲ್ಲಿದ್ದಾಗ 10ನೇ ವಿಕೆಟ್ಗೆ ಜತೆಯಾದ ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ 89 ರನ್ಗಳ ಅಜೇಯ ಜತೆಯಾಟವಾಡಿದರು. ಹೀಗೆ ಈ ಎರಡೂ ಪಂದ್ಯಗಳಲ್ಲಿ ಭಾರತದ ಕೆಳಕ್ರಮಾಂಕದ ಆಟಗಾರರನ್ನು ಕಟ್ಟಿ ಹಾಕುವಲ್ಲಿ ನಾವು ವಿಫಲವಾದೆವು ಎಂದು ಇಂಗ್ಲೆಂಡ್ ತಂಡದ ಪ್ರಮುಖ ವೇಗಿ ಮಾರ್ಕ್ ವುಡ್ ಹೇಳಿಕೊಂಡಿದ್ದಾರೆ.
ಹೆಡಿಂಗ್ಲೆ ಕ್ರೀಡಾಂಗಣದ ರೀತಿಯ ಆಟವನ್ನು ಓವಲ್ ಕ್ರೀಡಾಂಗಣದಲ್ಲಿ ಆಡಲಾಗಲಿಲ್ಲ
ಭಾರತ ಮತ್ತು ಇಂಗ್ಲೆಂಡ್ ನಡುವೆ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ತೃತೀಯ ಟೆಸ್ಟ್ ಪಂದ್ಯದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ 76 ರನ್ಗಳ ಇನ್ನಿಂಗ್ಸ್ ಜಯವನ್ನು ಸಾಧಿಸಿತ್ತು. ಇಂಗ್ಲೆಂಡ್ ಬೌಲರ್ಗಳ ಎದುರು ಮಂಕಾದ ಟೀಮ್ ಇಂಡಿಯಾ ಇನ್ನಿಂಗ್ಸ್ ಸೋಲನ್ನು ಅನುಭವಿಸಿತು. ಆದರೆ ನಂತರ ಓವಲ್ ಕ್ರೀಡಾಂಗಣದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಬೌಲರ್ಗಳ ಆಟ ನಡೆಯಲಿಲ್ಲ. ಈ ಕುರಿತು ಮಾತನಾಡಿರುವ ಮಾರ್ಕ್ ವುಡ್ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಾವು ಉತ್ತಮ ಪ್ರದರ್ಶನವನ್ನು ತೋರಿದೆವು ಆದರೆ ಲಾರ್ಡ್ಸ್ ಮತ್ತು ಓವಲ್ ಕ್ರೀಡಾಂಗಣದಲ್ಲಿ ವಿಫಲವಾದೆವು ಎಂದು ಹೇಳಿದ್ದಾರೆ.
ಮ್ಯಾಂಚೆಸ್ಟರ್ ಪಂದ್ಯದಲ್ಲಿ ವೇಗವಾಗಿ ವಿಕೆಟ್ ಪಡೆಯುವ ಯೋಜನೆಯಲ್ಲಿದ್ದೇವೆ
ಇನ್ನು ಭಾರತ ಮತ್ತು ಇಂಗ್ಲೆಂಡ್ ನಡುವೆ ಶುಕ್ರವಾರದಂದು ಮ್ಯಾಂಚೆಸ್ಟರ್ ಕ್ರೀಡಾಂಗಣದಲ್ಲಿ ಆರಂಭವಾಗಲಿರುವ ಐದನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ವಿಕೆಟ್ಗಳನ್ನು ಹೆಡಿಂಗ್ಲೆ ಪಂದ್ಯದಂತೆ ವೇಗವಾಗಿ ಪಡೆದುಕೊಳ್ಳುವ ವಿಶ್ವಾಸವನ್ನು ಮಾರ್ಕ್ ವುಡ್ ವ್ಯಕ್ತಪಡಿಸಿದ್ದು, ಐದನೇ ಟೆಸ್ಟ್ ಪಂದ್ಯವನ್ನು ಇಂಗ್ಲೆಂಡ್ ಕೈವಶಪಡಿಸಿಕೊಳ್ಳಲಿದೆ ಎಂಬ ವಿಶ್ವಾಸದಲ್ಲಿದ್ದಾರೆ.