For Quick Alerts
ALLOW NOTIFICATIONS  
For Daily Alerts
 

IND vs ENG: ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಔಟ್; ಆರ್‌ಸಿಬಿ ವೇಗಿಗೆ ಒಲಿದ ಲಕ್

ಶನಿವಾರ, ಫೆಬ್ರವರಿ 10ರಂದು ಬಿಸಿಸಿಐ ಇಂಗ್ಲೆಂಡ್ ವಿರುದ್ಧದ ಕೊನೆಯ ಮೂರು ಟೆಸ್ಟ್ ಪಂದ್ಯಗಳಿಗೆ 17 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿತು.

ಇದೇ ವೇಳೆ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ವೈಯಕ್ತಿಕ ಕಾರಣಗಳಿಗಾಗಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಉಳಿದ ಪಂದ್ಯಗಳಿಂದ ಹಿಂದೆ ಸರಿದಿದ್ದಾರೆ ಎಂದು ಬಿಸಿಸಿಐ ದೃಢಪಡಿಸಿದೆ. ಉನ್ನತ ಮಟ್ಟದ ಸ್ಪರ್ಧೆಗೆ ಪ್ರಮುಖ ಆಟಗಾರನ ಲಭ್ಯತೆಯ ಬಗ್ಗೆ ಇದ್ದ ಅನುಮಾನಗಳಿಗೆ ಅಂತ್ಯ ಹಾಡಿದೆ.

IND vs ENG: Virat Kohli, Shreyas Iyer Rulled out For last 3 Tests; RCB Pacer Akash Deep Get Chance

ಗಮನಾರ್ಹವಾಗಿ, ವಿರಾಟ್ ಕೊಹ್ಲಿ ಮೊದಲ ಎರಡು ಟೆಸ್ಟ್‌ ಪಂದ್ಯಗಳಿಂದ ಹೊರಗುಳಿದಿದ್ದರು ಮತ್ತು ಉಳಿದ ಮೂರು ಪಂದ್ಯಗಳಿಗೆ ಅವರು ಅಲಭ್ಯರಾಗಬಹುದು ಎಂದು ಫೆಬ್ರವರಿ 3ರಂದು ಪಿಟಿಐ ವರದಿ ಮಾಡಿದೆ.

"ವೈಯಕ್ತಿಕ ಕಾರಣಗಳಿಂದಾಗಿ ವಿರಾಟ್ ಕೊಹ್ಲಿ ಸರಣಿಯ ಉಳಿದ ಪಂದ್ಯಗಳಿಗೆ ಆಯ್ಕೆಗೆ ಅಲಭ್ಯರಾಗುತ್ತಾರೆ. ವಿರಾಟ್ ಕೊಹ್ಲಿ ಅವರ ನಿರ್ಧಾರವನ್ನು ಸಂಪೂರ್ಣವಾಗಿ ಗೌರವಿಸುತ್ತದೆ ಮತ್ತು ಬೆಂಬಲಿಸುತ್ತದೆ," ಎಂದು ಬಿಸಿಸಿಐ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

IND vs ENG: Virat Kohli, Shreyas Iyer Rulled out For last 3 Tests; RCB Pacer Akash Deep Get Chance

ವೈಯಕ್ತಿಕ ಕೌಟುಂಬಿಕ ವಿಚಾರಕ್ಕಾಗಿ ವಿರಾಟ್ ಕೊಹ್ಲಿ ಸದ್ಯ ವಿದೇಶದಲ್ಲಿದ್ದಾರೆ. ವಿಶಾಖಪಟ್ಟಣದಲ್ಲಿ ನಡೆದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸುವುದರೊಂದಿಗೆ ಸರಣಿ 1-1 ಅಂತರದಿಂದ ಸಮಬಲಗೊಂಡಿದೆ. ಮೂರನೇ ಪಂದ್ಯವು ಫೆಬ್ರವರಿ 15ರಿಂದ ರಾಜ್‌ಕೋಟ್‌ನಲ್ಲಿ ಆರಂಭವಾಗಲಿದೆ.

ಬಿಸಿಸಿಐ ರಾಷ್ಟ್ರೀಯ ಆಯ್ಕೆ ಸಮಿತಿಯು ಹಿರಿಯ ಆಟಗಾರರಾದ ರವೀಂದ್ರ ಜಡೇಜಾ ಮತ್ತು ಕೆಎಲ್ ರಾಹುಲ್ ಅವರನ್ನು ತಂಡದಲ್ಲಿ ಸೇರಿಸಿದೆ. ಆದರೆ ಅವರ ಸೇರ್ಪಡೆ ಬಿಸಿಸಿಐನ ವೈದ್ಯಕೀಯ ತಂಡದ ಅನುಮತಿಗೆ ಒಳಪಟ್ಟಿರುತ್ತದೆ. ರವೀಂದ್ರ ಜಡೇಜಾ ಅವರ ಮಂಡಿರಜ್ಜು ಗಾಯಗೊಂಡಿದ್ದರೆ, ಕೆಎಲ್ ರಾಹುಲ್ ಅವರು ಬಲ ಕ್ವಾಡ್ರೈಸ್ಪ್ ಗಾಯಕ್ಕೆ ತುತ್ತಾಗಿದ್ದರು.

IND vs ENG: Virat Kohli, Shreyas Iyer Rulled out For last 3 Tests; RCB Pacer Akash Deep Get Chance

ಇನ್ನು ತೊಡೆಸಂದು ಮತ್ತು ಕೆಳ ಬೆನ್ನಿನ ಬಿಗಿತದ ಬಗ್ಗೆ ದೂರು ನೀಡಿದ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರನ್ನು ಆಯ್ಕೆ ಮಾಡಲಾಗಿಲ್ಲ. ಇನ್ನು ಬಿಸಿಸಿಐ ಅವರ ವೈದ್ಯಕೀಯ ನವೀಕರಣವನ್ನು ಒದಗಿಸಿಲ್ಲ.

ಯಾವುದೇ ಸಂದರ್ಭದಲ್ಲಿ ಶ್ರೇಯಸ್ ಅಯ್ಯರ್ ಅವರನ್ನು ಆಡುವ 11ರ ಬಳಗದಿಂದ ಕೈಬಿಡಲಾಗುತ್ತಿತ್ತು ಮತ್ತು ಅವರ ಗಾಯವು ಆಯ್ಕೆದಾರರಿಗೆ ನಿರ್ಧಾರವನ್ನು ಸುಲಭಗೊಳಿಸಿತು ಎಂದು ನಂಬಲಾಗಿದೆ.

ಇದೇ ವೇಳೆ 17 ಮಂದಿಯ ತಂಡದಲ್ಲಿರುವ ಏಕೈಕ ಹೊಸ ಮುಖ ಬಂಗಾಳದ ವೇಗಿ ಆಕಾಶ್ ದೀಪ್. ಆರ್‌ಸಿಬಿ ತಂಡದ ಬಲಗೈ ವೇಗಿ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಮತ್ತು ಇತ್ತೀಚಿನ ಇಂಗ್ಲೆಂಡ್ ಲಯನ್ಸ್ ವಿರುದ್ಧದ ಭಾರತ ಎ ತಂಡದ ಟೆಸ್ಟ್ ಸರಣಿಯಲ್ಲಿ ತಮ್ಮ ಸ್ಥಿರ ಪ್ರದರ್ಶನಕ್ಕಾಗಿ ರಾಷ್ಟ್ರೀಯ ತಂಡದಿಂದ ಚೊಚ್ಚಲ ಕರೆ ಪಡೆದಿದ್ದಾರೆ.

ರವೀಂದ್ರ ಜಡೇಜಾ ಕಮ್ ಬ್ಯಾಕ್ ಆಗಿದ್ದರಿಂದ, ಎಡಗೈ ಸ್ಪಿನ್ನರ್ ಸೌರಭ್ ಕುಮಾರ್ ಹೊರಬಿದ್ದಿದ್ದಾರೆ. ಅವೇಶ್ ಖಾನ್ ಬದಲಿಗೆ ಮೊಹಮ್ಮದ್ ಸಿರಾಜ್ ತಂಡಕ್ಕೆ ಮರಳಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಉಳಿದ ಮೂರು ಟೆಸ್ಟ್ ಪಂದ್ಯಗಳಿಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ಕೆಎಲ್ ರಾಹುಲ್ (ಫಿಟ್ನೆಸ್ ಆಧಾರ), ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ (ಫಿಟ್ನೆಸ್ ಆಧಾರ), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

Story first published: Saturday, February 10, 2024, 12:58 [IST]
Other articles published on Feb 10, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+