ಜೋ ರೂಟ್ ಬಗ್ಗೆ ಸೆಹ್ವಾಗ್ ವಿಶೇಷ ಮಾತು
ವೀರೇಂದ್ರ ಸೆಹ್ವಾಗ್ ಮುಕ್ತಕಂಠದಿಂದ ಹೊಗಳಿದ ಆ ಆಟಗಾರ ಇಂಗ್ಲೆಂಡ್ ತಂಡದ ಮಾಜಿ ನಾಯಕ ಜೋ ರೂಟ್. ಕಳೆದ ಎರಡು ವರ್ಷಗಳಿಂದ ಜೋ ರುಟ್ ಫಾರ್ಮ್ ಅಮೋಘವಾಗಿದೆ. ಭಾರತ ವಿರುದ್ಧಧ ಈ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಜೋ ರೂಟ್ ಬರೊಬ್ಬರಿ ನಾಲ್ಕು ಶತಕ ಸಿಡಿಸಿದ್ದಾರೆ. ಈ ಮೂಲಕ ಈ ಸರಣಿಯಲ್ಲಿ ಭಾರತ ತಂಡಕ್ಕೆ ದೊಡ್ಡ ಸವಾಲಾಗಿ ಉಳಿದಿದ್ದಾರೆ. ಈ ಪ್ರದರ್ಶನದ ಕಾರಣದಿಂದಾಗಿಯೇ ಸೆಹ್ವಾಗ್ ರೂಟ್ ಬಗ್ಗೆ ಈ ಮಾತುಗಳನ್ನಾಡಿದ್ದಾರೆ.
ಟ್ವೀಟ್ನಲ್ಲಿ ಸೆಹ್ವಾಗ್ ಹೇಳಿದ್ದಿಷ್ಟು!
ಸರಣಿಯ ಮುಕ್ತಾಯದ ಬಳಿಕ ಸೆಹ್ವಾಗ್ ಟ್ವಿಟ್ ಮಾಡಿದ್ದು ಜೋ ರುಟ್ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ. "ಅದ್ಭುತವಾದ ರನ್ ಮಷಿನ್ ಜೋ ರುಟ್ ಅವರಿಂದ ಈ ಸರಣಿಯಲ್ಲಿ ನಾಲ್ಕನೇ ಶತಕ ದಾಖಲಾಗಿದೆ. ಪ್ರಸ್ತುತ ವಿಶ್ವ ಕ್ರಿಕೆಟ್ನ ಶ್ರೇಷ್ಠ ಬ್ಯಾಟ್ಸ್ಮನ್ ಇವರು" ಎಂದಿದ್ದಾರೆ ವೀರೇಂದ್ರ ಸೆಹ್ವಾಗ್.
ಸೋಲು ಅನುಭವಿಸಿದ ಭಾರತ
ಎಡ್ಜ್ಬಾಸ್ಟನ್ನಲ್ಲಿ ನಡೆದ ಟೆಸ್ಟ್ ಸರಣಿಯ ಅಂತಿಮ ಪಂದ್ಯದಲ್ಲಿ ಭಾರತ ಮೊದಲ ಮೂರು ದಿನಗಳ ಕಾಲ ಅಮೋಘ ಪ್ರದರ್ಶನ ನೀಡಿತ್ತು. ಈ ಮೂಲಕ ಪಂದ್ಯದಲ್ಲಿ ಸಂಪೂರ್ಣ ಹಿಡಿತ ಸಾಧಿಸುವುದರ ಜೊತೆಗೆ ಗೆಲುವು ಸಾಧಿಸುವ ಆತ್ಮವಿಶ್ವಾಸದಲ್ಲಿತ್ತು. ಆದರೆ ಎರಡನೇ ಇನ್ನಿಂಗ್ಸ್ನಲ್ಲಿ ಭಾರತ ಸಂಪೂರ್ಣ ವೈಫಲ್ಯ ಅನುಭವಿಸಿತು. ಮೊದಲಿಗೆ ಬ್ಯಾಟಿಂಗ್ನಲ್ಲಿ ಎಡವಿದ ಭಾರತ ನಿರೀಕ್ಷಿತ ಗುರಿ ನಿಗದಿಪಡಿಸುವಲ್ಲಿ ವಿಫಲವಾಯಿತು. ಬಳಿಕ ಬೌಲಿಂಗ್ನಲ್ಲಿಯೂ ಹಿನ್ನಡೆ ಅನುಭವಿಸುವುದರೊಂದಿಗೆ ಸೋಲು ಅನುಭವಿಸಿದೆ.
ಆಡುವ ಬಳಗ ಹೀಗಿದೆ
ಇಂಗ್ಲೆಂಡ್: ಅಲೆಕ್ಸ್ ಲೀಸ್, ಝಾಕ್ ಕ್ರಾಲಿ, ಆಲಿ ಪೋಪ್, ಜೋ ರೂಟ್, ಬೆನ್ ಸ್ಟೋಕ್ಸ್ (ನಾಯಕ), ಜಾನಿ ಬೈರ್ಸ್ಟೋವ್, ಸ್ಯಾಮ್ ಬಿಲ್ಲಿಂಗ್ಸ್ (ವಿಕೆಟ್ ಕೀಪರ್), ಮ್ಯಾಟಿ ಪಾಟ್ಸ್, ಸ್ಟುವರ್ಟ್ ಬ್ರಾಡ್, ಜ್ಯಾಕ್ ಲೀಚ್, ಜೇಮ್ಸ್ ಆಂಡರ್ಸನ್
ಬೆಂಚ್: ಬೆನ್ ಫೋಕ್ಸ್, ಕ್ರೇಗ್ ಓವರ್ಟನ್, ಜೇಮೀ ಓವರ್ಟನ್, ಹ್ಯಾರಿ ಬ್ರೂಕ್
ಭಾರತ: ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ (ನಾಯಕ)
ಬೆಂಚ್: ಉಮೇಶ್ ಯಾದವ್, ಶ್ರೀಕರ್ ಭರತ್, ಪ್ರಸಿದ್ಧ್ ಕೃಷ್ಣ, ರವಿಚಂದ್ರನ್ ಅಶ್ವಿನ್