ಸೋಮವಾರ, ಫೆಬ್ರವರಿ 5ರಂದು ವಿಶಾಖಪಟ್ಟಣದಲ್ಲಿ ಮುಕ್ತಾಯಗೊಂಡ ಐದು ಪಂದ್ಯಗಳ ಸರಣಿಯ ಎರಡನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಭಾರತ ತಂಡವು 106 ರನ್ಗಳಿಂದ ಪ್ರವಾಸಿ ಇಂಗ್ಲೆಂಡ್ ತಂಡವನ್ನು ಮಣಿಸಿತು ಮತ್ತು ಸರಣಿಯಲ್ಲಿ 1-1 ಅಂತರದಿಂದ ಸಮಬಲ ಸಾಧಿಸಿತು.
ಕೊನೆಯ ಇನ್ನಿಂಗ್ಸ್ನಲ್ಲಿ ಗೆಲ್ಲಲು 399 ರನ್ಗಳ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ ತಂಡಕ್ಕೆ ನಾಲ್ಕನೇ ದಿನ 9 ವಿಕೆಟ್ಗಳು ಬಾಕಿ ಇರುವಂತೆಯೇ 332 ರನ್ಗಳ ಅಗತ್ಯವಿತ್ತು. ಆದರೆ, ಜಸ್ಪ್ರೀತ್ ಬುಮ್ರಾ 46 ರನ್ಗಳಿಗೆ 3 ವಿಕೆಟ್ ಮತ್ತು ರವಿಚಂದ್ರನ್ ಅಶ್ವಿನ್ 72 ರನ್ ನೀಡಿ 3 ವಿಕೆಟ್ಗಳ ಪ್ರದರ್ಶನವು 292 ರನ್ಗಳಿಗೆ ಕಟ್ಟಿಹಾಕಿದರು.
ಭಾರತ ಮತ್ತು ಇಂಗ್ಲೆಂಡ್ ನಡುವಿನ 2ನೇ ಟೆಸ್ಟ್ ನಂತರದ ಚರ್ಚೆಯ ಒಬ್ಬ ವ್ಯಕ್ತಿಯ ಸುತ್ತ ಕೇಂದ್ರೀಕೃತವಾಗಿದೆ. ಆ ಹೆಸರೇ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ.

ವಿಶಾಖಪಟ್ಟಣದಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಮೊಹಮ್ಮದ್ ಶಮಿ ಅವರ ಸೇವೆಯಿಲ್ಲದೆ ಭಾರತ ಗೆಲುವು ಸಾಧಿಸಿದೆ. ಅಲ್ಲದೆ ವೇಗಿ ಮೊಹಮ್ಮದ್ ಸಿರಾಜ್ ಕೂಡ ಆಡಲಿಲ್ಲ. ಗಮನಾರ್ಹವಾಗಿ, ಆಲ್ರೌಂಡರ್ ರವೀಂದ್ರ ಜಡೇಜಾ ಕೂಡ ಮಂಡಿರಜ್ಜು ಗಾಯದ ಸಮಸ್ಯೆಯಿಂದ ಆಡದಿರುವುದನ್ನು ಮರೆಯುವಂತಿಲ್ಲ.
ಎರಡನೇ ಪಂದ್ಯದಲ್ಲಿ ಭಾರತ ತಂಡದ ಅದ್ಭುತ ಗೆಲುವಿನ ಬಳಿಕ, ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸುತ್ತಿರುವುದನ್ನು ಕಾಣಬಹುದು. ಬಹುಶಃ ಉಳಿದ ಮೂರು ಟೆಸ್ಟ್ ಪಂದ್ಯಗಳಿಗೆ ಭಾರತ ತಂಡದ ಆಯ್ಕೆಯನ್ನು ಚರ್ಚಿಸುತ್ತಿದ್ದಾರೆ.
ಗಮನಾರ್ಹವೆಂದರೆ, ಭಾರತ ತಂಡವು ಸರಣಿಯ ಮೊದಲ ಎರಡು ಪಂದ್ಯಗಳಿಗೆ ಮಾತ್ರ ತಂಡವನ್ನು ಪ್ರಕಟಿಸಿತ್ತು. ಮೂರನೇ ಟೆಸ್ಟ್ ಒಂಬತ್ತು ದಿನಗಳ ಅಂತರದಲ್ಲಿರುವದರಿಂದ ಬಿಸಿಸಿಐ ಮುಂಬರುವ ದಿನಗಳಲ್ಲಿ ತಂಡವನ್ನು ಪ್ರಕಟಿಸುವ ನಿರೀಕ್ಷೆಯಿದೆ.
ವೈಯಕ್ತಿಕ ಕಾರಣಗಳಿಂದ ಮೊದಲೆರಡು ಟೆಸ್ಟ್ ಪಂದ್ಯಗಳಿಂದ ಹಿಂದೆ ಸರಿದಿದ್ದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಯ ವಾಪಸಾತಿಯು ಉಳಿದ ಮೂರು ಟೆಸ್ಟ್ ಪಂದ್ಯಗಳ ಪ್ರಮುಖ ಚರ್ಚೆಯಾಗಿದೆ.
ಆದಾಗ್ಯೂ, ಸರಣಿಯ ಉಳಿದ ಭಾಗಕ್ಕೆ ವಿರಾಟ್ ಕೊಹ್ಲಿ ಲಭ್ಯತೆಯ ಬಗ್ಗೆ ಯಾವುದೇ ದೃಢೀಕರಣವಿಲ್ಲ. ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಕೂಡ ಮಂಡಳಿಯು ಅವರನ್ನು ಇನ್ನೂ ಸಂಪರ್ಕಿಸಿಲ್ಲ ಎಂದು ಬಹಿರಂಗಪಡಿಸಿದ್ದಾರೆ.
ಗಮನಾರ್ಹವೆಂದರೆ, ವಿರಾಟ್ ಕೊಹ್ಲಿಯ ಆಪ್ತ ಸ್ನೇಹಿತ ಮತ್ತು ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಇತ್ತೀಚೆಗೆ ಭಾರತದ ಕ್ರಿಕೆಟಿಗ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಬಹಿರಂಗಪಡಿಸಿದರು.

ಆದ್ದರಿಂದ ವಿರಾಟ್ ಕೊಹ್ಲಿ ಸರಣಿಯಿಂದ ಗೈರುಹಾಜರಾಗಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ. ಆದರೆ, ಈ ಬಗ್ಗೆ ಕ್ರಿಕೆಟ್ ಮತ್ತು ಸಿನಿಮಾ ಸೆಲೆಬ್ರಿಟಿ ದಂಪತಿಗಳು ಈ ಸುದ್ದಿಯನ್ನು ಇನ್ನೂ ಖಚಿತಪಡಿಸಿಲ್ಲ.
ಇದೇ ವೇಳೆ, ಸರಣಿಯ ಮೊದಲ ಪಂದ್ಯದಲ್ಲಿ ಗಾಯಗೊಂಡಿರುವ ರವೀಂದ್ರ ಜಡೇಜಾ ಮತ್ತು ಕೆಎಲ್ ರಾಹುಲ್ ಅವರ ಪುನರಾಗಮನ ಬಗ್ಗೆಯೂ ಚರ್ಚೆಗಳು ನಡೆಯಲಿವೆ.
ಮೊದಲ ಟೆಸ್ಟ್ನ 4ನೇ ದಿನದಂದು ರವೀಂದ್ರ ಜಡೇಜಾ ಮಂಡಿರಜ್ಜು ಗಾಯಕ್ಕೆ ಒಳಗಾದರು. ಇನ್ನು ಕೆಎಲ್ ರಾಹುಲ್ ಬಲ ಕ್ವಾಡ್ರೈಸ್ಪ್ ನೋವಿನ ಬಗ್ಗೆ ದೂರು ನೀಡಿದರು.
ಭಾರತ ತಂಡದಲ್ಲಿ ಪ್ರಮುಖ ಬ್ಯಾಟರ್ ಆಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಎರಡನೇ ಟೆಸ್ಟ್ ಪಂದ್ಯಕ್ಕೆ ಕೆಎಲ್ ರಾಹುಲ್ಗೆ ವಿಶ್ರಾಂತಿ ನೀಡಲು ತಂಡದ ಮ್ಯಾನೇಜ್ಮೆಂಟ್ ನಿರ್ಧರಿಸಿತು.
ಮತ್ತೊಂದೆಡೆ, ರವೀಂದ್ರ ಜಡೇಜಾ ಚೇತರಿಸಿಕೊಳ್ಳಲು ಹೆಚ್ಚು ಸಮಯ ತೆಗೆದುಕೊಳ್ಳುವ ಸಾಧ್ಯತೆಯಿದೆ ಮತ್ತು ಸರಣಿಯ ಮುಂದಿನ ಪಂದ್ಯಗಳಲ್ಲಿ ಅವರ ಪುನರಾಗಮನವು ಇನ್ನೂ ಪ್ರಶ್ನಾರ್ಹವಾಗಿದೆ.
ಇವರಿಬ್ಬರನ್ನು ಹೊರತುಪಡಿಸಿ, ವೇಗಿ ಮೊಹಮ್ಮದ್ ಸಿರಾಜ್ ಅವರ ಕೆಲಸದ ಹೊರೆಯನ್ನು ನಿರ್ವಹಿಸಲು ಎರಡನೇ ಟೆಸ್ಟ್ಗೆ ತಂಡದಿಂದ ಬಿಡುಗಡೆ ಮಾಡಲಾಗಿತ್ತು. ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲು ನಿರ್ಧರಿಸಿದರೆ, ಮೂರನೇ ಪಂದ್ಯಕ್ಕೆ ಮತ್ತೆ ಆಯ್ಕೆಯಾಗುವ ಸಾಧ್ಯತೆಯಿದೆ.
ಇದಲ್ಲದೆ, ಕಳಪೆ ಪ್ರದರ್ಶನ ನೀಡುತ್ತಿರುವ ಕೆಎಸ್ ಭರತ್ ಮತ್ತು ಶ್ರೇಯಸ್ ಅಯ್ಯರ್ ಉಳಿದ ಪಂದ್ಯಗಳಿಗೆ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆಯೇ ಎಂಬುದು ಕುತೂಹಲಕಾರಿಯಾಗಿದೆ.