ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ರಿಷಭ್ ಪಂತ್ನ್ನು ತಂಡದಿಂದ ಕೈಬಿಡಬೇಕು
ಭಾರತ ಮತ್ತು ಇಂಗ್ಲೆಂಡ್ ನಡುವೆ ಓವಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯದ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿರುವ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ದಾನಿಶ್ ಕನೇರಿಯಾ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದಿಂದ ರಿಷಭ್ ಪಂತ್ ಅವರನ್ನು ಕೈಬಿಡಬೇಕು ಎಂದಿದ್ದಾರೆ. 'ರಿಷಭ್ ಪಂತ್ ಓರ್ವ ಪ್ರತಿಭಾವಂತ ಆಟಗಾರ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಪ್ರತಿಯೊಬ್ಬರು ಫಾರ್ಮ್ ಪಡೆದುಕೊಳ್ಳುತ್ತಾರೆ, ಫಾರ್ಮ್ ಕಳೆದುಕೊಳ್ಳುತ್ತಾರೆ ಮತ್ತು ರಿಷಭ್ ಪಂತ್ನ್ನು ಈ ಪಂದ್ಯದಿಂದ ಹೊರಗಿಟ್ಟರೆ ಕೆಲ ಸಮಯ ವಿಶ್ರಾಂತಿಯನ್ನು ಪಡೆದುಕೊಂಡು ಉತ್ತಮ ಫಾರ್ಮ್ಗೆ ಮರಳಬಹುದು' ಎಂದು ದಾನಿಶ್ ಕನೇರಿಯಾ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಪಂತ್ ಬದಲು ವೃದ್ದಿಮಾನ್ ಸಹಾಗೆ ಅವಕಾಶ ನೀಡಿ
ಇನ್ನೂ ಮುಂದುವರಿದು ಮಾತನಾಡಿರುವ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ದಾನಿಶ್ ಕನೇರಿಯಾ ರಿಷಭ್ ಪಂತ್ ಅವರನ್ನು ತಂಡದಿಂದ ಕೈ ಬಿಟ್ಟು ಮತ್ತೋರ್ವ ಕೀಪರ್ ವೃದ್ದಿಮಾನ್ ಸಹಾಗೆ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆಡುವ ಅವಕಾಶವನ್ನು ನೀಡಬೇಕೆಂದು ದಾನಿಶ್ ಕನೇರಿಯಾ ಅಭಿಪ್ರಾಯಪಟ್ಟಿದ್ದಾರೆ.
ರಿಷಭ್ ಪಂತ್ ತನ್ನ ಸ್ವಾಭಾವಿಕ ಆಟವನ್ನು ಆಡುತ್ತಿಲ್ಲ
ರಿಷಭ್ ಪಂತ್ ಬದಲು ವೃದ್ಧಿಮಾನ್ ಸಹಾಗೆ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಸ್ಥಾನ ನೀಡಬೇಕು ಎಂದು ಅಭಿಪ್ರಾಯಪಟ್ಟಿರುವ ದಾನಿಶ್ ಕನೇರಿಯಾ ರಿಷಭ್ ಪಂತ್ ತಮ್ಮ ಸ್ವಾಭಾವಿಕ ಆಟವನ್ನು ಆಡದೇ ರನ್ ಗಳಿಸಲು ಹೋಗಿ ಎಡವುತ್ತಿದ್ದಾರೆ ಎಂದಿದ್ದಾರೆ. ಕಳೆದ ಆಸ್ಟ್ರೇಲಿಯಾ ಸರಣಿಯಲ್ಲಿ ತನ್ನ ಸ್ವಾಭಾವಿಕ ಆಟದ ಮೂಲಕ ಮಿಂಚಿದ್ದ ರಿಷಭ್ ಪಂತ್ ಸದ್ಯ ಸ್ವಾಭಾವಿಕ ಕಳಪೆ ಫಾರ್ಮ್ನಲ್ಲಿದ್ದಾರೆ ಎಂದು ದಾನಿಶ್ ಕನೇರಿಯಾ ಅಭಿಪ್ರಾಯಪಟ್ಟಿದ್ದಾರೆ.