ಯುವ ಆಟಗಾರರಿಗೆ ಹಾರ್ದಿಕ್ ಸಲಹೆ
"ಸಾಕಷ್ಟು ಯುವ ಆಟಗಾರರು ತಂಡದಲ್ಲಿದ್ದಾರೆ. ಜೀವನದಲ್ಲಿ ಕಠಿಣ ಪರಿಶ್ರಮ ಮಾತ್ರವೇ ಉನ್ನತ ಮಟ್ಟಕ್ಕೇರಲು ಇರುವ ದಾರಿಯಾಗಿದೆ. ಅದೇ ಸಂದರ್ಭದಲ್ಲಿ ನಿಮ್ಮ ಕೆಲಸದ ಮೇಲೆ ಪ್ರಾಮಾಣಿಕವಾಗಿ ತೊಡಗಿಸಿಕೊಂಡರೆ ಮಾತ್ರವೇ ಯಶಸ್ಸು ಸಾಧ್ಯವಿದೆ. ನಮ್ಮ ತಂಡದಲ್ಲಿರುವ ಎಲ್ಲರು ಕೂಡ ಅತ್ಯುನ್ನತ ಸಾಧನೆ ಮಾಡಿರುವುದನ್ನು ನೀವು ನೋಡಬಹುದು" ಎಂದಿದ್ದಾರೆ ಟೀಮ್ ಇಂಡಿಯಾ ಹಂಗಾಮಿ ನಾಯಕ ಹಾರ್ದಿಕ್ ಪಾಂಡ್ಯ.
ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಮಿಂಚಿದ ಹಾರ್ದಿಕ್
ಇನ್ನು ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಹಾರ್ದಿಕ್ ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗದಲ್ಲಿಯೂ ಅಬ್ಬರದ ಪ್ರದರ್ಶನ ನೀಡಿದ್ದಾರೆ. ಮೊದಲಿಗೆ ಬೌಲಿಂಗ್ ಬ್ಯಾಟಿಂಗ್ನಲ್ಲಿ ಕೇವಲ 17 ಎಸೆತಗಳಲ್ಲಿ 30 ರನ್ ಬಾರಿಸಿದ ಹಾರ್ದಿಕ್ ಪಾಂಡ್ಯ ಬಳಿಕ ಬೌಲಿಂಗ್ನಲ್ಲಿಯೂ ಅದ್ಭುತ ದಾಳಿ ನಡೆಸಿದರು. ನಾಲ್ಕು ಓವರ್ಗಳ ಬೌಲಿಂಗ್ನಲ್ಲಿ ಹಾರ್ದಿಕ್ ಪಾಂಡ್ಯ ಕೇವಲ 16 ರನ್ಗಳನ್ನು ನೀಡಿ 4 ವಿಕೆಟ್ ಸಂಪಾದಿಸಿದರು. ಉಳಿದಂತೆ ಅರ್ಷ್ದೀಪ್ ಸಿಂಗ್, ಉಮ್ರಾನ್ ಮಲಿಕ್ ಹಾಗೂ ಶಿವಂ ಮಾವಿ ತಲಾ ಎರಡು ವಿಕೆಟ್ ಪಡೆದುಕೊಂಡರು.
ಟೆಸ್ಟ್ ಸರಣಿಗೆ ಸಜ್ಜಾಗಲಿದೆ ಭಾರತ
ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಮುಕ್ತಾಯದ ಬಳಿಕ ಟೀಮ್ ಇಂಡಿಯಾ ಇನ್ನು ಟೆಸ್ಟ್ ಸರಣಿಗೆ ಸಜ್ಜಾಗಲಿದೆ. ಆಸ್ಟ್ರೇಲಿಯಾ ವಿರುದ್ಧ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟ್ರೋಫಿ ಫೆಬ್ರವರಿ 9ರಿಂದ ಆರಂಭವಾಗಲಿದ್ದು ಇದಕ್ಕಾಗಿ ಆಸ್ಟ್ರೇಲಿಯಾ ತಂಡ ಈಗಾಗಲೇ ಭಾರತಕ್ಕೆ ಆಗಮಿಸಿದೆ. ಸದ್ಯ ಆಸ್ಟ್ರೇಲಿಯಾ ತಂಡ ಬೆಂಗಳೂರಿನಲ್ಲಿಯೇ ಇದ್ದು ಆಲೂರಿನಲ್ಲಿರುವ ಕ್ರೀಡಾಂಗಣದಲ್ಲಿ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದೆ. ಟೀಮ್ ಇಂಡಿಯಾ ರೋಹಿತ್ ಶರ್ಮಾ ನೇತೃತ್ವದಲ್ಲಿ ಕಣಕ್ಕಿಳಿಯಲಿದ್ದು ಮೊದಲ ಎರಡು ಪಂದ್ಯಗಳಿಗೆ ಈಗಾಗಲೇ ಸ್ಕ್ವಾಡ್ ಘೋಷಣೆ ಮಾಡಲಾಗಿದೆ.