ಆರ್ಸಿಬಿ ಬ್ಯಾಟರ್ಗೆ ಸ್ಥಾನ
ಆರ್ಸಿಬಿ ತಂಡದ ಬ್ಯಾಟರ್ ದೇಶೀಯ ಕ್ರಿಕೆಟ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಆಯ್ಕೆದಾರರ ಸಮಿತಿಯ ಗಮನ ಸೆಳೆದಿದ್ದರು. ಅವರ ಸ್ಥಿರ ಪ್ರದರ್ಶನವನ್ನು ಗಮನಿಸಿರುವ ಆಯ್ಕೆದಾರರು ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡಿದ್ದಾರೆ.
ತಂಡಕ್ಕೆ ಆಯ್ಕೆಯಾದರೂ ಆಡುವ ಬಳಗದಲ್ಲಿ ಪಟಿದಾರ್ ಸ್ಥಾನ ಪಡೆಯುವುದು ಅನುಮಾನ. ನಾಯಕ ಮತ್ತು ಕೋಚ್ ಶ್ರೇಯಸ್ ಅಯ್ಯರ್ ಬದಲಿಗೆ ಸೂರ್ಯಕುಮಾರ್ ಯಾದವ್ಗೆ ಮೊದಲು ಅವಕಾಶ ನೀಡಲಿದ್ದಾರೆ.
ILT20: ಇಂಟರ್ನ್ಯಾಷನಲ್ ಲೀಗ್ ಟಿ20ಯಲ್ಲಿ ರಾಬಿನ್ ಉತ್ತಪ್ಪ ಭರ್ಜರಿ ಬ್ಯಾಟಿಂಗ್
ಆಡುವ ಬಳಗದಲ್ಲಿ ಸೂರ್ಯಕುಮಾರ್
ಶ್ರೇಯಸ್ ಅಯ್ಯರ್ ಹೊರಗುಳಿದ ಕಾರಣ ಸೂರ್ಯಕುಮಾರ್ ಯಾದವ್ ಆಡುವ ಬಳಗದಲ್ಲಿ ನೇರವಾಗಿ ಸ್ಥಾನ ಪಡೆಯುವ ಸಾಧ್ಯತೆ ಇದೆ. ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಸೂರ್ಯ ಬದಲಿಗೆ ಶ್ರೇಯಸ್ ಅಯ್ಯರ್ ಗೆ ಮಣೆ ಹಾಕಿದ್ದರು ನಾಯಕ ರೋಹಿತ್ ಶರ್ಮಾ.
ಟಿ20 ಮಾದರಿಯಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಸೂರ್ಯಕುಮಾರ್ ಯಾದವ್ ಅದನ್ನು ಏಕದಿನ ಮಾದರಿಯಲ್ಲಿ ಮುಂದುವರೆಸುವಲ್ಲಿ ವಿಫಲರಾಗಿದ್ದಾರೆ. 2023ರಲ್ಲಿ ಏಕದಿನ ವಿಶ್ವಕಪ್ ಇರುವುದರಿಂದ ಏಕದಿನ ಮಾದರಿಯಲ್ಲಿ ಬ್ಯಾಟಿಂಗ್ ಸುಧಾರಣೆ ಮಾಡಿಕೊಳ್ಳುವುದಾಗಿ ಸೂರ್ಯ ಹೇಳಿದ್ದರು. ಈಗ ಅವರಿಗೆ ಉತ್ತಮ ಅವಕಾಶ ಒದಗಿ ಬಂದಿದೆ.
ಟೀಂ ಇಂಡಿಯಾ ಅಭ್ಯಾಸ
ಮೊದಲ ಏಕದಿನ ಪಂದ್ಯಕ್ಕಾಗಿ ಟೀಂ ಇಂಡಿಯಾ ಹೈದರಾಬಾದ್ನಲ್ಲಿ ಕಠಿಣ ಅಭ್ಯಾಸ ನಡೆಸಿದೆ. ಜನವರಿ 18ರ ಬುಧವಾರ ಮಧ್ಯಾಹ್ನ 1.30ಕ್ಕೆ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ಆರಂಭವಾಗಲಿದೆ.
ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯನ್ನು ಕ್ಲೀನ್ಸ್ವೀಪ್ ಮಾಡಿರುವ ಭಾರತ ತಂಡ ಆತ್ಮವಿಶ್ವಾಸದಿಂದಲೇ ಕಿವೀಸ್ ಪಡೆಯನ್ನು ಎದುರಿಸಲಿದೆ. 2022ರ ನವೆಂಬರ್ ನಲ್ಲಿ ನ್ಯೂಜಿಲೆಂಡ್ ವಿರದ್ಧ ಏಕದಿನ ಸರಣಿಯನ್ನು ಸೋಲಿಗೆ ಸೇಡು ತೀರಿಸಿಕೊಳ್ಳಲು ಸಿದ್ಧವಾಗಿದೆ. 3 ಪಂದ್ಯಗಳಲ್ಲಿ ಭಾರತ ಗೆದ್ದರೆ, ಏಕದಿನ ಮಾದರಿಯಲ್ಲಿ ಐಸಿಸಿ ರ್ಯಾಂಕಿಂಗ್ನಲ್ಲಿ ನಂಬರ್ 1 ಪಟ್ಟಕ್ಕೇರುವ ಅವಕಾಶ ಭಾರತಕ್ಕಿದೆ.
ಏಕದಿನ ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ರಜತ್ ಪಟಿದಾರ್, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್.