ಮಂಗಳವಾರ, ಡಿಸೆಂಬರ್ 26ರಿಂದ ಸೆಂಚುರಿಯನ್ನ ಸೂಪರ್ಸ್ಪೋರ್ಟ್ ಪಾರ್ಕ್ನಲ್ಲಿ ಆರಂಭವಾಗುವ ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕಾಗಿ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಅವರು ಭಾರತದ ಆಡುವ 11ರ ಬಳಗವನ್ನು ಆಯ್ಕೆ ಮಾಡಿದ್ದಾರೆ.
ಮೊದಲ ಟೆಸ್ಟ್ ಪಂದ್ಯಕ್ಕಾಗಿ ತಮ್ಮ ಆಡುವ 11ರ ಬಳಗದಲ್ಲಿ ಟೀಮ್ ಇಂಡಿಯಾ ಕೇವಲ ಒಬ್ಬ ಮುಂಚೂಣಿ ಸ್ಪಿನ್ನರ್ನೊಂದಿಗೆ ಹೋಗುವ ಸಾಧ್ಯತೆಯಿದೆ ಎಂದು ಸಂಜಯ್ ಮಂಜ್ರೇಕರ್ ಅಭಿಪ್ರಾಯಪಟ್ಟಿದ್ದಾರೆ.
ಐಸಿಸಿ ಶ್ರೇಯಾಂಕದಲ್ಲಿ ನಂಬರ್ 1 ಟೆಸ್ಟ್ ಬೌಲರ್ ಆಗಿರುವ ರವಿಚಂದ್ರನ್ ಅಶ್ವಿನ್ ಅವರ ಬದಲಾಗಿ ಎಡಗೈ ಆಲ್ರೌಂಡರ್ ರವೀಂದ್ರ ಜಡೇಜಾಗೆ ಮಾಜಿ ಕ್ರಿಕೆಟಿಗ ಮತ್ತು ಕಾಮೆಂಟೇಟರ್ ಒಪ್ಪಿಗೆ ಸೂಚಿಸಿದರು.

ವಿದೇಶಿ ಟೆಸ್ಟ್ ಪಂದ್ಯಗಳಲ್ಲಿ ಬ್ಯಾಟರ್ ಆಗಿ ಅವರ ಪ್ರಭಾವಶಾಲಿ ದಾಖಲೆಯನ್ನು ಗಮನಿಸಿದರೆ ರವೀಂದ್ರ ಜಡೇಜಾ ಉತ್ತಮ ಆಯ್ಕೆಯಾಗುತ್ತಾರೆ ಎಂದು ಸಂಜಯ್ ಮಂಜ್ರೇಕರ್ ತಿಳಿಸಿದರು.
"ಇದು ಟರ್ನಿಂಗ್ ಪಿಚ್ ಎಂದು ತಿಳಿದಿಲ್ಲದ ಕಾರಣ, ಇದು ರ್ಯಾಂಕ್ ಟರ್ನರ್ ಆಗಿದ್ದರೆ ಅಥವಾ ಬಹಳಷ್ಟು ಟರ್ನಿಂಗ್ ಸಾಧ್ಯತೆಯಿರುವ ಪಿಚ್ ಆಗಿದ್ದರೆ, ಬಹುಶಃ ಭಾರತ ತಂಡವು ಇಬ್ಬರು ಸ್ಪಿನ್ನರ್ಗಳನ್ನು ಹೊಂದಬಹುದು".
"7ನೇ ಕ್ರಮಾಂಕಕ್ಕೆ ರವೀಂದ್ರ ಜಡೇಜಾ ಸೂಕ್ತ ಎನಿಸುತ್ತದೆ. ನಾನು ರವಿಚಂದ್ರನ್ ಅಶ್ವಿನ್ ಅವರ ವಿದೇಶಿ ಟೆಸ್ಟ್ ಪಂದ್ಯಗಳಲ್ಲಿ ಅವರ ಬ್ಯಾಟಿಂಗ್ ಕೊಡುಗೆಗಳ ಕಾರಣದಿಂದ, 7ನೇ ಕ್ರಮಾಂಕದಲ್ಲಿ ಒಬ್ಬ ಸ್ಪಿನ್ನರ್ ಆಗಿ ರವೀಂದ್ರ ಜಡೇಜಾ ಅವರನ್ನು ಮೊದಲು ಆಯ್ಕೆ ಮಾಡುತ್ತಿದ್ದೇನೆ,"ಎಂದರು.
2021-22ರಲ್ಲಿ ಭಾರತ ತಂಡದ ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ರವಿಚಂದ್ರನ್ ಅಶ್ವಿನ್ ಗಮನಾರ್ಹ ಪರಿಣಾಮ ಬೀರಲು ವಿಫಲರಾದರು. ಆರು ಇನ್ನಿಂಗ್ಸ್ಗಳಿಂದ ಕೇವಲ ಮೂರು ವಿಕೆಟ್ಗಳನ್ನು ಪಡೆದರು. ಮತ್ತೊಂದೆಡೆ, ಆಲ್ರೌಂಡರ್ ರವೀಂದ್ರ ಜಡೇಜಾ ಗಾಯದ ಸಮಸ್ಯೆಯಿಂದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದರು.

ಭಾರತದ ಮಾಜಿ ಬ್ಯಾಟರ್ ಸಂಜಯ್ ಮಂಜ್ರೇಕರ್ ಅವರು ಶಾರ್ದೂಲ್ ಠಾಕೂರ್ ಅವರನ್ನು ಬ್ಯಾಟಿಂಗ್ ಕ್ರಮಾಂಕದಲ್ಲಿ ನಂ.8 ಆಗಿ ಆಡಿಸಬೇಕು ಎಂದು ಹೇಳಿದ್ದಾರೆ. ವಿಶೇಷವಾಗಿ, ಸರಣಿಯ ಮೊದಲ ಟೆಸ್ಟ್ ಪಂದ್ಯಕ್ಕೆ ಬ್ಯಾಟಿಂಗ್ ಕ್ರಮಾಂಕದಲ್ಲಿ ಡೆಪ್ತ್ ಹೊಂದಿರುವುದು ನಿರ್ಣಾಯಕ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ರೇನ್ಬೋ ನಾಡಿಗೆ ಭಾರತ ತಂಡದ ಹಿಂದಿನ ಭೇಟಿಯ ಸಂದರ್ಭದಲ್ಲಿ ಶಾರ್ದೂಲ್ ಠಾಕೂರ್ ಬೌಲಿಂಗ್ನಲ್ಲಿ ಅದ್ಭುತವಾದ ಕೆಲಸವನ್ನು ಮಾಡಿದ್ದರು ಎಂಬುದನ್ನು ಸಂಜಯ್ ಮಂಜ್ರೇಕರ್ ಗಮನಸೆಳೆದರು.
"8ನೇ ಕ್ರಮಾಂಕಕ್ಕೆ ನಾನು ಶಾರ್ದೂಲ್ ಠಾಕೂರ್ ಅವರೊಂದಿಗೆ ಹೋಗುತ್ತಿದ್ದೇನೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ಕ್ರಮಾಂಕದಲ್ಲಿ ಹೆಚ್ಚುವರಿ ಬ್ಯಾಟರ್ನ ಅಗತ್ಯವಿದೆ ಎಂದು ನಾನು ಭಾವಿಸುತ್ತೇನೆ. ಜೊತೆಗೆ, ದಕ್ಷಿಣ ಆಫ್ರಿಕಾದಲ್ಲಿ ಕಳೆದ ಸರಣಿಯಲ್ಲಿ ಶಾರ್ದೂಲ್ ಠಾಕೂರ್ ಒಂದೇ ಪಂದ್ಯದಲ್ಲಿ ಏಳು ವಿಕೆಟ್ಗಳನ್ನು ಪಡೆದಿದ್ದಾರೆ ಎಂಬುದನ್ನು ನಾವು ಮರೆಯಬಾರದು," ಎಂದು ಮಾಜಿ ಕ್ರಿಕೆಟಿಗ ಹೇಳಿದರು.
ಶಾರ್ದೂಲ್ ಠಾಕೂರ್ 2021-22ರ ಪ್ರವಾಸದಲ್ಲಿ ಆರು ಇನ್ನಿಂಗ್ಸ್ಗಳಿಂದ 11 ವಿಕೆಟ್ಗಳನ್ನು ಪಡೆದರು. ಇದರಲ್ಲಿ ಎರಡನೇ ಟೆಸ್ಟ್ ಪಂದ್ಯದಲ್ಲೇ ಏಳು ವಿಕೆಟ್ಗಳು ಸೇರಿದ್ದವು.
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್.