3. ವಾಶಿಂಗ್ಟನ್ ಸುಂದರ್
ವಾಶಿಂಗ್ಟನ್ ಸುಂದರ್ ಭಾರತೀಯ ಕ್ರಿಕೆಟ್ ತಂಡದ ಪ್ರತಿಭಾವಂತ ಆಟಗಾರರಲ್ಲಿ ವಾಶುಂಗ್ಟನ್ ಸುಂದರ್ ಕೂಡ ಒಬ್ಬರು ಎಂಬುದರಲ್ಲಿ ಅನುಮಾನವಿಲ್ಲ. ಬ್ಯಾಟಿಂಗ್ ಆಲ್ರೌಂಡರ್ ಆಗಿರುವ ಸುಂದರ್ ಆಪ್ಸ್ಪಿನ್ ಬೌಲಿಂಗ್ ಮೂಲಕ ಮಿಂಚಬಲ್ಲ ಸಾಮರ್ಥ್ಯ ಹೊಂದಿದ್ದಾರೆ. ಆದರೆ ದಕ್ಷಿಣ ಆಪ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ವಾಶಿಂಗ್ಟನ್ ಸುಂದರ್ ಅವಕಾಶ ಪಡೆಯುವ ಸಾಧ್ಯತೆ ತೀರಾ ಕಡಿಮೆಯಿದೆ. ಇದಕ್ಕೆ ಕಾರಣ ದಕ್ಷಿಣ ಆಫ್ರಿಕಾದ ಪಿಚ್ ಕಂಡಿಶನ್. ಅಲ್ಲಿನ ಪಿಚ್ ಹೆಚ್ಚಾಗಿ ವೇಗದ ಬೌಲರ್ಗಳಿಗೆ ಅನುಕೂಲವನ್ನು ಒದಗಿಸುವ ಕಾರಣ ಮಧ್ಯಮ ವೇಗದ ಬೌಲಿಂಗ್ ಮಾಡುವ ಸಾಮರ್ಥ್ಯ ಹೊಂದಿರುವ ವೆಂಕಟೇಶ್ ಐಯ್ಯರ್ ಅವರನ್ನು ಆಡಿಸುವ ಸಾಧ್ಯತೆಯಿದೆ. ಅಲ್ಲದೆ ಆಫ್ ಸ್ಪಿನ್ ಬೌಲರ್ ಆಗಿ ಅನುಭವಿ ಆರ್ ಅಶ್ವಿನ್ ಕೂಡ ಇರು ಕಾರಣ ಸ್ಪಿನ್ ಬೌಲಿಂಗ್ನ ಅವಶ್ಯಕತೆ ಮ್ಯಾನೇಜ್ಮೆಂಟ್ಗೆ ಕಂಡರೆ ಅನುಭವ ಆಟಗಾರನಿಗೆ ಅವಕಾಶ ದೊರೆಯುವ ಸಾಧ್ಯತೆಯಿದೆ. ಅಲ್ಲದೆ ವಾಶಿಂಗ್ಟನ್ ಸುಂದರ್ ಕೇವಲ ಒಂದು ಏಕದಿನ ಪಂದ್ಯವನ್ನು ಆಡಿದ ಅನುಭವ ಮಾತ್ರವೇ ಹೊಂದಿದ್ದಾರೆ.
2. ಪ್ರಸಿದ್ಧ್ ಕೃಷ್ಣ
ಕನ್ನಡಿಗ ಪ್ರಸಿದ್ಧ್ ಕೃಷ್ಣ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಟೀಮ್ ಇಂಡಿಯಾಗೆ ಆಯ್ಕೆಯಾಗಿರುವ ವೇಗಿಗಳ ಪೈಕಿ ಒಬ್ಬರಾಗಿದ್ದಾರೆ. ಆದರೆ ದಕ್ಷಿಣ ಆಫ್ರಿಕಾ ತಂಡ ತವರಿನಲ್ಲಿ ಹೆಚ್ಚು ಬಲಶಾಲಿಯಾಗಿರುವ ತಂಡವಾಗಿದ್ದು ಈ ತಂಡದ ವಿರುದ್ಧ ಭಾರತ ಅತ್ಯಂತ ಬಲಿಷ್ಠ ಹಾಗೂ ಅನುಭವಿ ವೇಗಿಗಳನ್ನು ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಿದೆ. ತಂಡದಲ್ಲಿರುವ ಇತರೆ ವೇಗಿಗಳಾದ ಜಸ್ಪ್ರೀತ್ ಬೂಮ್ರಾ, ಭುವನೇಶ್ವರ್ ಕುಮಾರ್, ಶಾರ್ದೂಲ್ ಠಾಕೂರ್ ಹಾಗೂ ದೀಪಕ್ ಚಾಹರ್ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ನಲ್ಲಿ ಯುವ ವೇಗಿ ಪ್ರಸಿಧ್ಧ್ ಕೃಷ್ಣಗಿಂತ ಹೆಚ್ಚಿನ ಅನುಭವ ಹೊಂದಿದ್ದಾರೆ. ಹೀಗಾಗಿ ಪ್ರಸಿಧ್ಧ್ ಕೃಷ್ಣ ಎಕದಿನ ಸರಣಿಯಲ್ಲಿ ಆಡುವ ಅವಕಾಶ ಪಡೆಯುವ ಸಾಧ್ಯತೆ ತೀರಾ ಕಡಿಮೆಯಿದೆ.
1. ಋತುರಾಜ್ ಗಾಯಕ್ವಾಡ್
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಸರಣಿಯಲ್ಲಿ ಆಡುವ ಅವಕಾಶ ಕಳೆದುಕೊಳ್ಳುವ ಸಾಧ್ಯತೆಯಿರುವ ಮತ್ತೋರ್ವ ಆಟಗಾರನೆಂದರೆ ಯುವ ಆರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್. ಆರಂಭಿಕ ಆಟಗಾರನಾಗಿ ಮಾತ್ರವೇ ಕಣಕ್ಕಿಳಿಯುವ ಋತುರಾಜ್ ಗಾಯಕ್ವಾಡ್ ಈ ಸರಣಿಯಲ್ಲಿ ಅವಕಾಶ ಪಡೆಯುವ ಸಾಧ್ಯತೆ ಕಡಿಮೆಯಿದೆ. ರೋಹಿತ್ ಶರ್ಮಾ ಅಲಭ್ಯತೆಯಲ್ಲಿ ನಾಯಕ ಕೆಎಲ್ ರಾಹುಲ್ ಹಾಗೂ ಶಿಖರ್ ಧವನ್ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಇನ್ನು ಈ ಇಬ್ಬರಲ್ಲಿ ಇಬ್ಬರು ಅಲಭ್ಯವಾದರು ಕೂಡ ಇಶಾನ್ ಕಿಶನ್ ಹಾಗೂ ವೆಂಕಟೇಶ್ ಐಯ್ಯರ್ರಂತಾ ಆಟಗಾರರು ಅವಕಾಶ ಪಡೆಯುವ ಸಾಧ್ಯತೆ ಹೆಚ್ಚಿದೆ. ಹೀಗಾಘಿ ಏಕದಿನ ಸರಣಿಯುದ್ದಕ್ಕೂ ಋತುರಾಜ್ ಗಾಯಕ್ವಾಡ್ ಬೆಂಚ್ ಕಾಯುವ ಸಾಧ್ಯತೆ ಹೆಚ್ಚಿದೆ.