
ಆರಂಭಿಕ ಆಟಗಾರರ ಜೊತೆಯಾಟ
ಈ ಪಂದ್ಯದಲ್ಲಿ ಭಾರತ ಮೇಲುಗೈ ಸಾಧಿಸಲು ಪ್ರಮುಖ ಕಾರಣವಾಗಿದ್ದು ಮೊದಲ ಇನ್ನಿಂಗ್ಸ್ನಲ್ಲಿ ಭಾರತ ಸಾಧಿಸಿದ ಮುನ್ನಡೆ. ಇದಕ್ಕೆ ಪ್ರಮುಖ ಕಾರಣ ಮೊದಲ ದಿನ ಭಾರತೀಯ ಆರಂಭಿಕ ಆಟಗಾರರು ನೀಡಿದ ಅದ್ಭುತ ಪ್ರದರ್ಶನ. ಕನ್ನಡಿಗ ಆಟಗಾರರಾದ ಕೆಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಮೊದಲ ಇನ್ನಿಂಗ್ಸ್ನಲ್ಲಿ 117 ರನ್ಗಳ ಪ್ರಮುಖ ಜೊತೆಯಾಟವನ್ನು ನೀಡಿದರು. ಈ ಜೊತೆಯಾಟದ ಕಾರಣದಿಂದಾಗಿ ಭಾರತ ಮೊದಲ ಇನ್ನಿಂಗ್ಸ್ನಲ್ಲಿ ಉತ್ತಮ ರನ್ಗಳಿಸಲು ಕಾರಣವಾಯಿತು. ಇದು ತಂಡ ದೊಡ್ಡ ಮುನ್ನಡೆ ಸಾಧಿಸಲೂ ಕಾರಣವಾಯಿತಲ್ಲದೆ ಪಂದ್ಯದುದ್ದಕ್ಕೂ ತಂಡದ ಮೇಲುಗೈಗೆ ಕಾರಣವಾಯಿತು.

ಕೆಎಲ್ ರಾಹುಲ್ ಶತಕ
ಕೆಎಲ್ ರಾಹುಲ್ ಈ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿ ಟೆಸ್ಟ್ ಕ್ರಿಕೆಟ್ನಲ್ಲಿ ತಮ್ಮ ಏಳನೇ ಶತಕವನ್ನು ಸಿಡಿಸಿದರು. ಮೊದಲ ದಿನದಾಟದಲ್ಲಿ ಸಂಪೂರ್ಣವಾಗಿ ಬ್ಯಾಟಿಂಗ್ ಮಾಡಿದ ಕೆಎಲ್ ರಾಹುಲ್ ಭರ್ಜರಿ 123 ರನ್ಗಳ ಕೊಡುಗೆ ನೀಡಿದರು. ಮೊದಲ ವಿಕೆಟ್ಗೆ ಮಯಾಂಕ್ ಅಗರ್ವಾಲ್ ಜೊತೆಗೆ ಶತಕದ ಜೊತೆಯಾಟವನ್ನು ನೀಡಿದ ನಂತರ 4ನೇ ವಿಕೆಟ್ಗೆ ಅಜಿಂಕ್ಯಾ ರಹಾನೆ ಜೊತೆಗೆ 79 ರನ್ಗಳ ಮತ್ತೊಂದು ಮಹತ್ವದ ಜೊತೆಯಾಟದಲ್ಲಿಯೂ ಭಾಗೊಯಾದರು. ಈ ಮೂಲಕ ತಂಡ ಸವಾಲಿನ ಮೊತ್ತ ಪೇರಿಸಲು ಕಾರಣವಾದರು. ಕೆಎಲ್ ರಾಹುಲ್ ನೀಡಿದ ಈ ಪ್ರದರ್ಶನ ತಮಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದೆ.

ಶಮಿ ಮಾರಕ ಸ್ಪೆಲ್
ಇನ್ನು ಭಾರತ ಮೊದಲ ಇನ್ನಿಂಗ್ಸ್ನಲ್ಲಿ 327 ರನ್ಗಳನ್ನು ಗಳಿಸಿ ಆಲೌಟ್ ಆದ ಬಳಿಕ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ಗೆ ಇಳಿದಿತ್ತು. ಆದರೆ ಈ ಸಂದರ್ಭದಲ್ಲಿ ಭಾರತೀಯ ಬೌಲರ್ಗಳು ದಕ್ಷಿಣ ಆಫ್ರಿಕಾ ದಾಂಡಿಗರು ಕ್ರೀಸ್ನಲ್ಲಿ ನೆಲೆಯೂರಲು ಯಾವುದೇ ಅವಕಾಶವನ್ನು ನೀಡಲಿಲ್ಲ. ಅದರಲ್ಲೂ ಟೀಮ್ ಇಂಡಿಯಾದ ಪ್ರಮುಖ ವೇಗಿ ಮೊಹಮ್ಮದ್ ಶಮಿ ದಕ್ಷಿಣ ಆಫ್ರಿಕಾ ದಾಂಡಿಗರಿಗೆ ಕಂಟಕವಾದರು. ಇನ್ನಿಂಗ್ಸ್ನಲ್ಲಿ ಶಮಿ ಭರ್ಜರಿ 5 ವಿಕೆಟ್ ಕಿತ್ತು ಆತಿಥೇಯರಿಗೆ ಆಘಾತ ನೀಡಿದರು. ಈ ಮೂಲಕ ಭಾರತದ ಮೇಲುಗೈಗೆ ಕಾರಣವಾದರು. ಈ ಮೂಲಕ ದಕ್ಷಿಣ ಆಫ್ರಿಕಾ ತಂಡ 197 ರನ್ಗಳಿಗೆ ಆಲೌಟ್ ಆಯಿತು. ಈ ಪ್ರದರ್ಶನ ಕೂಡ ತಂಡ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದೆ.

2ನೇ ಇನ್ನಿಂಗ್ಸ್ನಲ್ಲಿ ಭಾರತದ ಬೌಲರ್ಗಳ ಸಂಘಟಿತ ಹೋರಾಟ
ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಗೆಲುವಿಗೆ ಕಾರಣವಾದ ಮತ್ತೊಂದು ಪ್ರಮುಖ ಸಂಗತಿಯೆಂದರೆ ಟೀಮ್ ಇಂಡಿಯಾದ ಬೌಲರ್ಗಳ ಸಂಘಟಿತ ಹೋರಾಟ. ಭಾರತ ಎರಡನೇ ಇನ್ನಿಂಗ್ಸ್ನಲ್ಲಿ 174 ರನ್ಗಳಿಗೆ ಆಲೌಟ್ ಆಗುವ ಮೂಲಕ ಎದುರಾಳಿಗೆ ಗೆಲ್ಲು 305 ರನ್ಗಳ ಗುರಿಯನ್ನು ನೀಡಿತ್ತು. ಈ ಮೊತ್ತವನ್ನು ರಕ್ಷಿಸಿಕೊಳ್ಳುವ ಜವಾಬ್ಧಾರಿಯನ್ನು ಭಾರತೀಯ ತಂಡದ ಬೌಲರ್ಗಳು ಅದ್ಭುತವಾಗಿ ನಿರ್ವಹಿಸಿದರು. ದಕ್ಷಿಣ ಆಪ್ರಿಕಾ ತಂಡದ ನಾಯಕ ಡೀನ್ ಎಲ್ಗರ್ ಹೊರತುಪಡಿಸಿ ಉಳಿದ ಯಾವ ಆಟಗಾರ ಕೂಡ ಕ್ರೀಸ್ನಲ್ಲಿ ಹೆಚ್ಚು ಹೊತ್ತು ನಿಲ್ಲಲು ಭಾರತೀಯ ಬೌಲರ್ಗಳು ಅವಕಾಶವನ್ನೇ ನೀಡಲಿಲ್ಲ. ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಹಾಗೂ ಆರ್ ಅಶ್ವಿನ್ ಸೇರಿ ದಕ್ಷಿಣ ಆಫ್ರಿಕಾ ತಂಡವನ್ನು 191 ರನ್ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಯಿತು. ಈ ಮೂಲಕ ಪಂದ್ಯವನ್ನು ಭಾರತ 113 ರನ್ಗಳ ಅಂತರದಿಂದ ಗೆದ್ದುಕೊಂಡಿದೆ. ಭಾರತದ ಪರವಾಗಿ ಎರಡನೇ ಇನ್ನಿಂಗ್ಸ್ನಲ್ಲಿ ಬೂಮ್ರಾ ಹಾಗೂ ಶಮಿ ತಲಾ 3 ವಿಕೆಟ್ ಪಡೆದರೆ ಸಿರಾಜ್ ಹಾಗೂ ಆರ್ ಅಶ್ವಿನ್ ತಲಾ 2 ವಿಕೆಟ್ ಕಬಳಿಸಿದರು.


Click it and Unblock the Notifications
