
ಕಂಟಕವಾದ ಕ್ಲಾಸೆನ್
ಇನ್ನು ದಕ್ಷಿಣ ಆಫ್ರಿಕಾ ತಂಡದ ವಿಕೆಟ್ ಕೀಪರ್ ಕ್ವಿಂಟನ್ ಡಿ ಕಾಕ್ ಮೊಣಕೈ ಗಾಯದ ಸಮಸ್ಯೆಗೆ ಒಳಗಾಗಿದ್ದ ಕಾರಣ ಇಂದಿನ ಪಂದ್ಯದಲ್ಲಿ ಡಿಕಾಕ್ ಬದಲಾಗಿ ಹೆನ್ರಿಚ್ ಕ್ಲಾಸೆನ್ ಕಣಕ್ಕಿಳಿದಿದ್ದರು. ತಂಡ 5.3 ಓವರ್ಗಳಲ್ಲಿ 29 ರನ್ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಸಂದರ್ಭದಲ್ಲಿ ಕಣಕ್ಕಿಳಿದ ಕ್ಲಾಸೆನ್ ಅಬ್ಬರದ ಬ್ಯಾಟಿಂಗ್ ನಡೆಸಿ ತಂಡವನ್ನು ಬಹುತೇಕ ಗೆಲುವಿನ ಸನಿಹಕ್ಕೆ ತಂದಿಡುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. 46 ಎಸೆತಗಳನ್ನು ಎದುರಿಸಿ 81 ರನ್ ಚಚ್ಚಿದ ಕ್ಲಾಸೆನ್ 7 ಬೌಂಡರಿ ಮತ್ತು 5 ಸಿಕ್ಸರ್ ಬಾರಿಸಿದರು.

ಭುವನೇಶ್ವರ್ ಕುಮಾರ್ ಶ್ರಮ ವ್ಯರ್ಥ
ಭಾರತದ ವೇಗಿ ಭುವನೇಶ್ವರ್ ಕುಮಾರ್ ದಕ್ಷಿಣ ಆಫ್ರಿಕಾ 29 ರನ್ಗಳಿಗೆ ತನ್ನ ಮೊದಲ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿಕೊಳ್ಳುವಂತೆ ಮಾಡಿದ್ದರು. ಪಂದ್ಯದಲ್ಲಿ ತನ್ನ ಪಾಲಿನ ಎಲ್ಲಾ 4 ಓವರ್ ಬೌಲಿಂಗ್ ಮಾಡಿದ ಭುವನೇಶ್ವರ್ ಕುಮಾರ್ ಕೇವಲ 13 ರನ್ ನೀಡಿ 4 ವಿಕೆಟ್ ಪಡೆದರು. ಆದರೆ ತಂಡದ ಉಳಿದ ಬೌಲರ್ಗಳು ಅಗತ್ಯವಿದ್ದ ಪ್ರದರ್ಶನ ನೀಡುವಲ್ಲಿ ವಿಫಲರಾದ ಕಾರಣ ಟೀಮ್ ಇಂಡಿಯಾ ಸೋಲುಂಡಿದ್ದು, ಭುವನೇಶ್ವರ್ ಕುಮಾರ್ ಶ್ರಮ ವ್ಯರ್ಥವಾಗಿದೆ.

ಸಂಕಷ್ಟಕ್ಕೆ ಸಿಲುಕಿದ ಟೀಮ್ ಇಂಡಿಯಾ
ಇನ್ನು 5 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಮೊದಲೆರಡು ಪಂದ್ಯಗಳನ್ನು ಸೋತು ತೀವ್ರ ಹಿನ್ನಡೆ ಅನುಭವಿಸಿರುವ ಟೀಮ್ ಇಂಡಿಯಾ ಇದೀಗ ಸಂಕಷ್ಟಕ್ಕೆ ಸಿಲುಕಿಕೊಂಡಿದೆ. ಹೌದು, ಈ ಸರಣಿಯಲ್ಲಿ ವಿಜೇತರಾಗಿ ಹೊರಹೊಮ್ಮಬೇಕೆಂದರೆ ಉಳಿದಿರುವ ಎಲ್ಲಾ 3 ಪಂದ್ಯಗಳಲ್ಲಿಯೂ ಜಯ ಸಾಧಿಸಲೇಬೇಕಾದ ಒತ್ತಡಕ್ಕೆ ಇದೀಗ ರಿಷಬ್ ಪಂತ್ ಪಡೆ ಸಿಲುಕಿಕೊಂಡಿದೆ.


Click it and Unblock the Notifications
