2022ರ ಡಿಸೆಂಬರ್ 30ರಂದು ಕಾರು ಅಪಘಾತದಲ್ಲಿ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ಅವರು 2024ರ ಐಪಿಎಲ್ನಲ್ಲಿ ಆಡಲು ಸಜ್ಜಾಗುತ್ತಿದ್ದಾರೆ.
ಇದೇ ವೇಳೆ ಎಡಗೈ ಬ್ಯಾಟರ್ ರಿಷಭ್ ಪಂತ್ ಅವರು ಭಾರತ ತಂಡಕ್ಕೆ ಮರಳಿದ ನಂತರ, ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಭಾರತ ಟೆಸ್ಟ್ ತಂಡದಲ್ಲಿ ಒಂದೇ ಸ್ಥಾನಕ್ಕಾಗಿ ಪೈಪೋಟಿ ನಡೆಸಬಹುದು ಎಂದು ಭಾರತದ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಅಭಿಪ್ರಾಯಪಟ್ಟಿದ್ದಾರೆ.
ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ನಿಭಾಯಿಸಿದ ಕೆಎಲ್ ರಾಹುಲ್ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಬ್ಯಾಟ್ನೊಂದಿಗೆ ಉತ್ತಮವಾಗಿದ್ದರು. ಮೊದಲ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ ಸಂವೇದನಾಶೀಲ ಶತಕವನ್ನು ಗಳಿಸಿದರು.

ಇದನ್ನು ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಅವರು ಟೆಸ್ಟ್ ಕ್ರಿಕೆಟ್ನಲ್ಲಿ ತಾವು ನೋಡಿದ ಅತ್ಯುತ್ತಮ ಇನ್ನಿಂಗ್ಸ್ಗಳಲ್ಲಿ ಒಂದಾಗಿದೆ ಎಂದು ಬಣ್ಣಿಸಿದ್ದಾರೆ. ಸೆಂಚುರಿಯನ್ನ ಕಠಿಣ ಪರಿಸ್ಥಿತಿಯಲ್ಲಿ ಕೆಎಲ್ ರಾಹುಲ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಭಾರತದ ಬ್ಯಾಟಿಂಗ್ ವಿಭಾಗವನ್ನು ಏಕಾಂಗಿಯಾಗಿ ಮುನ್ನಡೆಸಿದರು.
ಟೆಸ್ಟ್ ಸರಣಿಯ ಮುಕ್ತಾಯದ ನಂತರ ಮಾತನಾಡಿದ ಭಾರತದ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್, ಕೆಎಲ್ ರಾಹುಲ್ ಅವರನ್ನು ಶ್ಲಾಘಿಸಿದರು ಮತ್ತು ಅವರು ಕ್ರಿಕೆಟ್ನ ಎಲ್ಲಾ ಸ್ವರೂಪಗಳಲ್ಲಿ ಪಡೆಯುವ ಪ್ರತಿಯೊಂದು ಅವಕಾಶವನ್ನು ಅವರು ಗೌರವಿಸುತ್ತಿದ್ದಾರೆ ಎಂದು ಹೇಳಿದರು.
ಗಾಯದಿಂದ ಚೇತರಿಸಿಕೊಳ್ಳುತ್ತಿರುವ ರಿಷಭ್ ಪಂತ್ ಭಾರತ ತಂಡಕ್ಕೆ ಮರಳಿದ ನಂತರ 5ನೇ ಕ್ರಮಾಂಕಕ್ಕಾಗಿ ಹೋರಾಡಬೇಕಾಗುತ್ತದೆ. ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ನಡುವೆ ಈ ಪೈಪೋಟಿ ಕಾಣಬಹುದು ಎಂದು ಸಂಜಯ್ ಮಂಜ್ರೇಕರ್ ಹೇಳಿದರು.

"ಕೆಎಲ್ ರಾಹುಲ್ ಪ್ರತಿ ಸ್ವರೂಪದ ಬಗ್ಗೆ ಕಾಳಜಿ ವಹಿಸುವ ವ್ಯಕ್ತಿ ಎಂದು ನಾನು ಭಾವಿಸುತ್ತೇನೆ. ಆತ ಆ ಶತಕವನ್ನು ಗಳಿಸಿದ ನಂತರ, ಅವನು ಪಡೆಯುವ ಪ್ರತಿಯೊಂದು ಅವಕಾಶವನ್ನು ಹೇಗೆ ಮೌಲ್ಯೀಕರಿಸುತ್ತಾನೆ ಎಂದು ನಮಗೆ ತಿಳಿದಿದೆ," ಎಂದರು.
"ನಾನು ಈಗ ಎರಡು ವರ್ಷಗಳ ನಂತರ ನೋಡುತ್ತಿದ್ದೇನೆ ಮತ್ತು ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಸ್ಥಾನಕ್ಕಾಗಿ ಕೆಎಲ್ ರಾಹುಲ್ ನಿಜವಾಗಿಯೂ ಶ್ರೇಯಸ್ ಅಯ್ಯರ್ ಅವರೊಂದಿಗೆ ಸ್ಪರ್ಧಿಸುತ್ತಿದ್ದಾರೆ ಎಂದು ನಾನು ಭಾವಿಸಿದೆ. ಏಕೆಂದರೆ ರಿಷಭ್ ಪಂತ್ ಫಿಟ್ ಆದ ತಕ್ಷಣ, ಅವರು ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟರ್ ಆಗುತ್ತಾರೆ. ರಿಷಭ್ ಪಂತ್ ಬ್ಯಾಟಿಂಗ್ನಲ್ಲಿ ಉತ್ತಮ ಗುಣಮಟ್ಟವಿದೆ," ಎಂದು ಎರಡನೇ ಟೆಸ್ಟ್ ಪಂದ್ಯದ ನಂತರ ಸಂಜಯ್ ಮಾಂಜ್ರೇಕರ್ ಸ್ಟಾರ್ ಸ್ಪೋರ್ಟ್ಸ್ನಲ್ಲಿ ಹೇಳಿದರು.
"ಕೆಎಲ್ ರಾಹುಲ್ರ ಆ ಇನ್ನಿಂಗ್ಸ್ (ಮೊದಲ ಟೆಸ್ಟ್ ಶತಕ) ಕೇವಲ ನಂಬಲಸಾಧ್ಯವಾಗಿತ್ತು. ದುರದೃಷ್ಟವಶಾತ್, ಡೀನ್ ಎಲ್ಗರ್ 185 ರನ್ ಗಳಿಸಿದರು. ಹೀಗಾಗಿ ದಕ್ಷಿಣ ಆಫ್ರಿಕಾ 400 ರನ್ ಕಲೆಹಾಕಿದರು. ಭಾರತ ಆ ಸಮಯದಲ್ಲಿ 260 ರನ್ಗಳಿಗೆ ನಿಯಂತ್ರಿಸಿದ್ದರೆ, ಆ ಕ್ಷಣವೇ ದಕ್ಷಿಣ ಆಫ್ರಿಕಾದಲ್ಲಿ ಚೊಚ್ಚಲ ಟೆಸ್ಟ್ ಸರಣಿ ಗೆಲುವು ಸಾಧಿಸುತ್ತಿತ್ತು," ಎಂದು ಸಂಜಯ್ ಮಾಂಜ್ರೇಕರ್ ತಿಳಿಸಿದರು.