ಶಿಖರ್ ಧವನ್ ನಾಯಕತ್ವದಲ್ಲಿ ಮುನ್ನಡೆಯಲಿರುವ ಭಾರತ
ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಸೇರ್ಪಡೆಗೊಂಡಿರುವ ಯಾವುದೇ ಆಟಗಾರರು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಇರುವುದಿಲ್ಲ. ಹಿರಿಯ ಆಟಗಾರ ಶಿಖರ್ ಧವನ್ ಏಕದಿನ ಸರಣಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಸಂಜು ಸ್ಯಾಮ್ಸನ್ ಉಪನಾಯಕರಾಗಿರುತ್ತಾರೆ. ಮುಖ್ಯ ಕೋಚ್ ರಾಹುಲ್ ದ್ರಾವಿಡ್ ತಂಡದೊಂದಿಗೆ ಆಸ್ಟ್ರೇಲಿಯಾಕ್ಕೆ ತೆರಳುತ್ತಿರುವ ಕಾರಣ ವಿವಿಎಸ್ ಲಕ್ಷ್ಮಣ್ ಅವರು ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಕೋಚ್ ಆಗಲಿದ್ದಾರೆ.
ಸಂಜು ಪ್ರಸ್ತುತ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ ಎ ತಂಡವನ್ನು ಮುನ್ನಡೆಸುತ್ತಿದ್ದಾರೆ. ಮೊದಲೆರಡು ಪಂದ್ಯಗಳನ್ನು ಗೆದ್ದು ಈಗಾಗಲೇ ಸರಣಿಯನ್ನು ವಶಪಡಿಸಿಕೊಂಡಿದ್ದಾರೆ.
ರೋಹಿತ್ ಮತ್ತು ಕೊಹ್ಲಿಗೆ ವಿಶ್ರಾಂತಿ
ಏಕದಿನ ಸರಣಿಗಾಗಿ ಟಿ20 ವಿಶ್ವಕಪ್ ತಂಡದಲ್ಲಿರುವ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ಶಿಖರ್ ಧವನ್ ತಂಡವನ್ನು ಮುನ್ನಡೆಸಲಿದ್ದಾರೆ. ಭಾರತ ಎ ಮತ್ತು ನ್ಯೂಜಿಲೆಂಡ್ ಎ ನಡುವಿನ ಏಕದಿನ ಸರಣಿಯ ನಂತರ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗುವುದು ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಮಂಕಡಿಂಗ್ ಮಾಡಿದ್ದ ಕಪಿಲ್ ದೇವ್, ವಿಶ್ವ ಕ್ರಿಕೆಟ್ನಲ್ಲಿ ಭಾರಿ ವಿವಾದ ಸೃಷ್ಟಿಸಿದ 5 ಮಂಕಡಿಂಗ್ ಘಟನೆಗಳಿವು
ಮೂರು ಏಕದಿನ ಪಂದ್ಯಗಳಲ್ಲಿ ಸವಾಲು
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಸರಣಿ ಅಕ್ಟೋಬರ್ 6 ರಿಂದ 11 ರವರೆಗೆ ನಡೆಯಲಿದೆ. ಮೊದಲ ಏಕದಿನ ಪಂದ್ಯ ರಾಂಚಿಯಲ್ಲಿ ಸಂಜೆ 6 ಗಂಟೆಗೆ ನಡೆಯಲಿದೆ. 9ರಂದು ಎರಡನೇ ಪಂದ್ಯ ಲಕ್ನೋದಲ್ಲಿ ನಡೆಯಲಿದ್ದು, ಮೂರನೇ ಹಾಗೂ ಅಂತಿಮ ಪಂದ್ಯ 11ರಂದು ದೆಹಲಿಯಲ್ಲಿ ನಡೆಯಲಿದೆ.
ಟಿ20 ವಿಶ್ವಕಪ್ನಲ್ಲಿ ಭಾಗವಹಿಸುತ್ತಿರುವ ತಂಡದೊಂದಿಗೆ ದಕ್ಷಿಣ ಆಫ್ರಿಕಾ ಭಾರತಕ್ಕೆ ಬಂದಿದೆ. ಭಾರತದೊಂದಿಗೆ ಟಿ20 ಸರಣಿ ಮತ್ತು ಏಕದಿನ ಸರಣಿಯಲ್ಲಿ ಹರಿಣಗಳು ಅದೇ ತಂಡವನ್ನು ಕಣಕ್ಕಿಳಿಸುತ್ತಿದ್ದಾರೆ.
Ind vs SA ODI: ರಜತ್ ಪಾಟೀದಾರ್ಗೆ ಚೊಚ್ಚಲ ಅವಕಾಶ ಸಿಗುವ ಸಾಧ್ಯತೆ
ಆಸ್ಟ್ರೇಲಿಯಾದಲ್ಲಿ ನಡೆಯಲಿದೆ 2 ಅಭ್ಯಾಸ ಪಂದ್ಯ
ಏತನ್ಮಧ್ಯೆ, ಟಿ20 ವಿಶ್ವಕಪ್ಗೂ ಮುನ್ನ ಭಾರತ ಆಸ್ಟ್ರೇಲಿಯಾದಲ್ಲಿ ಎರಡು ಅಭ್ಯಾಸ ಪಂದ್ಯಗಳನ್ನು ಆಡುತ್ತಿದೆ. ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ವಿರುದ್ಧ ಭಾರತದ ಅಭ್ಯಾಸ ಪಂದ್ಯವನ್ನಾಡಲಿವೆ.
ಪರಿಸ್ಥಿತಿ ಮತ್ತು ಹವಾಮಾನಕ್ಕೆ ಹೊಂದಿಕೊಳ್ಳಲು ಭಾರತ ತಂಡವು ಮೊದಲೇ ಆಸ್ಟ್ರೇಲಿಯಾಕ್ಕೆ ಮರಳಿದೆ. ಈ ಕಾರಣಕ್ಕಾಗಿಯೇ ಭಾರತವು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ವಿಭಿನ್ನ ತಂಡವನ್ನು ಪ್ರಯತ್ನಿಸಲು ನಿರ್ಧರಿಸಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಗೆ ಸಂಭಾವ್ಯ ತಂಡ
ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ಪೃಥ್ವಿ ಶಾ, ಸಂಜು ಸ್ಯಾಮ್ಸನ್ (ಉಪನಾಯಕ, ವಿಕೆಟ್-ಕೀಪರ್), ರಾಹುಲ್ ತ್ರಿಪಾಠಿ, ರಜತ್ ಪಾಟೀದಾರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಉಮ್ರಾನ್ ಮಲಿಕ್, ಪ್ರಸಿದ್ಧ ಕೃಷ್ಣ, ಕುಲದೀಪ್ ಸೇನ್