For Quick Alerts
ALLOW NOTIFICATIONS  
For Daily Alerts
 

IND vs SA: ಮೊದಲ ಪಂದ್ಯದ ಸೋಲಿಗೆ ರಿಷಭ್ ಪಂತ್‌ನ ಈ ನಿರ್ಧಾರ ಕಾರಣ; ಪಾಕಿಸ್ತಾನ ಮಾಜಿ ಸ್ಪಿನ್ನರ್

IND vs SA: Rishabh Pants Decision Cause To Lost The First T20 Match Says Danish Kaneria

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಭಾರತ ವಿರುದ್ಧ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡ ದಾಖಲೆ ರನ್ ಗುರಿ ಬೆನ್ನತ್ತಿ ಗೆಲುವು ಸಾಧಿಸಿತು. 211 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸಿದ ಬಳಿಕ ಭಾರತದ ಕಳಪೆ ಬೌಲಿಂಗ್‌ನಿಂದ ಸೋಲಬೇಕಾಯಿತು.

ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್‌ಮನ್‌ಗಳಾದ ಡೇವಿಡ್ ಮಿಲ್ಲರ್ ಹಾಗೂ ವಾನ್‌ ಡರ್ ಡುಸೆನ್ ಭಾರತದ ಬೌಲಿಂಗ್ ದಾಳಿಯನ್ನು ಅಕ್ಷರಶಃ ಪುಡಿಗಟ್ಟಿದರು. ಈ ಮೂಲಕ ಭಾರತ ತಂಡವನ್ನು 7 ವಿಕೆಟ್‌ಗಳ ಅಂತರದ ಸೋಲಿಸಿ ಐದಿ ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದ್ದಾರೆ.

ಪಾಕಿಸ್ತಾನದ ಮಾಜಿ ಸ್ಪಿನ್ನರ್ ದಾನೀಶ್ ಕನೇರಿಯಾ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ರಿಷಭ್ ಪಂತ್ ಅವರ "ಕಳಪೆ' ನಾಯಕತ್ವವನ್ನು ಎತ್ತಿ ತೋರಿಸಿದ್ದಾರೆ.

211 ರನ್‌ ಡಿಫೆಂಡ್ ಮಾಡಿಕೊಳ್ಳುವಲ್ಲಿ ನಾಯಕತ್ವದ ಕೊರತೆ

211 ರನ್‌ ಡಿಫೆಂಡ್ ಮಾಡಿಕೊಳ್ಳುವಲ್ಲಿ ನಾಯಕತ್ವದ ಕೊರತೆ

ಗುರುವಾರ ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐದು ಪಂದ್ಯಗಳ ಸರಣಿಯ ಮೊದಲ ಟಿ20 ಪಂದ್ಯದಲ್ಲಿ ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್ ಮತ್ತು ಡೇವಿಡ್ ಮಿಲ್ಲರ್ ಜೋಡಿ ದಕ್ಷಿಣ ಆಫ್ರಿಕಾ ತಂಡವನ್ನು ಭಾರತದ ವಿರುದ್ಧ ಏಳು ವಿಕೆಟ್‌ಗಳ ಜಯ ಸಾಧಿಸಲು ನೆರವಾದರು. ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಕೇವಲ ಒಂದು ಓವರ್ ಎಸೆದಿದ್ದನ್ನು ಕಂಡು ಪಾಕಿಸ್ತಾನ ಮಾಜಿ ಸ್ಪಿನ್ನರ್ ದಾನೀಶ್ ಕನೇರಿಯಾ ಕೂಡ ಅಚ್ಚರಿ ವ್ಯಕ್ತಪಡಿಸಿದ್ದಾರೆ.

"ಭಾರತವು ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಸೋತಿದ್ದು, ಗಾಯದ ಕಾರಣದಿಂದಾಗಿ ಸರಣಿಯಿಂದ ಹೊರಗುಳಿದಿರುವ ಕಾರಣ ಕೆಎಲ್ ರಾಹುಲ್ ಅನುಪಸ್ಥಿತಿಯಲ್ಲಿ ರಿಷಭ್ ಪಂತ್ ಅವರು ತಂಡವನ್ನು ಮುನ್ನಡೆಸಿದರು. ರಿಷಭ್ ಪಂತ್ 211 ರನ್‌ಗಳ ಬೃಹತ್ ಮೊತ್ತ ದಾಖಲಿಸಿದ್ದರೂ, ಅದನ್ನು ಡಿಫೆಂಡ್ ಮಾಡಿಕೊಳ್ಳುವಲ್ಲಿ ನಾಯಕತ್ವದ ಕೊರತೆ ಎದ್ದು ಕಂಡಿತು".

ಹಾರ್ದಿಕ್ ಪಾಂಡ್ಯಗೆ ಕೇವಲ ಒಂದು ಓವರ್ ನೀಡಿದ್ದು ಅಚ್ಚರಿ

"ರಿಷಭ್ ಪಂತ್ ಬೌಲರ್‌ಗಳನ್ನು ಕಳಪೆಯಾಗಿ ಉಪಯೋಗಿಸಿದರು, ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್‌ರಿಗೆ ಪವರ್-ಪ್ಲೇನಲ್ಲಿ ಬೌಲ್ ಕೊಡಬೇಕಿತ್ತು. ಅಕ್ಸರ್ ಪಟೇಲ್ ಉತ್ತಮ ಆಯ್ಕೆಯಾಗಿತ್ತು. ವೇಗದ ಬೌಲರ್ ಓವರ್‌ಗಳ ಸರದಿಯಲ್ಲಿ ಹಾರ್ದಿಕ್ ಪಾಂಡ್ಯಗೆ ಕೇವಲ ಒಂದು ಓವರ್ ನೀಡಿದ್ದು ಅಚ್ಚರಿಯನ್ನುಂಟು ಮಾಡಿತು. ಕ್ರೀಸ್‌ನಲ್ಲಿ ಡೇವಿಡ್ ಮಿಲ್ಲರ್ ಅದ್ಭುತ ಫಾರ್ಮ್ ಮುಂದುವರಿಯಿತು. ಏಕೆಂದರೆ ಅವರು ಐಪಿಎಲ್‌ನಲ್ಲಿ ಗುಜರಾತ್ ಟೈಟನ್ಸ್ ತಂಡದ ಮೊದಲ ಟ್ರೋಫಿ ಗೆಲ್ಲಲು ಸಹಾಯ ಮಾಡಿದ್ದರು," ಎಂದು ದಾನೀಶ್ ಕನೇರಿಯಾ ಕೂ ಅಪ್ಲಿಕೇಶನ್‌ನಲ್ಲಿ ಹೇಳಿದ್ದಾರೆ.

ರಿಷಭ್ ಪಂತ್‌ಗೆ ಭಾರತವನ್ನು ಮುನ್ನಡೆಸುವ ಅವಕಾಶ

ರಿಷಭ್ ಪಂತ್‌ಗೆ ಭಾರತವನ್ನು ಮುನ್ನಡೆಸುವ ಅವಕಾಶ

ಟಿ20 ಸರಣಿಯಲ್ಲಿ ಕೆಎಲ್ ರಾಹುಲ್ ಹೊರಗುಳಿದ ನಂತರ ರಿಷಭ್ ಪಂತ್‌ಗೆ ಭಾರತವನ್ನು ಮುನ್ನಡೆಸುವ ಅವಕಾಶ ಸಿಕ್ಕಿತು. ಆದರೂ, ಈ ವಿಕೆಟ್‌ಕೀಪರ್- ಬ್ಯಾಟರ್ ತಮ್ಮ ನಾಯಕತ್ವದಿಂದ ವಿಮರ್ಶಕರನ್ನು ಮೆಚ್ಚಿಸಲು ವಿಫಲರಾದರು.

212 ರನ್‌ಗಳನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ನಿಯಮಿತ ಅಂತರದಲ್ಲಿ ವಿಕೆಟ್‌ಗಳನ್ನು ಕಳೆದುಕೊಂಡಿತು ಮತ್ತು ಮಿಲ್ಲರ್ ಮತ್ತು ವ್ಯಾನ್ ಡೆರ್ ಡಸ್ಸೆನ್ ರಕ್ಷಣೆಗೆ ಬಂದಾಗ 81/3 ಆಗಿತ್ತು. ಇಬ್ಬರು ಬ್ಯಾಟ್ಸ್‌ಮನ್‌ಗಳು ಅಂತಿಮವಾಗಿ ನಾಲ್ಕನೇ ವಿಕೆಟ್‌ಗೆ 131 ರನ್‌ಗಳ ಅಜೇಯ ಜೊತೆಯಾಟವನ್ನು ನಡೆಸಿದರು ಮತ್ತು ಇಬ್ಬರೂ ವೈಯಕ್ತಿಕ ಅರ್ಧಶತಕಗಳನ್ನು ಗಳಿಸಿದರು. ಐದು ಪಂದ್ಯಗಳ ಸರಣಿಯಲ್ಲಿ ದಕ್ಷಿಣ ಆಫ್ರಿಕಾ 1-0 ಮುನ್ನಡೆ ಸಾಧಿಸಿದೆ.

ಒಂದೇ ಫ್ಲೈಟ್ ನಲ್ಲಿ ಬಂದ ದಕ್ಷಿಣ ಆಫ್ರಿಕಾ ಮತ್ತು ಟೀಮ್ ಇಂಡಿಯಾ ಆಟಗಾರರು ಏನೇನ್ ಮಾಡಿದ್ರು | *Cricket
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೊನೆಯ ಪಂದ್ಯ

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೊನೆಯ ಪಂದ್ಯ

ಜೂನ್ 19ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಮೊದಲ ಟಿ20 ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದಿದ್ದರೆ, ಎರಡನೇ ಪಂದ್ಯ ಒಡಿಶಾದ ಕಟಕ್‌ನ ಬಾರಾಬತಿ ಸ್ಟೇಡಿಯಂನಲ್ಲಿ ನಡೆಯಲಿದೆ. ಮೂರನೇ ಪಂದ್ಯ ವಿಶಾಖಪಟ್ಟಣದಲ್ಲಿ ನಡೆಯಲಿದ್ದು, ನಾಲ್ಕನೇ ಪಂದ್ಯ ರಾಜ್‌ಕೋಟ್‌ನಲ್ಲಿ ಮತ್ತು ಐದನೇ ಪಂದ್ಯ ಜೂನ್ 19ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿಗದಿಯಾಗಿದೆ.

Story first published: Saturday, June 11, 2022, 14:08 [IST]
Other articles published on Jun 11, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+