
ಶಿಖರ್ ಧವನ್ ಭಾರತ ತಂಡವನ್ನು ಮುನ್ನಡೆಸುವ ಸಾಧ್ಯತೆ
ಐಸಿಸಿ ಟಿ20 ವಿಶ್ವಕಪ್ಗೆ ಹೆಚ್ಚಿನ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇರುವುದರಿಂದ ಮೂರು ಪಂದ್ಯಗಳ ಏಕದಿನ ಸರಣಿಗೆ ಸಂಜು ಸ್ಯಾಮ್ಸನ್ರನ್ನು ಭಾರತ ತಂಡದ ಉಪನಾಯಕರನ್ನಾಗಿ ನೇಮಿಸಬಹುದು ಎಂದು ಬಿಸಿಸಿಐ ಮೂಲಗಳು ಎಎನ್ಐಗೆ ತಿಳಿಸಿವೆ. ಶಿಖರ್ ಧವನ್ ಭಾರತ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ.
ಕೇರಳ ಮೂಲದ 27 ವರ್ಷದ ಸಂಜು ಸ್ಯಾಮ್ಸನ್, ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ 3-0 ಅಂತರದಲ್ಲಿ ಗೆದ್ದ ತಂಡದಲ್ಲಿದ್ದರು. ಅವರು ಇಲ್ಲಿಯವರೆಗೆ ಏಳು ಏಕದಿನ ಮತ್ತು 16 ಟಿ20 ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ.

ನ್ಯೂಜಿಲೆಂಡ್ ಎ ವಿರುದ್ಧ ಭಾರತ ಎ ತಂಡದ ನಾಯಕ
ಸಂಜು ಸ್ಯಾಮ್ಸನ್ ಪ್ರಸ್ತುತ ನ್ಯೂಜಿಲೆಂಡ್ ಎ ವಿರುದ್ಧ ಸ್ವದೇಶದಲ್ಲಿ ಭಾರತ ಎ ತಂಡದ ನಾಯಕರಾಗಿದ್ದಾರೆ. ಬ್ಯಾಟರ್ ರಜತ್ ಪಾಟಿದಾರ್ ಅವರು ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಪಂದ್ಯಕ್ಕೆ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಮೊದಲ ಟಿ20 ಪಂದ್ಯ ಸೆಪ್ಟೆಂಬರ್ 28ರಂದು ತಿರುವನಂತಪುರಂನಲ್ಲಿ ನಡೆಯಲಿದೆ. ಎರಡನೇ ಟಿ20 ಅಕ್ಟೋಬರ್ 2ರಂದು ಗುವಾಹಟಿಯಲ್ಲಿ ನಡೆಯಲಿದೆ, ನಂತರ ಕೊನೆಯ ಟಿ20 ಪಂದ್ಯ ಇಂದೋರ್ನಲ್ಲಿ ಅಕ್ಟೋಬರ್ 4ರಂದು ನಡೆಯಲಿದೆ.
ಇನ್ನು ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಪಂದ್ಯ ಲಕ್ನೋದಲ್ಲಿ ಅಕ್ಟೋಬರ್ 6ರಂದು ನಡೆಯಲಿದೆ. ರಾಂಚಿ ಮತ್ತು ದೆಹಲಿಯಲ್ಲಿ ಕ್ರಮವಾಗಿ ಎರಡನೇ ಮತ್ತು ಮೂರನೇ ಏಕದಿನ ಪಂದ್ಯಗಳು ಅಕ್ಟೋಬರ್ 9 ಮತ್ತು 11ರಂದು ನಡೆಯಲಿವೆ.

ಟಿ20 ಸರಣಿಗಾಗಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಪೂರ್ಣ ತಂಡಗಳು
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಶ್ರೇಯಸ್ ಅಯ್ಯರ್, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅರ್ಶ್ದೀಪ್ ಸಿಂಗ್, ಶಹಬಾಜ್ ಅಹ್ಮದ್, ಹರ್ಷಲ್ ಪಟೇಲ್, ದೀಪಕ್ ಚಹಾರ್ ಮತ್ತು ಜಸ್ಪ್ರೀತ್ ಬುಮ್ರಾ.
ದಕ್ಷಿಣ ಆಫ್ರಿಕಾ ಟಿ20 ತಂಡ: ಟೆಂಬಾ ಬಾವುಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್ಗಿಡಿ, ಆನ್ರಿಚ್ ನಾರ್ಟ್ಜೆ, ವೇಯ್ನ್ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕಾಗಿಲೆವ್ ರೈಬಾ, ಕಾಗಿಲೆ, ತಬ್ರೈಜ್ ಶಮ್ಸಿ ಮತ್ತು ಟ್ರಿಸ್ಟಾನ್ ಸ್ಟಬ್ಸ್.


Click it and Unblock the Notifications
