
ಕಣಕ್ಕಿಳಿಯಲಿರುವ ಭಾರತದ ಸಂಭಾವ್ಯ ಆಡುವ ಬಳಗ
ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ ( ವಿಕೆಟ್ ಕೀಪರ್, ನಾಯಕ), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್

ಇಲ್ಲ ಯಾವುದೇ ಬದಲಾವಣೆ
ಆಟಗಾರರು ಕಳಪೆ ಪ್ರದರ್ಶನ ನೀಡಿದರೂ ಸಹ ತಂಡದ ಕೋಚ್ ರಾಹುಲ್ ದ್ರಾವಿಡ್ ಅದೇ ಆಟಗಾರರಿಗೆ ಪದೇಪದೇ ಅವಕಾಶವನ್ನು ನೀಡಿ ಕಳಪೆ ಪ್ರದರ್ಶನ ನೀಡಿದ್ದ ಆಟಗಾರರು ನಂತರದ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿ ಕಮ್ ಬ್ಯಾಕ್ ಮಾಡಿದ್ದಾರೆ. ಹೀಗಾಗಿ ರಾಹುಲ್ ದ್ರಾವಿಡ್ ಅಂತಿಮ ಟಿ ಟ್ವೆಂಟಿ ಪಂದ್ಯಕ್ಕಾಗಿ ತಂಡದಲ್ಲಿ ಬದಲಾವಣೆ ತರುವ ಕೆಲಸಕ್ಕೆ ಕೈಹಾಕುವುದಿಲ್ಲ ಎನ್ನಬಹುದು. ಅದರಲ್ಲಿಯೂ ನಾಲ್ಕನೇ ಪಂದ್ಯ ಮುಕ್ತಾಯದ ನಂತರ ತಂಡದ ಆಟಗಾರ ಅವೇಶ್ ಖಾನ್ ಮಾತನಾಡಿ ತಂಡದ ಆಡುವ ಬಳಗದಲ್ಲಿ ಯಾವುದೇ ಪಂದ್ಯದಲ್ಲಿಯೂ ಬದಲಾವಣೆಗಳಾಗಿಲ್ಲ, ಹೀಗಾಗಿಯೇ ಆಟಗಾರರಿಗೆ ಹೆಚ್ಚು ಅವಕಾಶ ಲಭಿಸಿ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಯಿತು, ಈ ಅವಕಾಶ ನೀಡಿದ ರಾಹುಲ್ ದ್ರಾವಿಡ್ ಅವರಿಗೆ ಧನ್ಯವಾದಗಳು ಎಂದು ಹೇಳಿದ್ದರು. ಹೀಗಾಗಿ ಮಹತ್ವದ ಪಂದ್ಯವಾಗಿರುವ ಇಂದು ಆಡುವ ಬಳಗದಲ್ಲಿ ಬದಲಾವಣೆ ಖಂಡಿತ ಇರುವುದಿಲ್ಲ ಎನ್ನಬಹುದು.

ಈ ಆಟಗಾರರು ಬೆಂಚ್ ಕಾಯುವುದು ಖಚಿತ
ಇನ್ನು ಈ ಮಹತ್ವದ ಪಂದ್ಯದಲ್ಲಿ ಟೀಮ್ ಇಂಡಿಯಾ ಆಡುವ ಬಳಗದಲ್ಲಿ ಯಾವುದೇ ಬದಲಾವಣೆಗಳು ಆಗದೇ ಇರಲಿದ್ದು, ಇದೇ ಮೊದಲ ಬಾರಿಗೆ ಅಂತರರಾಷ್ಟ್ರೀಯ ಕ್ರಿಕೆಟ್ ಆಡಲು ಆಯ್ಕೆಯಾಗಿದ್ದ ಅರ್ಷದೀಪ್ ಸಿಂಗ್ ಮತ್ತು ಉಮ್ರಾನ್ ಮಲಿಕ್ ಈ ಪಂದ್ಯದಲ್ಲಿಯೂ ಅವಕಾಶ ಸಿಗದೇ ಬೆಂಚ್ ಕಾಯಬೇಕಾದ ಪರಿಸ್ಥಿತಿ ಎದುರಾಗುವುದು ಖಚಿತ ಎನ್ನಲಾಗುತ್ತಿದೆ.


Click it and Unblock the Notifications












