For Quick Alerts
ALLOW NOTIFICATIONS  
For Daily Alerts
 

IND vs SA: ಈ 3 ಬದಲಾವಣೆ ಮಾಡಿಕೊಳ್ಳದಿದ್ದರೆ ದ್ವಿತೀಯ ಟಿ20 ಪಂದ್ಯದಲ್ಲೂ ಭಾರತಕ್ಕೆ ಸೋಲು ಖಚಿತ!

IND vs SA: Team India should make these 3 changes to win second T20 against South Africa

ಭಾರತ ಪ್ರವಾಸವನ್ನು ಕೈಗೊಂಡಿರುವ ದಕ್ಷಿಣ ಆಫ್ರಿಕಾ 5 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಟೀಮ್ ಇಂಡಿಯಾ ವಿರುದ್ಧ ಸೆಣಸಾಟವನ್ನು ನಡೆಸುತ್ತಿದೆ. ಈ ಸರಣಿಯ ಮೊದಲನೇ ಪಂದ್ಯ ಕಳೆದ ಗುರುವಾರದಂದು ( ಜೂನ್ 9 ) ದೆಹಲಿಯ ಅರುಣ್ ಜೇಟ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 211 ರನ್ ಕಲೆ ಹಾಕಿತಾದರೂ ಗೆಲುವು ಸಾಧಿಸುವಲ್ಲಿ ವಿಫಲವಾಯಿತು.

ಹೌದು, ಟೀಂ ಇಂಡಿಯಾ ನೀಡಿದ್ದ 212 ರನ್‌ಗಳ ಗುರಿಯನ್ನು 19.1 ಓವರ್‌ಗಳಲ್ಲಿ ಕೇವಲ 3 ವಿಕೆಟ್ ನಷ್ಟಕ್ಕೆ ಬೆನ್ನತ್ತಿದ ದಕ್ಷಿಣ ಆಫ್ರಿಕಾ 7 ವಿಕೆಟ್‍ಗಳ ಭರ್ಜರಿ ಜಯ ಸಾಧಿಸಿ ಸರಣಿಯಲ್ಲಿ 1-0 ಅಂತರದ ಮುನ್ನಡೆಯನ್ನು ಕಾಯ್ದುಕೊಂಡಿದೆ. ಹೀಗೆ ಬೃಹತ್ ರನ್ ತಲೆ ಹಾಕಿಯೂ ಸೋತಿರುವ ಟೀಮ್ ಇಂಡಿಯಾ ಭಾನುವಾರ ನಡೆಯಲಿರುವ ದ್ವಿತೀಯ ಟಿ ಟ್ವೆಂಟಿ ಪಂದ್ಯದಲ್ಲಿ ಹರಿಣಗಳಿಗೆ ಸೋಲುಣಿಸಿ ಜಯದ ಹಾದಿಗೆ ಮರಳಿ ಸರಣಿಯಲ್ಲಿ ಸಮಬಲ ಸಾಧಿಸುವತ್ತ ಚಿತ್ತ ನೆಟ್ಟಿದೆ.

‌ಅದರೆ, ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಗೆಲ್ಲಬೇಕೆಂದರೆ ತಂಡದಲ್ಲಿ ಕೆಲ ಬದಲಾವಣೆಗಳನ್ನು ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದ್ದು, ಆಗಿದ್ದಾಗ ಮಾತ್ರ ಪ್ರಥಮ ಪಂದ್ಯದಲ್ಲಿ ಸಂಭವಿಸಿದ್ದ ತಪ್ಪುಗಳನ್ನು ತಿದ್ದಿಕೊಳ್ಳಲು ಸಾಧ್ಯ. ಹೀಗೆ ಭಾರತ ತನ್ನ ತಂಡದಲ್ಲಿ ಮಾಡಿಕೊಳ್ಳಲೇಬೇಕಾದ 3 ಬದಲಾವಣೆಗಳ ವಿವರ ಮುಂದೆ ಇದೆ ಓದಿ.

1. ಚಾಹಲ್ ತನ್ನ ಪಾಲಿನ ಸಂಪೂರ್ಣ ಓವರ್ ಬೌಲಿಂಗ್ ಮಾಡಬೇಕು

1. ಚಾಹಲ್ ತನ್ನ ಪಾಲಿನ ಸಂಪೂರ್ಣ ಓವರ್ ಬೌಲಿಂಗ್ ಮಾಡಬೇಕು

ಯುಜುವೇಂದ್ರ ಚಾಹಲ್ ಅವರಿಗೆ ತನ್ನ ಪಾಲಿನ ಸಂಪೂರ್ಣ ಓವರ್ ಬೌಲಿಂಗ್ ಮಾಡುವ ಅವಕಾಶವನ್ನು ನೀಡಬೇಕಾದ ಅಗತ್ಯವಿದೆ. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪ್ರಥಮ ಟಿ ಟ್ವೆಂಟಿ ಪಂದ್ಯದಲ್ಲಿ ಯುಜುವೇಂದ್ರ ಚಾಹಲ್ ಕೇವಲ 2.1 ಓವರ್ ಬೌಲಿಂಗ್ ಮಾಡುವ ಅವಕಾಶ ಪಡೆದರು ಹಾಗೂ 26 ರನ್ ನೀಡಿದ್ದರು. ಉತ್ತಮ ಬೌಲಿಂಗ್ ಮಾಡಿ ಕಷ್ಟದ ಸಂದರ್ಭದಲ್ಲಿ ವಿಕೆಟ್ ಕಬಳಿಸುವಂಥ ಸಾಮರ್ಥ್ಯವಿರುವ ಯುಜುವೇಂದ್ರ ಚಾಹಲ್ ಅವರಿಗೆ 4 ಓವರ್ ಬೌಲಿಂಗ್ ಮಾಡುವ ಅವಕಾಶ ನೀಡಬೇಕಾಗಿದೆ. ಅದರಲ್ಲಿಯೂ ಯುಜುವೇಂದ್ರ ಚಾಹಲ್ ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರನಾಗಿ ಹೊರಹೊಮ್ಮಿದ್ದು, ಈ ಬದಲಾವಣೆಯನ್ನು ತಂಡದಲ್ಲಿ ಮಾಡಿಕೊಳ್ಳಲೇಬೇಕಾಗಿದೆ.

2. ಅಕ್ಷರ್ ಪಟೇಲ್ ಬದಲು ರವಿ ಬಿಷ್ಣೋಯಿಗೆ ಅವಕಾಶ

2. ಅಕ್ಷರ್ ಪಟೇಲ್ ಬದಲು ರವಿ ಬಿಷ್ಣೋಯಿಗೆ ಅವಕಾಶ

ದಕ್ಷಿಣ ಆಫ್ರಿಕಾ ವಿರುದ್ಧದ ಪ್ರಥಮ ಟಿ ಟ್ವೆಂಟಿ ಪಂದ್ಯದಲ್ಲಿ ತನ್ನ ಪಾಲಿನ ಎಲ್ಲಾ 4 ಓವರ್ ಬೌಲಿಂಗ್ ಮಾಡಿದ ಅಕ್ಷರ್ ಪಟೇಲ್ 1 ವಿಕೆಟ್ ಪಡೆದು 40 ರನ್ ನೀಡಿ ದುಬಾರಿಯಾದರು. ಹೀಗೆ ಡಿಕಾಕ್ ವಿಕೆಟ್ ಪಡೆದದ್ದನ್ನು ಬಿಟ್ಟರೆ ಅಕ್ಷರ್ ಪಟೇಲ್ ಪಂದ್ಯದಲ್ಲಿ ಅಕ್ಷರಶಃ ಮಂಕಾದರು. ಪಟೇಲ್ ಎಸೆತಕ್ಕೆ ಮಿಲ್ಲರ್ ದೊಡ್ಡ ದೊಡ್ಡ ಹೊಡೆತಗಳನ್ನು ಸಲೀಸಾಗಿ ಬಾರಿಸಿದರು. ಅತ್ತ ಶ್ರೀಲಂಕಾ ಪ್ರವಾಸದಲ್ಲಿ ಟೀಮ್ ಇಂಡಿಯಾ ಪರ ಉತ್ತಮ ಪ್ರದರ್ಶನ ನೀಡಿದ್ದ ರವಿ ಬಿಷ್ಣೋಯಿಗೆ ದುಬಾರಿಯಾಗಿರುವ ಅಕ್ಷರ್ ಪಟೇಲ್ ಬದಲು ಅವಕಾಶ ನೀಡುವುದು ಉತ್ತಮ ಆಯ್ಕೆಗಳಲ್ಲೊಂದು ಎನ್ನಬಹುದು. ಇನ್ನು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿಯೂ ಗಮನಾರ್ಹ ಪ್ರದರ್ಶನ ನೀಡಿರುವ ರವಿ ಬಿಷ್ಣೋಯಿಗೆ ದ್ವಿತೀಯ ಟಿ ಟ್ವೆಂಟಿ ಪಂದ್ಯದಲ್ಲಿ ಅವಕಾಶ ನೀಡಿ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಬೇಕಿದೆ.

ಈ ಸ್ಟಾರ್ ಪ್ಲೇಯರ್ಸ್ ಗೆ ಐಪಿಎಲ್ ಆಡೋಕೆ ಮನಸ್ಸು ಇಲ್ವಂತೆ ! | Oneindia Kannada
3. ಉಮ್ರಾನ್ ಮಲಿಕ್‌ಗೆ ಅವಕಾಶ

3. ಉಮ್ರಾನ್ ಮಲಿಕ್‌ಗೆ ಅವಕಾಶ

ತನ್ನ ವೇಗದ ಎಸೆತಗಳಿಂದಲೇ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ಉಮ್ರಾನ್ ಮಲಿಕ್ ಅವರಿಗೆ ದಕ್ಷಿಣ ಆಫ್ರಿಕಾ ವಿರುದ್ಧದ ದ್ವಿತೀಯ ಟಿ ಟ್ವೆಂಟಿ ಪಂದ್ಯದಲ್ಲಿ ಅವಕಾಶ ನೀಡಬೇಕಾದ ಅಗತ್ಯವಿದೆ. ಪ್ರಥಮ ಪಂದ್ಯದಲ್ಲಿ ಅವೇಶ್ ಖಾನ್ ಹೊರತುಪಡಿಸಿ ಉಳಿದ ವೇಗಿಗಳಾದ ಭುವನೇಶ್ವರ್ ಕುಮಾರ್ ಮತ್ತು ಹರ್ಷಲ್ ಪಟೇಲ್ ಎದುರಾಳಿಗಳ ಮೇಲೆ ನಿಯಂತ್ರಣ ಸಾಧಿಸುವಂಥ ಎಸೆತಗಳನ್ನು ಹಾಕಲಿಲ್ಲ, ಬದಲಾಗಿ ಹೆಚ್ಚು ಬೌಂಡರಿಗಳನ್ನು ಬಿಟ್ಟುಕೊಟ್ಟು ದುಬಾರಿಯಾದರು. ಹೀಗಾಗಿ ತಂಡಕ್ಕೆ ವೇಗದ ಎಸೆತಗಳನ್ನು ಹಾಕಿ ಎದುರಾಳಿಗಳ ಮೇಲೆ ಒತ್ತಡ ಹೇರಬಲ್ಲಂತಹ ಬೌಲರ್ ಅಗತ್ಯವಿದ್ದು, ಉಮ್ರಾನ್ ಮಲಿಕ್‌ಗೆ ಅವಕಾಶ ನೀಡುವತ್ತ ಟೀಮ್ ಇಂಡಿಯಾ ಯೋಚಿಸಬೇಕಿದೆ.

Story first published: Saturday, June 11, 2022, 16:41 [IST]
Other articles published on Jun 11, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+