
ಆರು ಬ್ಯಾಟ್ಸ್ಮೆನ್
ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಟೀಮ್ ಇಂಡಿಯಾದಲ್ಲಿ ಆರು ಬ್ಯಾಟ್ಸ್ಮನ್ ಇರಬೇಕು ಎಂದು ಆಕಾಶ್ ಚೋಪ್ರ ಅಭಿಪ್ರಾಯಪಟ್ಟಿದ್ದಾರೆ. ಅದರಲ್ಲಿಯೂ ಮೂರನೇ ಕ್ರಮಾಂಕದಲ್ಲಿ ಶ್ರೇಯಸ್ ಐಯ್ಯರ್ ಆಡಬೇಕು ಎಂದು ಆಕಾಶ್ ಚೋಪ್ರಾ ತಿಳಿಸಿದ್ದಾರೆ. ಆರಂಭಿಕರಾಗಿ ರೋಹಿತ್ ಶರ್ಮಾ ಮತ್ತು ಮಯಾಂಕ್ ಅಗರ್ವಾಲ್ ಆಡಬೇಕು ಎಂದಿರುವ ಆಕಾಶ್ ಚೋಪ್ರಾ ಮೂರನೇ ಕ್ರಮಾಂಕದಲ್ಲಿ ಹನುಮ ವಿಹಾರಿ ಬದಲು ಶ್ರೇಯಸ್ ಐಯ್ಯರ್ ಕಣಕ್ಕಿಳಿಯಬೇಕು ಎಂದಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿ, ಐದನೇ ಕ್ರಮಾಂಕದಲ್ಲಿ ಹನುಮ ವಿಹಾರಿ ಹಾಗೂ ಆರನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ರಿಷಭ್ ಪಂತ್ ಆಡಲಿ ಎಂದು ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.

ಇಬ್ಬರು ಸ್ಪಿನ್ನರ್ ಅಗತ್ಯತೆ ಇದೆ
ಇನ್ನು ಬೌಲಿಂಗ್ ವಿಭಾಗದ ಕುರಿತು ಮಾತನಾಡಿರುವ ಆಕಾಶ್ ಚೋಪ್ರಾ ಇಬ್ಬರು ಸ್ಪಿನ್ ಬೌಲರ್ಸ್ ಅಗತ್ಯತೆ ತಂಡಕ್ಕಿದೆ ಎಂದಿದ್ದಾರೆ. ಚಳಿಗಾಲದ ಸಮಯವಾದ್ದರಿಂದ ಮೊಹಾಲಿ ಪಿಚ್ ಪಂದ್ಯದಲ್ಲಿ ಇಬ್ಬರು ಸ್ಪಿನ್ನರ್ಸ್ ಇರಬೇಕು ಎಂದು ಆಕಾಶ್ ಚೋಪ್ರಾ ಹೇಳಿದ್ದಾರೆ. ರವೀಂದ್ರ ಜಡೇಜಾ ಹೆಸರನ್ನು ಮೊದಲು ತೆಗೆದುಕೊಂಡಿರುವ ಆಕಾಶ್ ಚೋಪ್ರಾ ರವಿಚಂದ್ರನ್ ಅಶ್ವಿನ್ ಅವರನ್ನು ಎರಡನೇ ಸ್ಪಿನ್ ಬೌಲರ್ ಆಗಿ ಆರಿಸಿದ್ದಾರೆ. ಒಂದುವೇಳೆ ಅಶ್ವಿನ್ ಪಂದ್ಯಕ್ಕೆ ಅಲಭ್ಯರಾದರೆ ಜಯಂತ್ ಯಾದವ್ ಕಣಕ್ಕಿಳಿಯಬೇಕು ಎಂದು ಆಕಾಶ್ ಚೋಪ್ರಾ ತಿಳಿಸಿದ್ದಾರೆ. ಇನ್ನು ಮೂವರು ವೇಗಿಗಳಾದ ಮೊಹಮ್ಮದ್ ಶಮಿ, ಜಸ್ಪ್ರಿತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಕಣಕ್ಕಿಳಿಯಬೇಕು ಎಂದು ಆಕಾಶ್ ಚೋಪ್ರಾ ತಿಳಿಸಿದ್ದಾರೆ.

ಆಕಾಶ್ ಚೋಪ್ರಾ ಪ್ರಕಟಿಸಿರುವ ತಂಡ
ಶ್ರೀಲಂಕಾ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯಕ್ಕೆ ಮಾಜಿ ಕ್ರಿಕಟಿಗ ಆಕಾಶ್ ಚೋಪ್ರಾ ಪ್ರಕಟಿಸಿರುವ ಟೀಮ್ ಇಂಡಿಯಾ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಮಯಾಂಕ್ ಅಗರ್ವಾಲ್, ಶ್ರೇಯಸ್ ಅಯ್ಯರ್, ವಿರಾಟ್ ಕೊಹ್ಲಿ, ಹನುಮ ವಿಹಾರಿ, ರಿಷಬ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್ / ಜಯಂತ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.


Click it and Unblock the Notifications
