For Quick Alerts
ALLOW NOTIFICATIONS  
For Daily Alerts
 

IND vs SL: ಈ ಮಾಜಿ ಆಟಗಾರನಿಂದಾಗಿ ನನ್ನ ಜೀವನದಲ್ಲಿ ದೊಡ್ಡ ಬದಲಾವಣೆಯಾಯಿತು; ಹಾರ್ದಿಕ್ ಪಾಂಡ್ಯ

IND vs SL: Gujarat Titans Coach Ashish Nehra Made a Big Difference In My life Says Hardik Pandya

ರಾಜ್‌ಕೋಟ್‌ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ಶನಿವಾರ ನಡೆದ ಶ್ರೀಲಂಕಾ ವಿರುದ್ಧದ ಮೂರನೇ ಮತ್ತು ಅಂತಿಮ ಟಿ20 ಪಂದ್ಯದಲ್ಲಿ ಭಾರತ ತಂಡ 91 ರನ್‌ಗಳ ಪ್ರಚಂಡ ಗೆಲುವು ಸಾಧಿಸಿತು. ಇದೇ ವೇಳೆ ಮೂರು ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಲ್ಲಿ ಭಾರತ ಗೆದ್ದುಕೊಂಡಿತು.

ಭಾರತ ಟಿ20 ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರ ಮುಕುಟಕ್ಕೆ ಮತ್ತೊಂದು ಟಿ20 ಸರಣಿ ಜಯ ಒಲಿದುಬಂತು. ಮೂರನೇ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಸೇರಿದಂತೆ ಇಡೀ ತಂಡ ಸಮಗ್ರ ಪ್ರದರ್ಶನ ನೀಡಿ ತವರಿನಲ್ಲಿ ವರ್ಷದ ಮೊದಲ ಸರಣಿಯನ್ನು ವಶಪಡಿಸಿಕೊಂಡಿತು.

IND vs SL: ಟಿ20 ತಂಡದಲ್ಲಿ ರವೀಂದ್ರ ಜಡೇಜಾ ಬದಲಿಗೆ ಈತನೇ ಖಾಯಂ ಆಟಗಾರ?; ಪಾಂಡ್ಯ ಸುಳಿವು

ಭಾರತದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಕಳೆದ ವರ್ಷ ತಮ್ಮ ಮೊದಲ ಪ್ರಯತ್ನದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಐಪಿಎಲ್ ಟ್ರೋಫಿ ಗೆಲುವಿನತ್ತ ಮುನ್ನಡೆಸಿದ ನಂತರ ಹಿಂತಿರುಗಿ ನೋಡಲಿಲ್ಲ. ಅವರು ಮುನ್ನಡೆಸಿದ ಸರಣಿಗಳಲ್ಲಿ ಭಾರತ ಯಶಸ್ಸು ಸಾಧಿಸಿದೆ.

ಆಶಿಶ್ ನೆಹ್ರಾ ಅವರಿಗೆ ಮನ್ನಣೆ ನೀಡಿದ ಹಾರ್ದಿಕ್ ಪಾಂಡ್ಯ

ಆಶಿಶ್ ನೆಹ್ರಾ ಅವರಿಗೆ ಮನ್ನಣೆ ನೀಡಿದ ಹಾರ್ದಿಕ್ ಪಾಂಡ್ಯ

ಇದೀಗ ಭಾರತೀಯ ಟಿ20 ತಂಡದ ಹೊಸ ನಾಯಕ ಹಾರ್ದಿಕ್ ಪಾಂಡ್ಯ ತಮ್ಮ ಗುಜರಾತ್ ಟೈಟನ್ಸ್ ಫ್ರಾಂಚೈಸ್ ಮುಖ್ಯ ಕೋಚ್ ಆಶಿಶ್ ನೆಹ್ರಾ ಅವರಿಗೆ ಮನ್ನಣೆ ನೀಡಿದ್ದು, ತಮ್ಮ ನಾಯಕತ್ವದಲ್ಲಿ ದೊಡ್ಡ ವ್ಯತ್ಯಾಸ ಮಾಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು.

ಗಾಯದಿಂದಾಗಿ ಸುದೀರ್ಘ ಸಮಯ ತಂಡದಿಂದ ಹೊರಗಿದ್ದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯರನ್ನು ನೇರವಾಗಿ ಮತ್ತು ಮೊದಲ ಬಾರಿಗೆ ದಿಟ್ಟ ನಡೆಯಲ್ಲಿ ಗುಜರಾತ್ ಟೈಟನ್ಸ್ ತಂಡಕ್ಕೆ ನಾಯಕನನ್ನಾಗಿ ನೇಮಿಸಲಾಯಿತು. ಆದರೆ ಆಸ್ಟ್ರೇಲಿಯಾ ವಿರುದ್ಧದ ಪ್ರವಾಸದ ಪಂದ್ಯದಲ್ಲಿ ಒಮ್ಮೆ ಮಾತ್ರ ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಯಶಸ್ವಿಯಾಗಿ ಮುನ್ನಡೆಸಿದ್ದರು.

ಆಶಿಶ್ ನೆಹ್ರಾ ನನ್ನ ಜೀವನದಲ್ಲಿ ದೊಡ್ಡ ಬದಲಾವಣೆಯನ್ನು ತಂದರು

ಆಶಿಶ್ ನೆಹ್ರಾ ನನ್ನ ಜೀವನದಲ್ಲಿ ದೊಡ್ಡ ಬದಲಾವಣೆಯನ್ನು ತಂದರು

"ಗುಜರಾತ್ ಟೈಟನ್ಸ್ ತಂಡದ ದೃಷ್ಟಿಕೋನದಿಂದ ನಾನು ಯಾವ ರೀತಿಯ ಕೋಚ್‌ನೊಂದಿಗೆ ಕೆಲಸ ಮಾಡಿದ್ದೇನೆ ಎಂಬುದು ಬಹಳ ಮುಖ್ಯವಾಗಿದೆ. ನಮ್ಮ ಮನಸ್ಥಿತಿಯಿಂದಾಗಿ ಮಾಜಿ ವೇಗಿ ಆಶಿಶ್ ನೆಹ್ರಾ ನನ್ನ ಜೀವನದಲ್ಲಿ ದೊಡ್ಡ ಬದಲಾವಣೆಯನ್ನು ತಂದರು. ನಾವು ಎರಡು ವಿಭಿನ್ನ ವ್ಯಕ್ತಿತ್ವಗಳಿರಬಹುದು, ಆದರೆ ನಾವು ಒಂದೇ ರೀತಿಯ ಕ್ರಿಕೆಟ್ ಆಲೋಚನೆಗಳನ್ನು ಹೊಂದಿದ್ದೇವೆ," ಎಂದು ಶನಿವಾರ ಶ್ರೀಲಂಕಾ ವಿರುದ್ಧ ಭಾರತ 2-1 ಅಂತರದಿಂದ ಸರಣಿ ಗೆದ್ದುಕೊಂಡ ನಂತರ ಹಾರ್ದಿಕ್ ಪಾಂಡ್ಯ ತಿಳಿಸಿದರು.

"ನಾನು ಆಶಿಶ್ ನೆಹ್ರಾ ಅವರೊಂದಿಗೆ ಇದ್ದ ಕಾರಣ, ಇದು ನನ್ನ ನಾಯಕತ್ವಕ್ಕೆ ಮೌಲ್ಯಗಳು ಸೇರಿಕೊಂಡವು. ಇದು ನನಗೆ ತಿಳಿದಿರುವುದನ್ನು ನಿಖರವಾಗಿ ಪಡೆಯಲು ನನಗೆ ಸಹಾಯ ಮಾಡಿತು. ಟಿ20 ಆಟದ ಅರಿವು ನನಗೆ ಯಾವಾಗಲೂ ತಿಳಿದಿತ್ತು. ನಾನು ಈಗಾಗಲೇ ತಿಳಿದಿದ್ದನ್ನು ಮತ್ತೆ ತಿಳಿದುಕೊಳ್ಳುವುದು ಖಂಡಿತವಾಗಿಯೂ ನನಗೆ ಸಹಾಯ ಮಾಡಿದೆ," ಎಂದು ಭಾರತ ಟಿ20 ತಂಡದ ನಾಯಕ ಹಾರ್ದಿಕ್ ಪಾಂಡ್ಯ ಹೇಳಿದರು.

ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್ ಗೆಲ್ಲಲು ವಿಫಲ

ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್ ಗೆಲ್ಲಲು ವಿಫಲ

ಶ್ರೀಲಂಕಾ ವಿರುದ್ಧದ ಸ್ವದೇಶಿ ಸರಣಿಯ ಮೊದಲು, ರೋಹಿತ್ ಶರ್ಮಾ ನಾಯಕತ್ವದ ತಂಡವು ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್ ಗೆಲ್ಲಲು ವಿಫಲವಾಯಿತು ಮತ್ತು ಅದಕ್ಕೂ ಮುನ್ನ ಸೆಮಿಫೈನಲ್‌ನಲ್ಲಿ ಚಾಂಪಿಯನ್ ಇಂಗ್ಲೆಂಡ್‌ ವಿರುದ್ಧ ಸೋತರು.

ತದನಂತರ, ಭಾರತೀಯ ತಂಡದ ಆಯ್ಕೆಗಾರರು ತಂಡವನ್ನು ಕೂಲಂಕಷವಾಗಿ ಪರಿಶೀಲಿಸಿ, ಹಾರ್ದಿಕ್ ಪಾಂಡ್ಯಗೆ ಟಿ20 ತಂಡದ ನಾಯಕತ್ವ ಜವಾಬ್ದಾರಿ ನೀಡಿದರು. ಇದಕ್ಕೂ ಮುನ್ನ ಖಾಯಂ ನಾಯಕ ರೋಹಿತ್ ಶರ್ಮಾ ತಂಡಕ್ಕೆ ಅಲಭ್ಯವಾದಾಗಲೆಲ್ಲಾ ಹಾರ್ದಿಕ್ ಪಾಂಡ್ಯ ಭಾರತದ ಟಿ20 ತಂಡವನ್ನು ಮುನ್ನಡೆಸಿದ್ದರು.

"ನಾನು ಜೂನಿಯರ್ ಕ್ರಿಕೆಟ್‌ನಲ್ಲಿ ಎಂದಿಗೂ ತಂಡವನ್ನು ಮುನ್ನಡೆಸಿದ ಅನುಭವವಿರಲಿಲ್ಲ. ನಾನು 16 ವರ್ಷದೊಳಗಿನವನಾಗಿದ್ದಾಗ ನಾನು ಬರೋಡಾ ತಂಡವನ್ನು ಮುನ್ನಡೆಸಿದ್ದೆ. ನಂತರ ನಾನು ನನ್ನ ಆಟದ ಮೇಲೆ ಗಮನಹರಿಸಬೇಕು ಎಂದು ಎಲ್ಲರೂ ಭಾವಿಸಿದ್ದರು. ಅಂದಿನಿಂದ ನಾನು ನಾಯಕತ್ವದ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ," ಎಂದು ಹಾರ್ದಿಕ್ ಪಾಂಡ್ಯ ತಿಳಿಸಿದರು.

Story first published: Sunday, January 8, 2023, 14:10 [IST]
Other articles published on Jan 8, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+