ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಭಾರತದ ಆಡುವ 11ರ ಬಳಗ ಹೇಗಿರಲಿದೆ?
ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಅವರು ಭಾರತ ತಂಡದ ಇನ್ನಿಂಗ್ಸ್ ತೆರೆಯಲಿದ್ದಾರೆ. ಇನ್ನು ಶಿಖರ್ ಧವನ್ ಅವರನ್ನು ತಂಡದಿಂದ ಕೈಬಿಡುವುದರೊಂದಿಗೆ, ಶುಭಮನ್ ಗಿಲ್ ಅಥವಾ ಇಶಾನ್ ಕಿಶನ್ ನಡುವೆ ಇನ್ನಿಂಗ್ಸ್ ಆರಂಭಿಸುವ ಸ್ಪರ್ಧೆಯಲ್ಲಿದ್ದಾರೆ.
ಬಾಂಗ್ಲಾದೇಶದ ವಿರುದ್ಧದ ಪ್ರದರ್ಶನವನ್ನು ಪರಿಗಣಿಸಿ ರೋಹಿತ್ ಶರ್ಮಾ ಅವರೊಂದಿಗೆ ಇಶಾನ್ ಕಿಶನ್ ಅವರು ಭಾರತದ ಇನ್ನಿಂಗ್ಸ್ ಆರಂಭಿಸುವುದರ ಜೊತೆಗೆ ವಿಕೆಟ್ ಕೀಪಿಂಗ್ ಗ್ಲೌಸ್ ಧರಿಸುವ ಸಾಧ್ಯತೆಯಿದೆ.
ಸೂರ್ಯಕುಮಾರ್ ನಂ.5, ಹಾರ್ದಿಕ್ ಪಾಂಡ್ಯ ನಂ.6
ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವುದರಲ್ಲಿ ಯಾವುದೇ ಸಂದೇಹವಿಲ್ಲ. ಅದೇ ರೀತಿ ಶ್ರೇಯಸ್ ಅಯ್ಯರ್ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಸಜ್ಜಾಗಿದ್ದಾರೆ.
ಇತ್ತೀಚಿಗೆ 50 ಓವರ್ಗಳ ಸ್ವರೂಪದಲ್ಲಿ ಯುವ ಆಟಗಾರ ಶ್ರೇಯಸ್ ಅಯ್ಯರ್ ಭಾರತದ ಅತ್ಯುತ್ತಮ ಬ್ಯಾಟರ್ ಆಗಿದ್ದಾರೆ ಮತ್ತು ಅವರು ಆ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಇದೆ ವೇಳೆ ಸೂರ್ಯಕುಮಾರ್ ಯಾದವ್ ನಂ.5ರಲ್ಲಿ ಬ್ಯಾಟಿಂಗ್ಗೆ ಇಳಿದರೆ, ಹಾರ್ದಿಕ್ ಪಾಂಡ್ಯ ನಂ.6 ರಲ್ಲಿ ಬ್ಯಾಟ್ ಮಾಡುವ ನಿರೀಕ್ಷೆಯಿದೆ. ಹಾರ್ದಿಕ್ ಪಾಂಡ್ಯ ಅವರು ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ನಿರ್ಣಾಯಕ ಪಾತ್ರವನ್ನು ವಹಿಸುತ್ತಾರೆ.
ಅಕ್ಷರ್ ಪಟೇಲ್ 7ನೇ ಸ್ಥಾನದಲ್ಲಿ ಕಣಕ್ಕಿಳಿಯುತ್ತಾರೆ
ಟಿ20 ಸರಣಿಯಲ್ಲಿನ ಅತ್ಯುತ್ತಮ ಪ್ರದರ್ಶನವನ್ನು ಪರಿಗಣಿಸಿ ಅಕ್ಷರ್ ಪಟೇಲ್ ಅವರು ವಾಷಿಂಗ್ಟನ್ ಸುಂದರ್ ಅವರಿಗಿಂತ ಮುನ್ನ 7ನೇ ಸ್ಥಾನದಲ್ಲಿ ಕಣಕ್ಕಿಳಿಯುತ್ತಾರೆ ಎಂದು ನಿರೀಕ್ಷಿಸಲಾಗಿದೆ.
ಕುಲದೀಪ್ ಯಾದವ್ ಕೂಡ ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು ಆಡುವ ಸಾಧ್ಯತೆಯಿದೆ. ಅವರು ಏಕದಿನ ಪಂದ್ಯಗಳಲ್ಲಿ ಯೋಗ್ಯ ಫಾರ್ಮ್ನಲ್ಲಿದ್ದಾರೆ ಮತ್ತು ನಿರ್ಣಾಯಕ ಪಾತ್ರವನ್ನು ವಹಿಸುವ ನಿರೀಕ್ಷೆಯಿದೆ.
ಎಲ್ಲಾ ಮೂರು ಸ್ವರೂಪಗಳಲ್ಲಿ ಬಾಲ್ನೊಂದಿಗೆ ಅಸಾಧಾರಣವಾಗಿರುವ ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ ಮತ್ತು ಅರ್ಶ್ದೀಪ್ ಸಿಂಗ್ ಅವರು ಭಾರತ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವ ನಿರೀಕ್ಷೆ ಇದೆ.
ಶ್ರೀಲಂಕಾ ವಿರುದ್ಧ ಮೊದಲ ಏಕದಿನ ಪಂದ್ಯಕ್ಕೆ ಭಾರತದ ಸಂಭಾವ್ಯ ಆಡುವ 11ರ ಬಳಗ
ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಅರ್ಶ್ದೀಪ್ ಸಿಂಗ್.