
ಹರ್ಮನ್ಪ್ರೀತ್ ಕೌರ್ ನಾಯಕತ್ವದ ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಜೂನ್ 23ರಂದು ಪ್ರಾರಂಭವಾಗುವ ಸೀಮಿತ ಓವರ್ಗಳ ಸರಣಿ ಪ್ರವಾಸಕ್ಕಾಗಿ ಭಾನುವಾರ ಶ್ರೀಲಂಕಾಕ್ಕೆ ಆಗಮಿಸಿದೆ.
ನಿವೃತ್ತಿ ಘೋಷಿಸಿದ ಹಿರಿಯ ಆಟಗಾರ್ತಿ ಮಿಥಾಲಿ ರಾಜ್ ಮತ್ತು ಅನುಭವಿ ವೇಗಿ ಜೂಲನ್ ಗೋಸ್ವಾಮಿ ಅವರಂತಹ ಹಿರಿಯ ಆಟಗಾರರು ಇಲ್ಲದೆ, ಯುವ ಭಾರತ ತಂಡವು ಕ್ರಮವಾಗಿ ಪಲ್ಲೆಕೆಲೆ ಮತ್ತು ದಂಬುಲ್ಲಾದಲ್ಲಿ ಮೂರು ಏಕದಿನ ಮತ್ತು ಅಷ್ಟೇ ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಲಿದೆ.
ಶ್ರೀಲಂಕಾ ಕ್ರಿಕೆಟ್ (ಎಸ್ಎಲ್ಸಿ) ರಮೇಶ್ ಪೊವಾರ್ ತರಬೇತುದಾರರಾಗಿರುವ ಭಾರತ ತಂಡವನ್ನು ಸ್ವಾಗತಿಸಿತು ಮತ್ತು ಅದರ ಸಾಮಾಜಿಕ ಮಾಧ್ಯಮ ಹ್ಯಾಂಡಲ್ಗಳಲ್ಲಿ ಚಿತ್ರಗಳು ಮತ್ತು ದೃಶ್ಯಗಳನ್ನು ಪೋಸ್ಟ್ ಮಾಡಿದೆ.
ಭಾರತೀಯ ಮಹಿಳಾ ಕ್ರಿಕೆಟ್ ತಂಡ ನಿರ್ಗಮಿಸುವ ಮೊದಲು, ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಶಿಬಿರವನ್ನು ನಡೆಸಿತು ಮತ್ತು ಎನ್ಸಿಎ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಅವರೊಂದಿಗೆ ಸಂವಾದ ನಡೆಸಿತು. ಹರ್ಮನ್ಪ್ರೀತ್ ಪ್ರಕಾರ, ತಂಡವನ್ನು ಕಟ್ಟಲು ಈ ಪ್ರವಾಸ ಉತ್ತಮ ಅವಕಾಶವಾಗಿದೆ.

"ನಾವು ನಮ್ಮ ತಂಡದಲ್ಲಿ ಶ್ರಮಿಸುತ್ತಿದ್ದೇವೆ, ನಾವು ಉತ್ತಮ ಸಂಯೋಜನೆಗಳನ್ನು ಹೊಂದಿದ್ದೇವೆ ಮತ್ತು ನಮಗೆ, ಇದು ತಂಡವನ್ನು ಕಟ್ಟಲು ಉತ್ತಮ ಪ್ರವಾಸವಾಗಿದೆ. ಏಕೆಂದರೆ ಮೊದಲ ಬಾರಿಗೆ ನಾವು ನಮ್ಮ ಹಿರಿಯರಿಲ್ಲದೆ ಆಡಲಿದ್ದೇವೆ ಮತ್ತು ನಮಗೆಲ್ಲರಿಗೂ ತಂಡವನ್ನು ನಿರ್ಮಿಸಲು ಉತ್ತಮ ಅವಕಾಶವಿದೆ," ಎಂದು ಹರ್ಮನ್ಪ್ರೀತ್ ಶನಿವಾರ ಹೇಳಿದ್ದಾರೆ.
ಜೂನ್ 23 ರಂದು ಡಂಬುಲ್ಲಾದಲ್ಲಿ ಮೊದಲ ಟಿ20 ಪಂದ್ಯದೊಂದಿಗೆ ಶ್ರೀಲಂಕಾ ಪ್ರವಾಸವು ಪ್ರಾರಂಭವಾಗುತ್ತದೆ.
ಶ್ರೀಲಂಕಾ ಪ್ರವಾಸಕ್ಕೆ ಭಾರತ ಮಹಿಳಾ ಏಕದಿನ ತಂಡ
ಹರ್ಮನ್ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಎಸ್. ಮೇಘನಾ, ದೀಪ್ತಿ ಶರ್ಮಾ, ಪೂನಂ ಯಾದವ್, ರಾಜೇಶ್ವರಿ ಗಾಯಕ್ವಾಡ್, ಸಿಮ್ರಾನ್ ಬಹದ್ದೂರ್, ರಿಚಾ ಘೋಷ್ (ವಿಕೆಟ್ ಕೀಪರ್), ಪೂಜಾ ವಸ್ತ್ರಾಕರ್, ಮೇಘನಾ ಸಿಂಗ್, ರೇಣುಕಾ ಸಿಂಗ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಹರ್ಲೀನ್ ಡಿಯೋಲ್.
ಶ್ರೀಲಂಕಾ ಪ್ರವಾಸಕ್ಕೆ ಭಾರತ ಮಹಿಳಾ ಟಿ20 ತಂಡ
ಹರ್ಮನ್ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಎಸ್ ಮೇಘನಾ, ದೀಪ್ತಿ ಶರ್ಮಾ, ಪೂನಂ ಯಾದವ್, ರಾಜೇಶ್ವರಿ ಗಾಯಕ್ವಾಡ್, ಸಿಮ್ರಾನ್ ಬಹದ್ದೂರ್, ರಿಚಾ ಘೋಷ್ (ವಿಕೆಟ್ ಕೀಪರ್), ಪೂಜಾ ವಸ್ತ್ರಾಕರ್, ಮೇಘನಾ ಸಿಂಗ್, ರೇಣುಕಾ ಸಿಂಗ್ , ಜೆಮಿಮಾ ರೋಡ್ರಿಗಸ್, ರಾಧಾ ಯಾದವ್