
ಬದಲಿ ನಾಯಕನ ನೇಮಕ
ಕೆಎಲ್ ರಾಹುಲ್ ಬಲ ತೊಡೆ ಸಂದಿನ ಗಾಯದಿಂದ ಬಳಲುತ್ತಿರುವ ಕಾರಣ ಚಿಕಿತ್ಸೆಗಾಗಿ ಸರಣಿಯಿಂದ ಹೊರಬಿದ್ದಿದ್ದು, ನೂತನ ನಾಯಕನಾಗಿ ರಿಷಭ್ ಪಂತ್ ಅವರನ್ನು ನೇಮಿಸಲಾಗಿದೆ. ಇನ್ನು ರಿಷಭ್ ಪಂತ್ ಈ ಸರಣಿಗೆ ಪ್ರಕಟವಾಗಿದ್ದ ತಂಡದಲ್ಲಿ ಉಪನಾಯಕನಾಗಿ ಸ್ಥಾನ ಪಡೆದುಕೊಂಡಿದ್ದರು ಹಾಗೂ ಇದೀಗ ರಾಹುಲ್ ಅಲಭ್ಯತೆಯಾದ ಕಾರಣ ನಾಯಕನಾಗಿ ಸರಣಿಯಲ್ಲಿ ಬಡ್ತಿ ಪಡೆದಿದ್ದಾರೆ. ಇನ್ನು ಹಾರ್ದಿಕ್ ಪಾಂಡ್ಯಗೆ ಉಪನಾಯಕನ ಸ್ಥಾನ ನೀಡಲಾಗಿದೆ.

ಅಭ್ಯಾಸದ ವೇಳೆ ಗಾಯಕ್ಕೊಳಗಾಗಿದ್ದ ರಾಹುಲ್
ಕೆಎಲ್ ರಾಹುಲ್ ಟೀಮ್ ಇಂಡಿಯಾವನ್ನು ಈ ಸರಣಿಯಲ್ಲಿ ಮುನ್ನಡೆಸಿ ಯಶಸ್ವಿಯಾಗಿ ಗೆಲುವನ್ನು ಕಾಣುವತ್ತ ಚಿತ್ತ ನೆಟ್ಟು ಅರುಣ್ ಜೇಟ್ಲಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಅಭ್ಯಾಸ ಆರಂಭಿಸಿದ್ದರು. ಆದರೆ, ಕಳೆದ ಸಂಜೆ ಅಭ್ಯಾಸದ ವೇಳೆ ಗಾಯಕ್ಕೊಳಗಾದ ಕೆಎಲ್ ರಾಹುಲ್ ಸರಣಿಯಿಂದ ಹೊರಬಿದ್ದಿದ್ದಾರೆ. ಕೆಎಲ್ ರಾಹುಲ್ಗೆ ಬಲ ತೊಡೆ ಸಂದುಗೆ ತೀವ್ರ ಪೆಟ್ಟು ಬಿದ್ದಿದ್ದು, ಮತ್ತೋರ್ವ ಆಟಗಾರ ಕುಲ್ದೀಪ್ ಯಾದವ್ ಕೂಡ ಗಾಯದ ಸಮಸ್ಯೆಗೊಳಗಾಗಿ ಸರಣಿಯಿಂದ ಹೊರಬಿದ್ದಿದ್ದಾರೆ.

ಬದಲಾದ ಭಾರತ ತಂಡ
ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ನಾಯಕ, ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ ( ಉಪನಾಯಕ ), ವೆಂಕಟೇಶ್ ಅಯ್ಯರ್, ವೈ ಚಾಹಲ್, ಅಕ್ಷರ್ ಪಟೇಲ್, ಆರ್ ಬಿಷ್ಣೋಯ್ , ಭುವನೇಶ್ವರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್
ದ.ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್ಗಿಡಿ, ಆನ್ರಿಚ್ ನಾರ್ಟ್ಜೆ, ವೇಯ್ನ್ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕಗಿಸೊ ರಬಾಡ, ತಬ್ರೈಜ್ ಶಂಬ್ಡರ್, ಟ್ರೈಸ್ಸೆ ಸ್ಟಬ್ಡರ್, ರಸ್ಸಿ ವಾನ್ಡರ್ ಡಸೆನ್ , ಮಾರ್ಕೊ ಜಾನ್ಸೆನ್.


Click it and Unblock the Notifications












