For Quick Alerts
ALLOW NOTIFICATIONS  
For Daily Alerts
 

ಬಿಸಿಸಿಐನ ನಿರ್ಧಾರಕ್ಕೆ ಬೇಸರ ವ್ಯಕ್ತಪಡಿಸಿದ ದಿಗ್ಗಜ ಸುನಿಲ್ ಗವಾಸ್ಕರ್

Ind vs SL: Sunil Gavaskar Disappointed for BCCI Not allowing fans in stadium for Kohli’s 100th Test

ಭಾರತ ಹಾಗೂ ಶ್ರೀಲಂಕಾ ತಂಡಗಳು ಟಿ20 ಸರಣಿಯ ನಂತರ ಇದೀಗ ಟೆಸ್ಟ್ ಸರಣಿಗೆ ಸಜ್ಜಾಗಿದೆ. ಮೊದಲ ಟೆಸ್ಟ್ ಪಂದ್ಯ ಮೊಹಾಲಿಯಲ್ಲಿ ನಡೆಯಲಿದ್ದು ಈ ಪಂದ್ಯದಲ್ಲಿ ಆಡಲು ಭಾರತ ಹಾಗೂ ಶ್ರೀಲಂಕಾ ತಂಡ ಈಗಾಗಲೇ ಮೊಹಾಲಿ ತಲುಪಿದ್ದು ಭರ್ಜರಿ ಸಿದ್ಧತೆಯನ್ನು ನಡೆಸುತ್ತಿದೆ. ಮೊಹಾಲಿಯಲ್ಲಿ ನಡೆಯುತ್ತಿರುವ ಈ ಪಂದ್ಯ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಆಡುತ್ತಿರುವ 100ನೇ ಟೆಸ್ಟ್ ಪಂದ್ಯವಾಗಿದೆ ಎಂಬುದು ಗಮನಾರ್ಹ ಅಂಶ. ಆದರೆ ಈ ಪಂದ್ಯದ ವಿಚಾರವಾಗಿ ಬಿಸಿಸಿಐ ತೆಗೆದುಕೊಂಡಿರುವ ಒಂದು ನಿರ್ಧಾರ ಕ್ರಿಕೆಟ್ ಅಭಿಮಾನಿಗಳಿಗೆ ಮಾತ್ರವಲ್ಲ ದಿಗ್ಗಜ ಆಟಗಾರ ಸುನಿಲ್ ಗವಾಸ್ಕರ್ ಅವರಿಗೂ ಬೇಸರವನ್ನು ಮೂಡಿಸಿದೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಭಾಗವಾಗಿರುವ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಪ್ರೇಕ್ಷಕರಿಗೆ ನಿರ್ಬಂಧವನ್ನು ಹೇರಲಾಗಿದೆ ಕೊರೊನಾವೈರಸ್‌ನ ಕಾರಣದಿಂದಾಗಿ ಮುಚ್ಚಿದ ಬಾಗಿಲುಗಳಲ್ಲಿಯೇ ಈ ಪಂದ್ಯ ನಡೆಯುತ್ತಿದೆ. ವಿರಾಟ್ ಕೊಹ್ಲಿಯ 100ನೇ ಟೆಸ್ಟ್ ಪಂದ್ಯವಾಗಿರುವ ಕಾರಣ ಪ್ರೇಕ್ಷಕರ ಉಪಸ್ಥಿತಿಯಲ್ಲಿ ಈ ಪಂದ್ಯ ನಡೆದಿದ್ದರೆ ಉತ್ತಮವಾಗಿರುತ್ತಿತ್ತು ಎಂಬ ಅಭಿಪ್ರಾಯವನ್ನು ಸಾಕಷ್ಟು ಕ್ರಿಕೆಟ್ ಅಭಿಮಾನಿಗಳು ವ್ಯಕ್ತಪಡಿಸುತ್ತಿದ್ದಾರೆ.

ಬೇಸರ ವ್ಯಕ್ತಪಡಿಸಿದ ಸುನಿಲ್ ಗವಾಸ್ಕರ್

ಬೇಸರ ವ್ಯಕ್ತಪಡಿಸಿದ ಸುನಿಲ್ ಗವಾಸ್ಕರ್

ದಿಗ್ಗಜ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕೂಡ ವಿರಾಟ್ ಕೊಹ್ಲಿಯ ನೂರನೇ ಟೆಸ್ಟ್ ಪಂದ್ಯ ಪ್ರೇಕ್ಷಕರ ಅನುಪಸ್ಥಿತಿಯಲ್ಲಿ ನಡೆಯುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಗವಾಸ್ಕರ್ ಬಿಸಿಸಿಐ ನಿರ್ಧಾರಕ್ಕೆ ಬೇಸರವನ್ನು ವ್ಯಕ್ತಪಡಿಸುತ್ತಲೇ ಈ ರೀತಿಯ ನಿರ್ಧಾರ ಅಗತ್ಯವಾಗಿತ್ತು ಎಂಬ ಮಾತನ್ನು ಕೂಡ ಹೇಳಿಕೊಂಡಿದ್ದಾರೆ. ಈ ನಿರ್ಧಾರ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಅತ್ಯಂತ ಅಗತ್ಯದ ನಿರ್ಧಾರವೂ ಆಗಿದೆ ಎಂದು ಗವಾಸ್ಕರ್ ಹೇಳಿದ್ದಾರೆ. ಸ್ಪೋರ್ಟ್ಸ್ ಟುಡೇಗೆ ನೀಡಿದ ಪ್ರತಿಕ್ರಿಯೆ ಸಂದರ್ಭದಲ್ಲಿ ಗವಾಸ್ಕರ್ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಇದು ಅತ್ಯಂತ ವಿಶೇಷ ಸಂದರ್ಭ

ಇದು ಅತ್ಯಂತ ವಿಶೇಷ ಸಂದರ್ಭ

"100ನೇ ಟೆಸ್ಟ್ ಪಂದ್ಯ ನಿಜಕ್ಕೂ ಅತ್ಯಂತ ವಿಶೇಷವಾದ ಸಂದರ್ಭ. ಬೇಸರದ ಸಂಗತಿಯೆಂದರೆ ಈ ಪಂದ್ಯಕ್ಕೆ ಪ್ರೇಕ್ಷಕರಿಗೆ ಅವಕಾಶವಿಲ್ಲ. ಆದರೆ ಈ ನಿರ್ಧಾರವನ್ನು ಉತ್ತಮ ಕಾರಣಕ್ಕಾಗಿ ತೆಗೆದುಕೊಳ್ಳಲಾಗಿದೆ. ಈ ಪಂದ್ಯ ನಡೆಯುತ್ತಿರುವ ಮೊಹಾಲಿ ಸುತ್ತಮುತ್ತ ಕೊರೊನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿದೆ" ಎಂದು ಸುನಿಲ್ ಗವಾಸ್ಕರ್ ಪ್ರತಿಕ್ರಿಯಿಸಿದ್ದಾರೆ.

ಆಟಗಾರರ ನೈತಿಕ ಸ್ಥೈರ್ಯ ಹೆಚ್ಚಿಸುತ್ತದೆ ಪ್ರೇಕ್ಷಕರ ಉಪಸ್ಥಿತಿ

ಆಟಗಾರರ ನೈತಿಕ ಸ್ಥೈರ್ಯ ಹೆಚ್ಚಿಸುತ್ತದೆ ಪ್ರೇಕ್ಷಕರ ಉಪಸ್ಥಿತಿ

ಇನ್ನು ಈ ಸಂದರ್ಭದಲ್ಲಿ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕ್ರಿಕೆಟಿಗರು ನಟರು ಸೇರಿದಂತೆ ಪ್ರತಿಯೊಬ್ಬರಿಗೂ ಪ್ರೇಕ್ಷಕರ ಉಪಸ್ಥಿತಿ ಎಷ್ಟು ಪ್ರಮುಖವಾಗುತ್ತದೆ ಎಂಬ ಅಂಶವನ್ನು ಒತ್ತಿ ಹೇಳಿದ್ದಾರೆ. "ಪ್ರೇಕ್ಷಕರ ಉಪಸ್ಥಿತಿ ಅದರಲ್ಲೂ ವಿಶೇಷವಾಗಿ ತವರು ಅಂಗಳದ ಅಭಿಮಾನಿಗಳ ಬೆಂಬಲ ಪಂದ್ಯದ ಸಂದರ್ಭದಲ್ಲಿ ಆಟಗಾರರ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ವಿರಾಟ್ ಕೊಹ್ಲಿ ಯಾವಾಗಲೂ ಅಭಿಮಾನಿಗಳ ಉಪಸ್ಥಿತಿಯನ್ನು ಬಹಳ ಇಷ್ಟಪಡುತ್ತಾರೆ. ದುರದೃಷ್ಟವಶಾತ್ ಅವರ ಒಂದು ಮಹತ್ವದ ಮೈಲಿಗಲ್ಲಿನ ಪಂದ್ಯ ಪ್ರೇಕ್ಷಕರಿಲ್ಲದೆ ನಡೆಯುತ್ತಿದೆ" ಎಂದಿದ್ದಾರೆ ಸುನಿಲ್ ಗವಾಸ್ಕರ್.

ಕೊಹ್ಲಿಯ ನೂರನೇ ಟೆಸ್ಟ್ ಶತಕ ನೋಡುವ ಭಾಗ್ಯ ಅಭಿಮಾನಿಗಳಿಗೆ ಇಲ್ಲವಾಯ್ತಾ? | Oneindia Kannada
ಯಾವಾಗ ನಡೆಯಲಿದೆ ಕೊಹ್ಲಿಯ 100ನೇ ಪಂದ್ಯ

ಯಾವಾಗ ನಡೆಯಲಿದೆ ಕೊಹ್ಲಿಯ 100ನೇ ಪಂದ್ಯ

ಭಾರತ ಹಾಗೂ ಶ್ರೀಲಂಕಾ ತಮಡಗಳು ಟಿ20 ಸರಣಿಯಲ್ಲಿ ಮುಖಾಮುಖಿಯಾಗಿದ್ದು ಕಳೆದ ಭಾನುವಾರ ಈ ಸರಣಿಯ ಅಂತಿಮ ಪಂದ್ಯ ಮುಕ್ತಾಯವಾಗಿದೆ. ಈ ಟಿ20 ಸರಣಿಯನ್ನು ಭಾರತ 3-0 ಅಂತರದಿಂದ ವಶಕ್ಕೆ ಪಡೆದಿದೆ. ಇದೀಗ ಎರಡೂ ತಮಡಗಳು ಕೂಡ ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿಯಲಿದ್ದು ಈ ಪಂದ್ಯ ಮುಂದಿನ ಶುಕ್ರವಾರ ಮಾರ್ಚ್ 4ರಂದು ಆರಂಭವಾಗಲಿದೆ. ಟೆಸ್ಟ್ ಸರಣಿಯಲ್ಲಿ ಕೂಡ ಭಾರತ ತಂಡ ಫೇವರೀಟ್ ತಂಡವಾಗಿ ಕಣಕ್ಕಿಳಿಯುತ್ತಿದ್ದು ಆತಿಥೇಯ ತಂಡಕ್ಕೆ ಪ್ರವಾಸಿ ಲಂಕಾ ಯಾವ ರೀತಿಯ ಪ್ರತಿರೋಧವನ್ನು ಒಡ್ಡಲಿದೆ ಎಂಬುದು ಕುತೂಹಲ ಮೂಡಿಸಿದೆ.

Story first published: Tuesday, March 1, 2022, 14:31 [IST]
Other articles published on Mar 1, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+