
ತ್ರಿಪಾಠಿಗೆ ಅವಕಾಶ ಸಿಗುವ ಸಾಧ್ಯತೆ
ರಾಹುಲ್ ತ್ರಿಪಾಠಿ ಇತ್ತೀಚಿನ ದಿನಗಳಲ್ಲಿ ಭಾರತದ ಟಿ20 ಮತ್ತು ಏಕದಿನ ತಂಡಗಳ ಭಾಗವಾಗಿದ್ದಾರೆ. ಆದರೆ, ಅವರು ಇನ್ನೂ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿಲ್ಲ.
ಐಪಿಎಲ್ನಲ್ಲಿ ಸಾಕಷ್ಟು ಅನುಭವ ಹೊಂದಿದ್ದಾರೆ, ರೈಸಿಂಗ್ ಪುಣೆ ಸೂಪರ್ಜೈಂಟ್ಸ್ಗಾಗಿ ಆಡಿದಾಗ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ನಂತರ ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ಗಾಗಿ ಆಡಿದ್ದಾರೆ. 2022ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಪರವಾಗಿ ಆಡಿದ್ದರು.
ಐಪಿಎಲ್ನಲ್ಲಿ 76 ಪಂದ್ಯಗಳಲ್ಲಿ 28 ಸರಾಸರಿ ಮತ್ತು 140 ಸ್ಟ್ರೈಕ್ ರೇಟ್ನೊಂದಿಗೆ 1798 ರನ್ ಗಳಿಸಿದ್ದಾರೆ. ಈಗ ಸನ್ರೈಸರ್ಸ್ ಹೈದರಾಬಾದ್ನೊಂದಿಗೆ, ಅವರು ಕಳೆದ ಋತುವಿನಲ್ಲಿ 158.24 ರ ದರದಲ್ಲಿ 413 ರನ್ ಗಳಿಸಿದರು. ಇದರಿಂದ ಅವರು ಭಾರತ ತಂಡಕ್ಕೆ ಆಯ್ಕೆಯಾಗಲು ಸಹಾಯವಾಯಿತು. ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಅವರು ಆಡುವ ಬಳಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ.

ವೇಗಿ ಶಿವಂ ಮಾವಿ ಪದಾರ್ಪಣೆ ಸಾಧ್ಯತೆ
2018ರಲ್ಲಿ ನಡೆದ ಅಂಡರ್-19 ವಿಶ್ವಕಪ್ನಲ್ಲಿ ಶಿವಂ ಮಾವಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಗಮನ ಸೆಳೆದಿದ್ದರು. 140 ಕಿಲೋ ಮೀಟರ್ ಗಿಂತ ಹೆಚ್ಚಿನ ವೇಗದಲ್ಲಿ ಬೌಲಿಂಗ್ ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ಅದೇ ವರ್ಷದ ಐಪಿಎಲ್ ಹರಾಜಿನಲ್ಲಿ ಅವರನ್ನು ಕೆಕೆಆರ್ 3 ಕೋಟಿ ರುಪಾಯಿ ನೀಡಿ ಖರೀದಿ ಮಾಡಿತ್ತು.
ಫಿಟ್ನೆಸ್, ಗಾಯದ ಸಮಸ್ಯೆಯಿಂದ ಮಾವಿ ನಂತರ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾದರು. 2023ರ ಮಿನಿ ಹರಾಜಿಗೆ ಮುನ್ನ ಕೆಕೆಆರ್ ಅವರನ್ನು ತಂಡದಿಂದ ಬಿಡುಗಡೆ ಮಾಡಿತು, 2023ರ ಮಿನಿಹರಾಜಿನಲ್ಲಿ ಗುಜರಾತ್ ಟೈಟಾನ್ಸ್ 6 ಕೋಟಿ ರುಪಾಯಿ ನೀಡಿ ಖರೀದಿ ಮಾಡಿದೆ.
ಇತ್ತೀಚೆಗೆ ವಿಜಯ್ ಹಜಾರೆ ಟ್ರೋಫಿಯಲ್ಲಿ 7 ಪಂದ್ಯಗಳಲ್ಲಿ 14 ವಿಕೆಟ್ ಪಡೆದು ಗಮನ ಸೆಳೆದಿದ್ದರು. ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗಿದ್ದು, ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ.

ವೇಗದ ಬೌಲರ್ ಮುಕೇಶ್ ಕುಮಾರ್
ಬಾಂಗ್ಲಾದೇಶದ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಬಂಗಾಳ ಮೂಲದ ವೇಗಿ ತಂಡಕ್ಕೆ ಸೇರಿದ್ದರು, ಆಡುವ ಬಳಗದಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಿರಲಿಲ್ಲ. 20 ಲಕ್ಷ ಮೂಲ ಬೆಲೆ ಹೊಂದಿದ್ದ ಅವರು, 2023ರ ಹರಾಜಿನಲ್ಲಿ 5.5 ಕೋಟಿ ರುಪಾಯಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.
ಕಳೆದ ವರ್ಷ ರಣಜಿ ಟ್ರೋಫಿಯಲ್ಲಿ ಐದು ಪಂದ್ಯಗಳಲ್ಲಿ 20 ವಿಕೆಟ್ ಪಡೆದು ಗಮನ ಸೆಳೆದಿದ್ದರು. ನ್ಯೂಜಿಲೆಂಡ್ ಎ ತಂಡದ ವಿರುದ್ಧ ಆಡಿದ ಭಾರತ ಎ ತಂಡದಲ್ಲಿ ಸ್ಥಾನ ಪಡೆದ ಮುಕೇಶ್ ಕುಮಾರ್ 3 ಪಂದ್ಯಗಳಲ್ಲಿ 9 ವಿಕೆಟ್ ಪಡೆದಿದ್ದರು.
ಟೆಸ್ಟ್ ಕ್ರಿಕೆಟ್ನಲ್ಲಿ ಉತ್ತಮ ಪ್ರದರ್ಶನ ನೀಡಿರುವ ಅವರನ್ನು, ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಆಯ್ಕೆ ಮಾಡಲಾಗಿದ್ದು, ಅಲ್ಲೂ ಪ್ರಮುಖ ವಿಕೆಟ್ ಟೇಕರ್ ಆಗುವ ವಿಶ್ವಾಸದಲ್ಲಿದ್ದಾರೆ.


Click it and Unblock the Notifications
