
ಭಾರತ ಹಾಗೂ ಶ್ರೀಲಂಕಾ ನಡುವಿನ ಟಿ20 ಸರಣಿಯ ಮೊದಲ ಪಂದ್ಯ ಆರಂಭವಾಗಿದೆ. ಮೊದಲ ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಲಕ್ನೋದ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಎರಡು ತಂಡಗಳು ಕೂಡ ತೀವ್ರ ಪೈಪೋಟಿಯನ್ನು ನಡೆಸಲಿದೆ.
ಇನ್ನು ಈ ಪಂದ್ಯದಲ್ಲಿ ಭಾರತ ತಂಡದಲ್ಲಿ ಬರಿಬ್ಬರಿ 6 ಬದಲಾವಣೆಯನ್ನು ಮಾಡಿಕೊಳ್ಳಲಾಗಿದೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಭಾಗಿಯಾಗಿದ್ದ ಕೆಲ ಪ್ರಮುಖ ಆಟಗಾರರ ಅಲಭ್ಯತೆ ಹಾಗೂ ಕೆಲ ಆಟಗಾರರು ಸೇರ್ಪಡೆಯಾಗಿರುವ ಕಾರಣ ಈ ಬದಲಾವನೆಗಳು ಆಗಿದೆ. ಇನ್ನು ಯುವ ಆಟಗಾರ ಋತುರಾಜ್ ಗಾಯಕ್ವಾಡ್ ಈ ಪಮದ್ಯದಲ್ಲಿಯೂ ಅವಕಾಶ ಪಡೆದಿಲ್ಲ. ಟಾಸ್ ಸಂದರ್ಬದಲ್ಲಿ ನಾಯಕ ರೋಹಿತ್ ಶರ್ಮಾ ಈ ಬಗ್ಗೆ ಪ್ರಸ್ತಾಪಿಸಿದ್ದು ಋತುರಾಜ್ ಗಾಯಕ್ವಾಡ್ ಈ ಪಮದ್ಯದಲ್ಲಿ ಆಡಬೇಕಾಗಿತ್ತು. ಆದರೆ ಮೊಣಕೈ ಗಾಯಕ್ಕೆ ಒಳಗಾಗಿರುವ ಕಾರಣ ಈ ಪಂದ್ಯದಲ್ಲಿ ಅವರು ಆಡುತ್ತಿಲ್ಲ ಎಂದು ತಿಳಿಸಿದ್ದಾರೆ.
Live ಸ್ಕೋರ್ಕಾರ್ಡ್ ಹೀಗಿದೆ
ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ಧದ ಅಂತಿಮ ಟಿ20 ಪಂದ್ಯದ ಆಡುವ ಬಳಗದಲ್ಲಿ ಇಲ್ಲದ ಆಡು ಆಟಗಾರರು ಈ ಪಂದ್ಯದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬೂಮ್ರಾ, ಯುಜುವೇಂದ್ರ ಚಾಹಲ್ ಹಾಗೂ ದೀಪಕ್ ಹೂಡಾ ಈ ಪಂದ್ಯದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ಇನ್ನು ಈ ಪಂದ್ಯಕ್ಕಾಗಿ ಶ್ರೀಲಂಕಾ ತಂಡ ಕೂಡ ಎರಡು ಬದಲಾವಣೆ ಮಾಡಿಕೊಂಡಿದ್ದು ಚಾಂಡಿಮಲ್ ಹಾಗೂ ವಂಡರ್ಸೆ ಗಾಯದಿಂದ ಈ ಪಂದ್ಯದಲ್ಲಿ ಆಡುತ್ತಿಲ್ಲ. ಅವರ ಬದಲಿಗೆ ಮಹೀಶ್ ತೀಕ್ಷಣ ಹಾಗೂ ಕುಸಾಲ್ ಮೆಂಡಿಸ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್(ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ದೀಪಕ್ ಹೂಡಾ, ರವೀಂದ್ರ ಜಡೇಜಾ, ವೆಂಕಟೇಶ್ ಅಯ್ಯರ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್
ಶ್ರೀಲಂಕಾಪ್ಲೇಯಿಂಗ್ XI: ಪಾತುಮ್ ನಿಸ್ಸಾಂಕ, ಕಮಿಲ್ ಮಿಶ್ರಾ, ಚರಿತ್ ಅಸಲಂಕಾ, ದಿನೇಶ್ ಚಂಡಿಮಲ್(ವಿಕೆಟ್ ಕೀಪರ್), ಜನಿತ್ ಲಿಯಾನಗೆ, ದಸುನ್ ಶನಕಾ(ನಾಯಕ), ಚಾಮಿಕಾ ಕರುಣಾರತ್ನೆ, ಜೆಫ್ರಿ ವಾಂಡರ್ಸೆ, ಪ್ರವೀಣ್ ಜಯವಿಕ್ರಮ, ದುಷ್ಮಂತ ಚಮೀರ, ಲಹಿರು ಕುಮಾರ